Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ಳಾರೆಯಲ್ಲಿ ಅತೃಪ್ತರಿಂದ ನಳಿನ್‌ಗೆ...

ಬೆಳ್ಳಾರೆಯಲ್ಲಿ ಅತೃಪ್ತರಿಂದ ನಳಿನ್‌ಗೆ ತಡೆ, ಇದರ ಹಿಂದೆ ಷಡ್ಯಂತ್ರ: ಜಗದೀಶ ಶೇಣವ

"ಬಿಜೆಪಿಯ ನಿಜವಾದ ಕಾರ್ಯಕರ್ತರು ಹೀಗೆ ಮಾಡಿರಲಾರರು"

ವಾರ್ತಾಭಾರತಿವಾರ್ತಾಭಾರತಿ1 Aug 2022 4:07 PM IST
share
ಬೆಳ್ಳಾರೆಯಲ್ಲಿ ಅತೃಪ್ತರಿಂದ ನಳಿನ್‌ಗೆ ತಡೆ, ಇದರ ಹಿಂದೆ ಷಡ್ಯಂತ್ರ: ಜಗದೀಶ ಶೇಣವ

ಮಂಗಳೂರು, ಆ.1: ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಕಾರನ್ನು ತಡೆದು ದಿಗ್ಬಂಧನ ಹಾಕುವ ಕೆಲಸ ಆಕಾಂಕ್ಷಿಗಳು, ಅತೃಪ್ತರು, ಅವಕಾಶ ವಂಚಿತರಿಂದ ಆಗಿದೆಯೇ ಹೊರತು ಬಿಜೆಪಿಯ ನಿಜವಾದ ಕಾರ್ಯಕರ್ತರಿಂದ ಅಲ್ಲ ಎಂದು ದ.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ಯೆಯಾದ ಪ್ರವೀಣ್ ನೆಟ್ಟಾರ್ ಮನೆಗೆ ತೆರಳುವಾಗ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸೇರಿದಂತೆ ಇತರೆ ಶಾಸಕರಿದ್ದರೂ ಕೇವಲ ನಳಿನ್ ಕುಮಾರ್ ಅವರನ್ನೇ ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ಷಡ್ಯಂತ್ರವಿದೆ ಎಂದರು.

ಪ್ರವೀಣ್ ಹತ್ಯೆಯಾದ ದಿನ ನಳಿನ್ ಕುಮಾರ್ ತುರ್ತು ಕಾರ್ಯನಿಮಿತ್ತ ದಿಲ್ಲಿಗೆ ತೆರಳಿದ್ದರು. ಕೆಲಸ ಮುಗಿಸಿ ಅಲ್ಲಿಂದ ಬರುವಾಗ ತಡವಾಗಿದೆ. ಮಂಗಳೂರಿಗೆ ಬಂದ ತಕ್ಷಣ ಅವರು ಬೆಳ್ಳಾರೆಗೆ ತೆರಳಿದ್ದರು. ಅವರ ಜೊತೆಗೆ ಸುನೀಲ್ ಕುಮಾರ್ ಸೇರಿದಂತೆ ಇತರ ಜನಪ್ರತಿನಿಧಿಗಳೂ ಇದ್ದರು. ಆದರೆ ಬೆಳ್ಳಾರೆಗೆ ತೆರಳಿದಾಗ ಪರಿಸ್ಥಿತಿ ಉಲ್ಬಣಗೊಂಡಿತ್ತು. ಅಲ್ಲಿ ನಳಿನ್‌ ಒಬ್ಬರನ್ನೇ ಟಾರ್ಗೆಟ್ ಮಾಡಲಾಯಿತು. ಬಿಜೆಪಿಯ ನಿಜವಾದ ಕಾರ್ಯಕರ್ತರು ಹೀಗೆ ಮಾಡಿರಲಾರರು. ನಳಿನ್ ಕಳೆದ ಹಲವು ವರ್ಷಗಳಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕಷ್ಟಕರ ಸ್ಥಿತಿಯಲ್ಲೂ ಸಂಘಟನೆ ಕಟ್ಟಲು ಶ್ರಮಿಸಿದವರು. ಇದು ಈಗಿನ ಯುವ ಕಾರ್ಯಕರ್ತರಿಗೆ ತಿಳಿದಿಲ್ಲ. ಅವರಿಗೆ ಈ ರೀತಿ ತಡೆ ಒಡ್ಡಿದ ರೀತಿ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಕ್ತಾರರಾದ ರವಿಶಂಕರ ಮಿಜಾರು, ರಾಧಾಕೃಷ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಸಂಯೋಜಕ ರಂದೀಪ್ ಕಾಂಚನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X