Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಮಗೆ ಈ ಅಧಿಕಾರ ಕೊಟ್ಟವರ್ಯಾರು ? ಜಿ7...

ನಿಮಗೆ ಈ ಅಧಿಕಾರ ಕೊಟ್ಟವರ್ಯಾರು ? ಜಿ7 ದೇಶಗಳ ಎಚ್ಚರಿಕೆಗೆ ಚೀನಾ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ4 Aug 2022 11:05 PM IST
share

ಬೀಜಿಂಗ್, ಆ.4: ತೈವಾನ್‌ಗೆ ಅಮೆರಿಕ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಭೇಟಿಯನ್ನು ನೆಪವಾಗಿಸಿ ತೈವಾನ್ ಜಲಸಂಧಿಯಲ್ಲಿ ಆಕ್ರಮಣಕಾರಿ ಮಿಲಿಟರಿ ಚಟುವಟಿಕೆಯನ್ನು ಚೀನಾ ಹೆಚ್ಚಿಸಬಾರದು ಎಂಬ ಜಿ7 ದೇಶಗಳ ಎಚ್ಚರಿಕೆಗೆ ತಿರುಗೇಟು ನೀಡಿರುವ ಚೀನಾ ‘ ನಿಮಗೆ ಈ ಅಧಿಕಾರ ಕೊಟ್ಟವರ್ಯಾರು ? ಎಂದು ಪ್ರಶ್ನಿಸಿದೆ.

 ಪೆಲೋಸಿ ಭೇಟಿಯ ಬಳಿಕ ಚೀನಾ ನಡೆಸುತ್ತಿರುವ ಪ್ರತಿಕ್ರಿಯಾತ್ಮಕ ಕ್ರಮಗಳು ಉದ್ವಿಗ್ನತೆಯನ್ನು ಉಲ್ಬಣಗೊಳಿಸುವ ಮತ್ತು ಪ್ರದೇಶವನ್ನು ಅಸ್ಥಿರಗೊಳಿಸುವ ಅಪಾಯವನ್ನು ಉಂಟು ಮಾಡುತ್ತದೆ. ಯಾವುದೇ ದೇಶದ ರಾಜತಾಂತ್ರಿಕರು ವಿದೇಶಕ್ಕೆ ಭೇಟಿ ನೀಡುವುದು ಸಹಜ ಪ್ರತಿಕ್ರಿಯೆಯಾಗಿದೆ ಎಂದು ಜಿ7 ದೇಶಗಳ ವಿದೇಶಾಂಗ ಸಚಿವರ ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಯನ್ನು ತಿರಸ್ಕರಿಸುವುದಾಗಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. 

ಅಮೆರಿಕದ ಪ್ರಚೋದನಕಾರಿ ನಡೆಯನ್ನು ಈ ಹೇಳಿಕೆ ಗಮನಿಸಿಲ್ಲ. ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಸಂರಕ್ಷಿಸುವ ಸಮಂಜಸ ಮತ್ತು ನ್ಯಾಯಸಮ್ಮತ ಕ್ರಮಗಳನ್ನು ಕೈಗೊಂಡಿರುವ ಚೀನಾದ ಮೇಲೆ ಆಧಾರರಹಿತ ಟೀಕೆ ಮಾಡಲಾಗಿದೆ. ಅಂತಹ ವಿಶೇಷಾಧಿಕಾರವನ್ನು ಅವರಿಗೆ ಕೊಟ್ಟವರ್ಯಾರು? ಹಕ್ಕುಗಳನ್ನು ಉಲ್ಲಂಘಿಸುವವರನ್ನು ರಕ್ಷಿಸಲು ಹಕ್ಕುಗಳ ರಕ್ಷಕರನ್ನು ಟೀಕಿಸಲು ಅವರಿಗೆ ಯಾವ ಅಧಿಕಾರವಿದೆ. ಜಿ7 ಸದಸ್ಯರ ಹೇಳಿಕೆಯು ಚೀನಾದ ಜನತೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ವಾಂಗ್ ಹೇಳಿದ್ದಾರೆ. 

ಇಂದಿನ ಚೀನಾವು 19ನೇ ಶತಮಾನದ ಚೀನಾವಲ್ಲ. ಇತಿಹಾಸವು ಪುನರಾವರ್ತನೆ ಆಗಬಾರದು ಮತ್ತು ಅದು ಎಂದಿಗೂ ಸ್ವತಃ ಪುನರಾವರ್ತನೆ ಆಗುವುದಿಲ್ಲ ಎಂದವರು ಹೇಳಿದ್ದಾರೆ. ಜಪಾನ್ ಕೂಡಾ ಸದಸ್ಯನಾಗಿರುವ ಜಿ7 ದೇಶಗಳ ಹೇಳಿಕೆಯ ಹಿನ್ನೆಲೆಯಲ್ಲಿ, ಕಾಂಬೋಡಿಯಾದಲ್ಲಿ ನಡೆಯುತ್ತಿರುವ ಆಸಿಯಾನ್ ಸಭೆಯ ನೇಪಥ್ಯದಲ್ಲಿ ನಡೆಯಬೇಕಿದ್ದ ಚೀನಾ ಮತ್ತು ಜಪಾನ್ ವಿದೇಶಾಂಗ ಸಚಿವರ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಚೀನಾ ವಿದೇಶಾಂಗ ಇಲಾಖೆಯ ವಕ್ತಾರೆ ಹುವಾ ಚುನ್ಯಿಂಗ್ ಹೇಳಿದ್ದಾರೆ. 

ಇತರ ಜಿ7 ದೇಶಗಳು ತೈವಾನ್ ವಿಷಯದಲ್ಲಿ ಅಮೆರಿಕದ ಹೆಜ್ಜೆಯನ್ನು ತುಳಿದರೆ ಅದರರ್ಥ, ಅವರ ರಾಜತಾಂತ್ರಿಕತೆ ಮತ್ತು ನೀತಿಗಳಲ್ಲಿ ಅವರಿಗೆ ಯಾವುದೇ ಸ್ವಾತಂತ್ರಗಳಿಲ್ಲ ಎಂದಾಗಿದೆ. ಒಂದು ಚೀನಾ ನೀತಿಗೆ ಬದ್ಧವಾಗಿರುವುದು ಚೀನಾದೊಂದಿಗಿನ ಅವರ ಸಂಬಂಧದ ತಳಪಾಯ ಎಂಬುದನ್ನು ಅವರು ಮರೆಯಬಾರದು ಎಂದು ಚುನ್ಯಿಂಗ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X