ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ವಾಪಾಸ್: ಕಮಿಷನರ್ ಶಶಿಕುಮಾರ್

ಮಂಗಳೂರು, ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಇದೇ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ಹಿಂತೆಗೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
Next Story