Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾರೀ ಮಳೆಯಿಂದ ಉತ್ತರ ಕನ್ನಡದಲ್ಲಿ...

ಭಾರೀ ಮಳೆಯಿಂದ ಉತ್ತರ ಕನ್ನಡದಲ್ಲಿ ಸಂಚಾರದಲ್ಲಿ ವ್ಯತ್ಯಯ; ಮತ್ತೆ ಯಥಾಸ್ಥಿತಿಗೆ ಬಂದ ಕೊಂಕಣ ರೈಲುಗಳ ಸಂಚಾರ

ವಾರ್ತಾಭಾರತಿವಾರ್ತಾಭಾರತಿ2 Aug 2022 8:11 PM IST
share
ಭಾರೀ ಮಳೆಯಿಂದ ಉತ್ತರ ಕನ್ನಡದಲ್ಲಿ ಸಂಚಾರದಲ್ಲಿ ವ್ಯತ್ಯಯ; ಮತ್ತೆ ಯಥಾಸ್ಥಿತಿಗೆ ಬಂದ ಕೊಂಕಣ ರೈಲುಗಳ ಸಂಚಾರ

ಉಡುಪಿ, ಆ. 2: ಕೊಂಕಣ ರೈಲು ಮಾರ್ಗದ ಕಾರವಾರ ವಿಭಾಗದಲ್ಲಿ ನಿನ್ನೆ ರಾತ್ರಿಯ ಬಳಿಕ ಮೇಘಸ್ಪೋಟ ಸಂಭವಿಸಿ, ಕೇವಲ ಐದು ಗಂಟೆಗಳ ಅವಧಿ ಯಲ್ಲಿ 403 ಮಿ.ಮೀ. ಮಳೆ ಸುರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡದ ಮುರ್ಡೇಶ್ವರ ಹಾಗೂ ಭಟ್ಕಳ ನಡುವೆ ರೈಲ್ವೆ ಹಳಿಗೆ ನೀರು ನುಗ್ಗಿ, ಅಲ್ಪಪ್ರಮಾಣದ ಭೂಜರಿತ ಹಾಗೂ ಹಾನಿ ಸಂಭವಿಸಿದ ಕಾರಣ ಇಂದು ಅಪರಾಹ್ನ ಮೂರು ಗಂಟೆಯವರೆಗೆ ಕೊಂಕಣ ರೈಲು ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಇದರಿಂದಾಗಿ ಭಟ್ಕಳ-ಮುರ್ಡೇಶ್ವರ ಮಧ್ಯೆ ರೈಲು ಹಳಿಗಳ ಮೇಲೆ ನೀರು ನಿಂತಿದ್ದು, ಹಳಿಯ ಪಕ್ಕದ ಮಣ್ಣು ನೀರಿನಲ್ಲಿ ಕೊಚ್ಚಿಕೊಂಡು ಹೋದವು. ಹೀಗಾಗಿ ತಾತ್ಕಾಲಿಕವಾಗಿ ಮಾರ್ಗದ ಎಲ್ಲಾ ರೈಲುಗಳ ಸಂಚಾರವನ್ನು ತಡೆ ಹಿಡಿಯಲಾಯಿತು. ಅಲ್ಲದೇ ರೈಲು ಹಳಿಯನ್ನು ಸಂಚಾರಕ್ಕೆ ಮುಕ್ತಗೊಳಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಂಡು ಅಪರಾಹ್ನ 3 ಗಂಟೆಯ ಸುಮಾರಿಗೆ ರೈಲು ಸಂಚಾರ ಪುನರಾರಂಭ ಗೊಳ್ಳುವಂತಾಯಿತು ಎಂದು  ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.  

ಇದರ ನಡುವೆ ಈ ಮಾರ್ಗದಲ್ಲಿ ಸಂಚರಿಸಬೇಕಾಗಿದ್ದ ರೈಲು ನಂ.೦೬೬೦೧ ಮಡಗಾಂವ್ ಜಂಕ್ಷನ್-ಮಂಗಳೂರು ಸೆಂಟ್ರಲ್ ವಿಶೇಷ ರೈಲಿನ ಸಂಚಾರವನ್ನು ರದ್ದುಪಡಿಸಲಾಯಿತು. ಹಾಗೂ ರೈಲು ನಂ.೦೬೬೦೨ ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ರೈಲನ್ನು ಉಡುಪಿಯಲ್ಲೇ ತಡೆ ಹಿಡಿಯಲಾಯಿತು.

ಅಲ್ಲದೇ ಆ.೧ರಂದು ಸಂಚಾರ ಪ್ರಾರಂಭಿಸಿದ್ದ ಎರ್ನಾಕುಲಂ ಜಂಕ್ಷನ್- ಪುಣೆ ಎಕ್ಸ್‌ಪ್ರೆಸ್ ರೈಲನ್ನು ಭಟ್ಕಳದಲ್ಲಿ, ಕೆಎಸ್‌ಆರ್ ಬೆಂಗಳೂರು- ಕಾರವಾರ ಎಕ್ಸ್‌ಪ್ರೆಸ್ ರೈಲನ್ನು ಶಿರೂರು ನಿಲ್ದಾಣದಲ್ಲಿ, ತಿರುವನಂತಪುರಂ ಸೆಂಟ್ರಲ್- ವಿರಾವಲ್ ಎಕ್ಸ್‌ಪ್ರೆಸ್ ರೈಲನ್ನು ಸೇನಾಪುರ ನಿಲ್ದಾಣದಲ್ಲಿ, ಲೋಕಮಾನ್ಯ ತಿಲಕ್ ಮುಂಬಯಿ- ಕೊಚ್ಚುವೇಲ್ ಎಕ್ಸ್‌ಪ್ರೆಸ್ ರೈಲನ್ನು ಅಂಕೋಲ ನಿಲ್ದಾಣಗಳಲ್ಲಿ ನಿಲ್ಲಿಸಲಾಯಿತು.

ಆ.2ರಂದು ಪ್ರಯಾಣ ಪ್ರಾರಂಭಿಸಿದ ರೈಲು ನಂ.೧೬೫೧೬ ಕಾರವಾರ- ಯಶವಂತಪುರ ರೈಲನ್ನು ಹೊನ್ನಾವರ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದರೆ, ಗಾಂಧಿಧಾಮ- ತಿರುನಲ್ವೇಲಿ ರೈಲಿನ ಪ್ರಯಾಣವನ್ನು ಕುಮಟಾ ರೈಲು ನಿಲ್ದಾಣದಲ್ಲಿ ತಡೆ ಹಿಡಿಯಲಾಯಿತು.

ಹಳಿಗಳ ರಿಪೇರಿ ಬಳಿಕ ತಡೆ ಹಿಡಿಯಲಾದ ಎಲ್ಲಾ ರೈಲುಗಳು ಪ್ರಯಾಣ ಮುಂದುವರಿಸಿವೆ. ಮೊದಲನೇಯದಾಗಿ ಭಟ್ಕಳ ನಿಲ್ದಾಣದಲ್ಲಿ ನಿಂತಿದ್ದ  ಎರ್ನಾಕುಲಂ ಜಂಕ್ಷನ್- ಪುಣೆ ಎಕ್ಸ್‌ಪ್ರೆಸ್ ರೈಲು ಅಪರಾಹ್ನ ೩:೧೩ಕ್ಕೆ ತನ್ನ ಪ್ರಯಾಣ ಪುನರಾರಂಭಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X