Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇಡಿಕೆ ಈಡೇರಿಸಲು ಕೇಂದ್ರ ಸರಕಾರ ವಿಫಲ:...

ಬೇಡಿಕೆ ಈಡೇರಿಸಲು ಕೇಂದ್ರ ಸರಕಾರ ವಿಫಲ: ಪಂಜಾಬ್, ಹರ್ಯಾಣದಲ್ಲಿ ರೈತರಿಂದ ರಸ್ತೆ, ರೈಲು ತಡೆ

ವಾರ್ತಾಭಾರತಿವಾರ್ತಾಭಾರತಿ31 July 2022 11:41 PM IST
share
ಬೇಡಿಕೆ ಈಡೇರಿಸಲು ಕೇಂದ್ರ ಸರಕಾರ ವಿಫಲ: ಪಂಜಾಬ್, ಹರ್ಯಾಣದಲ್ಲಿ ರೈತರಿಂದ ರಸ್ತೆ, ರೈಲು ತಡೆ

ಚಂಡಿಗಢ, ಜು. 31: ಪ್ರಸ್ತುತ ಹಿಂಪಡೆಯಲಾದ ಕೃಷಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭ ನೀಡಿದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ಪಂಜಾಬ್ ಹಾಗೂ ಹರ್ಯಾಣದ ವಿವಿಧ ಸ್ಥಳಗಳಲ್ಲಿ ರೈತರು ರವಿವಾರ ರೈಲು ಹಾಗೂ ವಾಹನ ಸಂಚಾರಕ್ಕೆ ಕೂಡ ತಡೆ ಒಡ್ಡಿದರು.

ಪಂಜಾಬ್‌ನಲ್ಲಿ ಮುಷ್ಕರದ ಕಾರಣಕ್ಕೆ ಭಾರತೀಯ ರೈಲ್ವೆಯ ಫಿರೋಝ್‌ಪುರ ವಿಭಾಗ ಹಲವು ರೈಲುಗಳನ್ನು ರದ್ದುಪಡಿಸಿತು ಅಥವಾ ಪ್ರಯಾಣ ಸಮಯವನ್ನು ಮರು ನಿಗದಿಪಡಿಸಿತು. ಇದರ ಪರಿಣಾಮ ಅಸಂಖ್ಯಾತ ಪ್ರಯಾಣಿಕರು ತೊಂದರೆಗೆ ಒಳಗಾದರು. 
ಸಂಚಾರ ರದ್ದುಪಡಿಸಲಾದ 5 ರೈಲುಗಳಲ್ಲಿ ಅಮೃತಸರ-ಪಠಾಣ್‌ಕೋಟ್, ಅಮೃತಸರ-ಕ್ವಾಡಿಯನ್, ಪಠಾಣ್‌ಕೋಟ್-ವೆರ್ಕಾ  ರೈಲುಗಳು ಸೇರಿವೆ. ‌

ಸಮಯ ಮರು ನಿಗದಿ ಮಾಡಲಾದ 8 ರೈಲುಗಳಲ್ಲಿ ಅಮೃತಸರ-ಜಯನಗರ್, ಅಮೃತಸರ-ಸಿಯಾಲ್‌ದಾಹ್, ಶ್ರೀಮಾತಾ ವೈಷ್ಣೋ ದೇವಿ ಕಾತ್ರಾ-ಹೊಸದಿಲ್ಲಿ, ಅಮೃತಸರ-ಹೊಸದಿಲ್ಲಿ ಹಾಗೂ ಅಮೃತಸರ-ಅಜ್ಮೀರ್ ಎಕ್ಸ್‌ಪ್ರೆಸ್‌ಗಳು ಸೇರಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

6 ಜಿಲ್ಲೆಗಳ 8 ಟೋಲ್ ಪ್ಲಾಝಾಗಳಲ್ಲಿ ಹಾಗೂ ಮಲ್ಲನಪುರದ ಲುದಿಯಾನ-ಫಿರೋಝ್‌ಪುರ ಹೆದ್ದಾರಿ ಸೇರಿದಂತೆ 10 ಹೆದ್ದಾರಿಗಳಲ್ಲಿ ರೈತರು ಧರಣಿ ನಡೆಸಿದ್ದಾರೆ. ಬಠಿಂಡಾ, ಬುಧ್ಲಾದಾ, ಮಾಲೇರ್‌ಕೋಟ್ಲಾದಲ್ಲಿ ರೈಲು ಹಳಿಗಳಲ್ಲಿ ಕುಳಿತು ಧರಣಿ ನಡೆಸಿದ್ದಾರೆ ಎಂದು ಬಿಕೆಯು (ಏಕ್ತಾ ಉಗ್ರಹಾನ್) ಪ್ರಧಾನ ಕಾರ್ಯದರ್ಶಿ ಸುಖ್‌ದೇವ್ ಸಿಂಗ್ ಕೊಕ್ರಿಕಾಲನ್ ಅವರು ಹೇಳಿದ್ದಾರೆ.

ನೆರೆಯ ಹರ್ಯಾಣದ ಹಿಸಾರ್, ಜಜ್ಜಾರ್, ಬಹಾದೂರ್‌ಗಢ, ಟೊಹಾನ, ಸೋನಿಪತ್ ಹಾಗೂ ಕರ್ನಲ್ ಸೇರಿದಂತೆ   ಹಲವು ಸ್ಥಳಗಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರಕಾರದ ಪ್ರತಿಕೃತಿ ದಹಿಸಿದ್ದಾರೆ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಹಿಸಾರ್‌ನಲ್ಲಿ ಐದು ಟೋಲ್ ಪ್ಲಾಝಾಗಳಲ್ಲಿ ರೈತರು ಪ್ರತಿಭಟನೆ ನಡೆಸಿದರು ಹಾಗೂ ಕೇಂದ್ರ ಸರಕಾರದ ಪ್ರತಿಕೃತಿಗಳನ್ನು ದಹಿಸಿದರು. ಸೋನಿಪತ್‌ನಲ್ಲಿ ರೈತರು ಪ್ರತಿಭಟನಾ ರ್ಯಾಲಿ ನಡೆಸಿದರು ಹಾಗೂ ಕೇಂದ್ರ ಸರಕಾರದ ಪ್ರತಿಕೃತಿ ದಹಿಸಿದರು. ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಸರಕಾರವನ್ನು ಆಗ್ರಹಿಸಿದರು.

ಕರ್ನಾಲ್‌ನ ಟೋಲ್ ಪ್ಲಾಝಾದಲ್ಲಿ ಕೂಡ ರೈತರು ಪ್ರತಿಭಟನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X