Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫಾಝಿಲ್, ಮಸೂದ್ ಗೆ ನಿಮ್ಮಿಂದ ಸಾಂತ್ವನ...

ಫಾಝಿಲ್, ಮಸೂದ್ ಗೆ ನಿಮ್ಮಿಂದ ಸಾಂತ್ವನ ಬೇಡವೇ: ಮುಖ್ಯಮಂತ್ರಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ31 July 2022 7:19 PM IST
share
ಫಾಝಿಲ್, ಮಸೂದ್ ಗೆ ನಿಮ್ಮಿಂದ ಸಾಂತ್ವನ ಬೇಡವೇ: ಮುಖ್ಯಮಂತ್ರಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು, ಜು. 31: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೊಂದು ಬಹಿರಂಗ ಪತ್ರ. ನೀವು ಈ ರಾಜ್ಯದ ಮುಖ್ಯಮಂತ್ರಿ. ನೀವು ಅದೃಷ್ಟದ ಸಿಎಂ. ಬಿಜೆಪಿ ಕಟ್ಟಿದ ಬಿಎಸ್‍ವೈ ಅವರನ್ನು ತುಳಿದು ನೀವು ಸಿಎಂ ಆಗಿದ್ದೀರಿ. ಸದ್ಯ ನೀವು ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ. ಪ್ರವೀಣ್ ಸಾವಿಗೆ ನೀವು ಸ್ಪಂದಿಸಿದ್ದು ಅನುಕರಣೀಯ. ಆದರೆ, ಫಾಝಿಲ್‍ ಹಾಗೂ ಮಸೂದ್‍ಗೆ ನಿಮ್ಮಿಂದ ಕೊಂಚವಾದರೂ ಸಾಂತ್ವನ ಬೇಡವೇ?' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಬೊಮ್ಮಾಯಿಯವರೆ ನೀವು ರಾಜ್ಯದ ಯಜಮಾನನಿದ್ದಂತೆ. ಯಜಮಾನ ಎಲ್ಲರಿಗೂ ಸಲ್ಲುವನಂತಿರಬೇಕು. ನೀವು ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ. ಆದರೆ, ನೀವು ಮಾಡಿದ್ದೇನು? ಪ್ರವೀಣ್ ಮನೆಗೆ ಹೋದಿರಿ, ಸರಕಾರದಿಂದ 25ಲಕ್ಷ ರೂ.ಪರಿಹಾರ ಕೊಟ್ಟಿದ್ದೀರಾ. ಇಲ್ಲಿ ತಕರಾರಿಲ್ಲ. ಆದರೆ, ಹತ್ಯೆಯಾದ ಮಸೂದ್, ಪಾಝಿಲ್ ಮಾಡಿದ ತಪ್ಪೇನು.? ಸತ್ತವರು ಮುಸ್ಲಿಮ್ ಆದರೆ ಅವರು ಪರಿಹಾರಕ್ಕೆ ಅರ್ಹರಲ್ಲವೆ?' ಎಂದು ಕೇಳಿದ್ದಾರೆ.

‘ಬೊಮ್ಮಾಯಿಯವರೆ, ಸಾವಿನ ಮನೆಯ ಸಂಕಟ ಅನುಭವಿಸಿದ್ದವರಿಗೆ ಗೊತ್ತು. ದುಡಿಯುವ ಮಗ, ವಯಸ್ಸಿಗೆ ಬಂದ ಮಗ ಕಣ್ಣೆದುರೇ ಶವವಾಗುವಾಗ ಅದನ್ನು ಭರಿಸುವ ಶಕ್ತಿ ಯಾವ ತಂದೆ-ತಾಯಿಗೂ ಇರುವುದಿಲ್ಲ. ‘ಪುತ್ರ ಶೋಕಂ ನಿರಂತರಂ'. ಇದು ಸಾರ್ವಕಾಲಿಕ ಸತ್ಯ. ಅದು ಹಿಂದೂ ಇರಲಿ, ಮುಸ್ಲಿಮರೇ ಇರಲಿ. ದಯವಿಟ್ಟು ಇದನ್ನು ಅರ್ಥ ಮಾಡಿಕೊಳ್ಳಿ' ಎಂದು ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.

‘ಬಸವರಾಜ ಬೊಮ್ಮಾಯಿಯವರೆ, ನಿಮ್ಮ ಭಾಗದಲ್ಲಿ ಪಿಂಜಾರ ಸಮುದಾಯದ ಮುಸ್ಲಿಮರಿದ್ದಾರೆ. ನಿಮ್ಮಲ್ಲಿ ನಡೆಯುವ ಗಣೇಶೋತ್ಸವವಾಗಲಿ, ಉರುಸ್ ಆಗಲಿ ಅಲ್ಲಿ ಹಿಂದೂ-ಮುಸಲ್ಮಾನರ ಪರಸ್ಪರ ಭಾಗವಹಿಸುವಿಕೆಯಿದೆ, ಸೌರ್ಹಾದತೆಯಿದೆ. ಈ ಹಿಂದೆ ಕರಾವಳಿಯೂ ಭಾವೈಕ್ಯತೆಯ ನಾಡಾಗಿತ್ತು. ಕರಾವಳಿಯಲ್ಲಿ ಮಾಪಿಳ್ಳ ಮುಸಲ್ಮಾನರು, ಹಿಂದೂಗಳು ಒಟ್ಟಾಗಿಯೇ ಇದ್ದರು. ಈ ಸಂಬಂಧಕ್ಕೆ ಹುಳಿ ಹಿಂಡಿದ್ಯಾರು?' ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

