Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶವೇ ಅಪಹಾಸ್ಯಕ್ಕೀಡಾಗಿತ್ತು: ಮಾಜಿ...

ದೇಶವೇ ಅಪಹಾಸ್ಯಕ್ಕೀಡಾಗಿತ್ತು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತಮಿಳುನಾಡು ರಾಜ್ಯಪಾಲರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 Aug 2022 1:27 PM IST
share
ದೇಶವೇ ಅಪಹಾಸ್ಯಕ್ಕೀಡಾಗಿತ್ತು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತಮಿಳುನಾಡು ರಾಜ್ಯಪಾಲರ ಆಕ್ರೋಶ

ಕೊಚ್ಚಿ: ಹಿಂಸೆಗೆ ಶೂನ್ಯ ಸಹಿಷ್ಣುತೆ ಹೊಂದಿರುವ ಭಾರತದ ನಿಲುವನ್ನು ಪುನರುಚ್ಛರಿಸಿರುವ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ, 26/11 ಮುಂಬೈ ದಾಳಿ 2008ರಲ್ಲಿ ನಡೆದ ಕೆಲವೇ ತಿಂಗಳುಗಳಲ್ಲಿ ಪಾಕಿಸ್ತಾನದ ಜೊತೆಗೆ ಉಗ್ರವಾದಕ್ಕೆ ಸಂಬಂಧಿಸಿದ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಕ್ಕಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಕಿಡಿಕಾರಿದ್ದಾರೆ.

ಕೊಚ್ಚಿಯಲ್ಲಿ ರವಿವಾರ "ಆಂತರಿಕ ಭದ್ರತೆಗೆ ಸಮಕಾಲೀನ ಸವಾಲುಗಳು" ಎಂಬ ವಿಚಾರಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.

"26/11 ಮುಂಬೈ ಉಗ್ರ ದಾಳಿಗಳು ನಡೆದಾಗ ಇಡೀ ದೇಶ ಆಘಾತಗೊಂಡಿತ್ತು,. ಕೆಲವೇ ಕೆಲವು ಉಗ್ರರಿಂದಾಗಿ ದೇಶ ಬಹಳಷ್ಟು ನೋವನ್ನು ಅನುಭವಿಸಿತ್ತು. ಆದರೆ ಈ ದಾಳಿಗಳು ನಡೆದ 9 ತಿಂಗಳಲ್ಲಿಯೇ ಎರಡೂ ದೇಶಗಳು ಉಗ್ರವಾದದಿಂದ ಸಂತ್ರಸ್ತ ದೇಶಗಳು ಎಂಬ ಜಂಟಿ ಹೇಳಿಕೆಗೆ ಆಗಿನ ಭಾರತದ ಮತ್ತು ಪಾಕಿಸ್ತಾನ ಪ್ರಧಾನಿಗಳು ಸಹಿ ಹಾಕಿದ್ದರು" ಎಂದರು.

"ನಮಗೆ ಶ್ರತುಬೋಧ್ ಇದೆಯೇ? ಪಾಕಿಸ್ತಾನ ಒಂದು ಸ್ನೇಹಿತ ರಾಷ್ಟ್ರವೇ ಅಥವಾ ವೈರಿಯೇ? ಇದು ಸ್ಪಷ್ಟವಾಗಬೇಕಿದೆ. ನೀವು ನಡುವಿನ ಜಾಗದಲ್ಲಿರಲು ಬಯಸಿದರೆ ಆಗ ಗೊಂದಲವಿರುತ್ತದೆ" ಎಂದು ರಾಜ್ಯಪಾಲರು ಹೇಳಿದರು.

ಈಗಿನ ಕೇಂದ್ರ ಸರಕಾರ ನಡೆಸಿದ್ದ ಸರ್ಜಿಕಲ್ ದಾಳಿಯನ್ನು ಶ್ಲಾಘಿಸಿದ ಅವರು "ಪುಲ್ವಾಮ ದಾಳಿಯ ನಂತರ ನಾವು ಬಾಲಾಕೋಟ್‍ನಲ್ಲಿ ಪಾಕಿಸ್ತಾನಕ್ಕೆ ನಮ್ಮ ವಾಯುಬಲ ಬಳಸಿ ತಿರುಗೇಟು ನೀಡಿದೆವು. ನೀವು ಉಗ್ರವಾದದ ಕೃತ್ಯ ನಡೆಸಿದರೆ ನೀವು ಬೆಲೆ ತೆರಬೇಕೆಂಬ ಸಂದೇಶ ಅದಾಗಿತ್ತು" ಎಂದು ಹೇಳಿದರು.

"ಮನಮೋಹನ್ ಸಿಂಗ್ ಆಡಳಿತದಲ್ಲಿ ನಮ್ಮ ಆಂತರಿಕ ಭದ್ರತೆಗೆ ಮಾವೋವಾದಿ ಹಿಂಸಾಚಾರ ದೊಡ್ಡ ಸವಾಲಾಗಿತ್ತು. ಮಧ್ಯ ಭಾರತದ 185 ಜಿಲ್ಲೆಗಳಿಗೆ ಅದು ಹರಡಿತ್ತು. ಜನರು ಕೆಂಪು ಕಾರಿಡಾರ್ ಬಗ್ಗೆ ಮಾತನಾಡುತ್ತಿದ್ದರು.  ಪರಿಸ್ಥಿತಿ ಆತಂಕಕಾರಿಯಾಗಿತ್ತು. ಇಂದು ಈ ಮಾವೋವಾದಿಗಳು 8 ಜಿಲ್ಲೆಗಳಿಗಿಂತಲೂ ಕಡಿಮೆ ಪ್ರದೇಶದಲ್ಲಿ ಹರಡಿಕೊಂಡಿದ್ದಾರೆ" ಎಂದು ಅವರು ಹೇಳಿಕೊಂಡರು.

ಕಾಶ್ಮೀರದ ಬಗ್ಗೆ ಮಾತನಾಡಿದ ಅವರು "ಹಿಂಸೆಗೆ ಶೂನ್ಯ ಸಹಿಷ್ಣುತೆ ಇದೆ. ಇದು ಕಠೋರ ಎಂದು ಅನಿಸಿದರೂ ಬಂದೂಕು ಬಳಸುವವರನ್ನು ಬಂದೂಕಿನಿಂದಲೇ ನಿಭಾಯಿಸಬೇಕು. ದೇಶದ ಏಕತೆ ಮತ್ತು ಸಮಗ್ರತೆಯ ವಿರುದ್ಧ ಮಾತನಾಡುವವರ ವಿರುದ್ಧ ಸಂಧಾನವಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಶರಣಾಗತಿಗೆ ಹೊರತುಪಡಿಸಿ ಯಾವುದೇ ತೀವ್ರಗಾಮಿ ಗುಂಪಿನೊಂದಿಗೆ ಮಾತುಕತೆಗಳನ್ನು ನಡೆದಿಲ್ಲ" ಎಂದು ರಾಜ್ಯಪಾಲರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X