Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದವರು ಪ್ರಚೋದಕರು ನಾವು ಬಲಿಪಶುಗಳು...

ಅಮೆರಿಕದವರು ಪ್ರಚೋದಕರು ನಾವು ಬಲಿಪಶುಗಳು : ಚೀನಾ

ವಾರ್ತಾಭಾರತಿವಾರ್ತಾಭಾರತಿ3 Aug 2022 9:28 PM IST
share
ಅಮೆರಿಕದವರು ಪ್ರಚೋದಕರು ನಾವು ಬಲಿಪಶುಗಳು : ಚೀನಾ

ಬೀಜಿಂಗ್, ಆ.3: ಅಮೆರಿಕ ಸಂಸತ್‌ನ ಸ್ಪೀಕರ್ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ತೈವಾನ್ ಜಲಸಂಧಿಯ ಬಳಿ ತಾನು ನಡೆಸಿರುವ ಸೇನಾ ಕಾರ್ಯಾಚರಣೆ ಅತ್ಯಗತ್ಯ ಮತ್ತು ಸರಿಯಾದ ಕ್ರಮವಾಗಿದೆ ಎಂದು ಚೀನಾ ಬುಧವಾರ ಸಮರ್ಥಿಸಿಕೊಂಡಿದೆ. 

ಚೀನಾದ ತೈವಾನ್ ಬಳಿಯ ಸಮುದ್ರ ಪ್ರದೇಶದಲ್ಲಿ ನಮ್ಮ ಸೇನೆ ನಡೆಸಿದ ಸೇನಾ ಕವಾಯತು ರಾಷ್ಟ್ರೀಯ ಸಾರ್ವಭೌಮತ್ವವನ್ನು ದೃಢವಾಗಿ ರಕ್ಷಿಸಲು ಅಗತ್ಯ ಮತ್ತು ನ್ಯಾಯಯುತವಾದ ಕ್ರಮವಾಗಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರೆ ಹುವಾ ಚುನ್‌ಯಿಂಗ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಪೆಲೋಸಿಯ ತೈವಾನ್ ಭೇಟಿಗೆ ಸಂಬಂಧಿಸಿದ ಬಿಕ್ಕಟ್ಟಿನಲ್ಲಿ ಅಮೆರಿಕದವರು ಪ್ರಚೋದಕರಾಗಿದ್ದರೆ ಚೀನಾ ಬಲಿಪಶುವಾಗಿದೆ. 

ಅಮೆರಿಕ ಮತ್ತು ತೈವಾನ್‌ನ ಜಂಟಿ ಪ್ರಚೋದನೆ ಮೊದಲು ಬಂದಿದ್ದು ಚೀನಾದ ರಕ್ಷಣಾ ಕ್ರಮ ಆ ಬಳಿಕ ನಡೆದಿದೆ ಎಂದವರು ಪ್ರತಿಪಾದಿಸಿದರು. ಪೆಲೋಸಿಯ ತೈವಾನ್ ಭೇಟಿ ಬಗ್ಗೆ ಚೀನಾದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ತೈವಾನ್ ಜಲಸಂಧಿಯಲ್ಲಿನ ಯಥಾಸ್ಥಿತಿಗೆ ಒಡ್ಡಿರುವ ಬೆದರಿಕೆಯಾಗಿದೆ ಎಂದಿದ್ದಾರೆ. 

ಈ ಮಧ್ಯೆ, ತೈವಾನ್ ಸುತ್ತಮುತ್ತ ಸರಣಿ ರಕ್ಷಣಾ ಕವಾಯತುಗಳನ್ನು ಹಮ್ಮಿಕೊಂಡಿದೆ. ತೈವಾನ್ ದ್ವೀಪದ ಉತ್ತರ, ನೈಋತ್ಯ ಮತ್ತು ಆಗ್ನೇಯ ಸಮುದ್ರ ಮತ್ತು ವಾಯುಪ್ರದೇಶಗಳಲ್ಲಿ ಜಂಟಿ ನೌಕಾ ಮತ್ತು ವಾಯು ಕವಾಯತನ್ನು ನಡೆಸಲಾಗುವುದು ಎಂದು ಚೀನಾದ ಪೂರ್ವ ಥಿಯೇಟರ್ ಕಮಾಂಡ್( ಸೇನೆಯ ಮೂರೂ ವಿಭಾಗಗಳನ್ನು ಒಳಗೊಂಡ ತುಕಡಿ) ಹೇಳಿಕೆ ನೀಡಿದೆ. 

ಗುರುವಾರ ತೈವಾನ್ ಕಡಲ ತೀರಕ್ಕಿಂತ ಕೇವಲ 20 ಕಿ.ಮೀ ದೂರದ ವಲಯದಲ್ಲಿ ಇನ್ನಷ್ಟು ಮಿಲಿಟರಿ ತರಬೇತಿ ಕವಾಯತು ನಡೆಸಲಾಗುವುದು. ಈ ಕವಾಯತಿನಲ್ಲಿ ತೈವಾನ್ ಜಲಸಂಧಿಯಲ್ಲಿ ನಡೆಯುವ ದೀರ್ಘ ಶ್ರೇಣಿಯ ಗುಂಡು ಹಾರಾಟ ತರಬೇತಿಯೂ ಸೇರಿದೆ ಎಂದು ಹೇಳಿಕೆ ತಿಳಿಸಿದೆ. ಚೀನಾದ ಸೇನಾ ಕವಾಯತು ತನ್ನ ಪ್ರಮುಖ ಬಂದರು ಹಾಗೂ ಗ್ರಾಮೀಣ ಪ್ರದೇಶಕ್ಕೆ ಒಡ್ಡಿರುವ ಬೆದರಿಕೆಯಾಗಿದೆ ಎಂದು ತೈವಾನ್ ಪ್ರತಿಕ್ರಿಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X