‘ಬೊಮ್ಮಾಯಿಯವರೆ, ಸೌಹಾರ್ದೆತೆಯಿಂದಿದ್ದ ಕರಾವಳಿ ಇಂದು ಕೋಮುದಳ್ಳುರಿಯ ನೆಲವಾಗಿದ್ದಕ್ಕೆ ಕಾರಣ ಯಾರು? ಕರಾವಳಿಯನ್ನು ಹಿಂದೂ ಪ್ರಯೋಗ ಶಾಲೆ ಮಾಡಿದ್ದು ಯಾರು? ಕರಾವಳಿಯಲ್ಲಿ ಸಂಘಪರಿವಾರ ಮತ್ತು ಪಿಎಫ್‍ಐ ಬೆಳೆಯಲು ಕಾರಣ ಯಾರು?ಉತ್ತರ ನಿಮ್ಮ ಬಳಿಯೇ ಇದೆ. ನೀವು ಬಿತ್ತಿದ್ದೇ ಈಗ ಫಲವಾಗಿ ಸಿಗುತ್ತಿರುವುದಲ್ಲವೆ? ನೀವು ಜನತಾ ಪರಿವಾರದ ಹಿನ್ನಲೆಯವರು. ನಿಮಗೆ ಈ ಸೂಕ್ಷ್ಮ ಅರ್ಥವಾಗಿರಬೇಕೆಂದು ಭಾವಿಸಿದ್ದೇನೆ'
-ದಿನೇಶ್ ಗುಂಡೂರಾವ್, ಕೆಪಿಸಿಸಿ ಮಾಜಿ ಅಧ್ಯಕ್ಷ

2
ಬೊಮ್ಮಾಯಿಯವರೆ ನೀವು ಈ ರಾಜ್ಯದ ಯಜಮಾನನಿದ್ದಂತೆ.
ಯಜಮಾನ ಎಲ್ಲರಿಗೂ ಸಲ್ಲುವನಂತಿರಬೇಕು.
ಆದರೆ ನೀವು ಮಾಡಿದ್ದೇನು? ಪ್ರವೀಣ್ ಮನೆಗೆ ಹೋದಿರಿ, ಸರ್ಕಾರದಿಂದ 25 ಲಕ್ಷ ಪರಿಹಾರ ಕೊಟ್ಟಿದ್ದೀರಾ. ಇಲ್ಲಿ ತಕರಾರಿಲ್ಲ. ಆದರೆ‌ ಹತ್ಯೆಯಾದ ಮಸೂದ್, #Faazil ಮಾಡಿದ ತಪ್ಪೇನು?
ಸತ್ತವರು ಮುಸ್ಲಿಂರಾದರೆ ಅವರು ಪರಿಹಾರಕ್ಕೆ ಅರ್ಹರಲ್ಲವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 31, 2022

4
ಬೊಮ್ಮಾಯಿಯವರೆ, ನಿಮ್ಮ ಭಾಗದಲ್ಲಿ ಪಿಂಜಾರ ‌ಮುಸ್ಲಿಂರಿದ್ದಾರೆ.‌
ನಿಮ್ಮಲ್ಲಿ ಗಣೇಶೋತ್ಸವವಾಗಲಿ,‌ ಉರುಸ್ ಆಗಲಿ ಅಲ್ಲಿ ಹಿಂದೂ ಮುಸಲ್ಮಾನರ ಪರಸ್ಪರ‌ ಭಾಗವಹಿಸುವಿಕೆಯಿದೆ.
ಈ ಹಿಂದೆ ಕರಾವಳಿಯೂ‌ ಭಾವೈಕ್ಯತೆಯ ನಾಡಾಗಿತ್ತು.
ಕರಾವಳಿಯಲ್ಲಿ ಮಾಪಿಳ್ಳ ಮುಸಲ್ಮಾನರು, ಹಿಂದೂಗಳು ಒಟ್ಟಾಗಿಯೇ ಇದ್ದರು.
ಈ ಸಂಬಂಧಕ್ಕೆ ಹುಳ್ಳಿ ಹಿಂಡಿದ್ಯಾರು.?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 31, 2022

5
ಬೊಮ್ಮಾಯಿಯವರೆ, ಸೌಹಾರ್ದೆತೆಯಿಂದಿದ್ದ ಕರಾವಳಿ ಇಂದು ಕೋಮುದಳ್ಳುರಿಯ ನೆಲವಾಗಿದ್ದಕ್ಕೆ ಕಾರಣ ಯಾರು?
ಸಂಘ ಪರಿವಾರ ಹಾಗು PFIಅಂತ ಕೋಮು ಸಂಘಟನೆಗಳು ಇದಕ್ಕೆ ಕಾರಣವಲ್ಲವೆ?
ನೀವು ಬಿತ್ತಿದ್ದೇ ಈಗ‌ ಫಲವಾಗಿ ಸಿಗುತ್ತಿರುವುದಲ್ಲವೆ?
ನೀವು ಜನತಾ ಪರಿವಾರದ ಹಿನ್ನಲೆಯವರು.
ನಿಮಗೆ ‌ಈ ಸೂಕ್ಷ್ಮ ಅರ್ಥವಾಗಿರಬೇಕೆಂದು ಭಾವಿಸಿದ್ದೇನೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X