Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್ ಶಾಸಕರಿಗೆ 49 ಲಕ್ಷ ನೀಡಿದ್ದ...

ಜಾರ್ಖಂಡ್ ಶಾಸಕರಿಗೆ 49 ಲಕ್ಷ ನೀಡಿದ್ದ ಕೊಲ್ಕತ್ತಾ ವ್ಯಾಪಾರಿ: ಬಂಗಾಳ ಸಿಐಡಿ

ವಾರ್ತಾಭಾರತಿವಾರ್ತಾಭಾರತಿ2 Aug 2022 7:59 AM IST
share
ಜಾರ್ಖಂಡ್ ಶಾಸಕರಿಗೆ 49 ಲಕ್ಷ ನೀಡಿದ್ದ ಕೊಲ್ಕತ್ತಾ ವ್ಯಾಪಾರಿ: ಬಂಗಾಳ ಸಿಐಡಿ

ಕೊಲ್ಕತ್ತಾ/ ರಾಂಚಿ: ಅಪಾರ ಪ್ರಮಾಣದ ನಗದು ಸಾಗಿಸುತ್ತಿದ್ದ ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರ ಬಂಧನ ಪ್ರಕರಣ ಇದೀಗ ಹೊಸ ತಿರುವು ಪಡೆದಿದ್ದು, ಕೊಲ್ಕತ್ತಾ ಮೂಲದ ವ್ಯಾಪಾರಿಯೊಬ್ಬರು, ತಮ್ಮ ಸಹಚರನ ಮೂಲಕ 49 ಲಕ್ಷ ರೂಪಾಯಿಯನ್ನು ಹಸ್ತಾಂತರಿಸಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಬಂಗಾಳ ಸಿಐಡಿ ಹೇಳಿದೆ.

ಜಾರ್ಖಂಡ್‍ನಲ್ಲಿ ಹೇಮಂತ್ ಸೊರೇನ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸುವ ಸಂಚಿಗಾಗಿ ಈ ಹಣ ನೀಡಲಾಗಿತ್ತು ಎಂಬ ಶಂಕೆ ಇದೀಗ ಬಲವಾಗಿದೆ. ಕೊಲ್ಕತ್ತಾ ಪೊಲೀಸ್ ಕೇಂದ್ರ ಕಚೇರಿಯ ಎದುರು ಒಂದು ಸ್ಥಳದಲ್ಲಿ ಶಾಸಕರ ಪರವಾಗಿ ವ್ಯಕ್ತಿಯೊಬ್ಬ 49 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಪೊಲೀಸರು ಭೇಧಿಸಿದರು ಎಂದು ಸಿಐಡಿ ಪ್ರಕಟಿಸಿದೆ. ಆ ಸಂದರ್ಭದಲ್ಲಿ ಶಾಸಕರು ಮೂರು ಕಿಲೋಮೀಟರ್ ದೂರದ ಸದಾರ್ ಬೀದಿಯ ಅತಿಥಿಗೃಹದಲ್ಲಿ ಇದ್ದರು ಎಂದು ಹೇಳಲಾಗಿದೆ.

ಆರೋಪಿ ವ್ಯಾಪಾರಿ ಇದೀಗ ತಲೆ ಮರೆಸಿಕೊಂಡಿದ್ದು, ಈತನಿಂದ ಹಣವನ್ನು ಪಡೆದುಕೊಳ್ಳುವಂತೆ ಗುವಾಹತಿಯ ಪ್ರಮುಖ ರಾಜಕಾರಣಿಯೊಬ್ಬರು ಶಾಸಕರಿಗೆ ಸೂಚಿಸಿದ್ದರು ಎಂದು ಸಿಐಡಿ ಮೂಲಗಳು ಹೇಳಿವೆ. ನಗದು ತಲುಪಿದ ಮೇಲೆ ಮೂವರು ಶಾಸಕರು ಕೊಲ್ಕತ್ತಾದಿಂದ ಹೊರಟಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರನ್ನು ತಡೆಯಲಾಯಿತು ಎಂದು ಮೂಲಗಳು ವಿವರಿಸಿವೆ.

ಜಮತಾರಾ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ, ಖಿಜ್ರಿ ಕಾಂಗ್ರೆಸ್ ಶಾಸಕ ರಾಜೇಶ್ ಕಛಪ್ ಹಾಗೂ ಕೊಲೇಬಿರಾ ಶಾಸಕ ನಮನ್ ಬಿಕ್ಸಲ್ ಕೊಂಗಾರಿಯವರನ್ನು ಹಲವು ಬಾರಿ ಪ್ರಶ್ನಿಸಿದಾಗ ಮತ್ತು ಸಂಬಂಧಪಟ್ಟ ಸಿಸಿಟಿವಿ ದೃಶ್ಯಾವಳಿಯ ತುಣುಕಿನಿಂದ ಆ ಸ್ಥಳದಲ್ಲಿ ಹಣ ಪಡೆದಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಪರಿಸ್ಥಿತಿಯ ವಿವರ ಪಡೆಯಲು ಜಾರ್ಖಂಡ್ ಪೊಲೀಸ್ ತಂಡ ಕೊಲ್ಕತ್ತಾಗೆ ಭೇಟಿ ನೀಡಲಿದೆ.

ಕಛಪ್ ಹಾಗೂ ಅನ್ಸಾರಿ ಜುಲೈ 20ರಂದು ಗುವಾಹತಿಗೆ ಭೇಟಿ ನೀಡಿದ್ದರು. ಬಳಿಕ ಜುಲೈ 29ರಂದು ಮತ್ತೊಮ್ಮೆ ಹೋಗಿದ್ದರು. ಆದಿವಾಸಿ ಕಾರ್ಯಕ್ರಮವೊಂದಕ್ಕೆ ಸೀರೆ ಮತ್ತು ಜೆರ್ಸಿಗಳನ್ನು ಖರೀದಿಸುವ ಸಲುವಾಗಿ ಕೊಲ್ಕತ್ತಾಗೆ ಹೋಗುವುದಾಗಿ ಸಹೋದ್ಯೋಗಿಗಳಿಗೆ ಹೇಳಿ ತೆರಳಿದ್ದರು ಎನ್ನುವುದು ತನಿಖೆಯಿಂದ ತಿಳಿದುಬಂದಿದೆ ಎಂದು timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X