Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೆಸ್ಸೆಸ್ ಶಾಖೆಗಳಲ್ಲಿ ಮೊದಲು ತ್ರಿವರ್ಣ...

ಆರೆಸ್ಸೆಸ್ ಶಾಖೆಗಳಲ್ಲಿ ಮೊದಲು ತ್ರಿವರ್ಣ ಧ್ವಜ ಹಾರಿಸಿ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2022 5:50 PM IST
share
ಆರೆಸ್ಸೆಸ್ ಶಾಖೆಗಳಲ್ಲಿ ಮೊದಲು ತ್ರಿವರ್ಣ ಧ್ವಜ ಹಾರಿಸಿ: ಸಿದ್ದರಾಮಯ್ಯ

ಬೆಂಗಳೂರು, ಆ. 5: ‘ದೇಶದಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸುವ ಉತ್ಸವ ಆಚರಿಸಲು ಹೊರಟಿರುವ ಬಿಜೆಪಿ ಹಾಗೂ ಆರೆಸೆಸ್ಸ್‍ನವರು ಹಿಟ್ಲರ್‍ನನ್ನು ಆದರ್ಶ ಎಂದು ಭಾವಿಸುವುದು ಬಿಟ್ಟು ನೈಜ ಪ್ರಜಾತಂತ್ರದ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಾಗ ಮಾತ್ರ ರಾಷ್ಟ್ರ ಧ್ವಜ ಹಾರಿಸಿ ಎಂದು ಜನರಿಗೆ ಕರೆಕೊಡುವ ನೈತಿಕತೆ ಬರುತ್ತದೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯ ‘ಹರ್ ಘರ್ ತಿರಂಗಾ ಅಭಿಯಾನ'ಕ್ಕೆ ತಿರುಗೇಟು ನೀಡಿದ್ದಾರೆ. 

ಶುಕ್ರವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ‘ತ್ರಿವರ್ಣ ಧ್ವಜವು ಸ್ವಾತಂತ್ರ್ಯ, ಪ್ರಜಾತಂತ್ರ ಹಾಗೂ ಸತ್ಯಶೀಲತೆಗಳನ್ನು ಪ್ರತಿನಿಧಿಸುತ್ತದೆ. ಸಾವಿರಾರು ವರ್ಷಗಳಿಂದ ಈ ನೆಲದಲ್ಲಿ ಪರಂಪರಾಗತವಾಗಿ ಬಂದಿರುವ ಸುಂದರ ವಿಚಾರಗಳ ಲಾಂಛನವಾಗಿ ಧ್ವಜವನ್ನು ರೂಪಿಸಲಾಗಿದೆ' ಎನ್ನುವುದು ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ನಿಲುವಾಗಿತ್ತು' ಎಂದು ತಿಳಿಸಿದ್ದಾರೆ.

‘ಬಿಜೆಪಿ ಮತ್ತು ಆರೆಸೆಸ್ಸ್‍ನ ಇತಿಹಾಸ ಗೊತ್ತಿರುವವರಿಗೆ ಈ ಹೊಸ ವರಸೆ ಪ್ರಾಮಾಣಿಕವಾದುದಲ್ಲವೆಂದು ಗೊತ್ತಿದೆ. ಈ ಪವಿತ್ರವಾದ ನೆಲದಲ್ಲಿ ಯಾವುದು ಸಹಜವೂ ಗೌರವಯುತವೂ ಆದ ಸಂಗತಿಗಳಿವೆಯೊ ಅವುಗಳನ್ನೆಲ್ಲ ಹಾಳುಗೆಡವಿ ಕೇವಲ ಗಿಮಿಕ್ಕಿಗಾಗಿ ಬಳಸಿಕೊಳ್ಳುವುದು ಬಿಜೆಪಿ-ಆರೆಸ್ಸೆಸ್ ನ ದುಷ್ಟ ತಂತ್ರದ ಭಾಗ. ಆರೆಸ್ಸೆಸ್ ತೀರಾ ಇತ್ತೀಚಿನವರೆಗೂ ನಾಗಪುರದ ತಮ್ಮ ಕಚೇರಿಯ ಮೇಲೆ ಧ್ವಜ ಹಾರಿಸಿರಲಿಲ್ಲ. ಬಲವಂತವಾಗಿ ಇಬ್ಬರು ಯುವಕರು ಅವರ ಕಚೇರಿಗೆ ನುಗ್ಗಿ ಧ್ವಜ ಹಾರಿಸಿದ ಮೇಲೆ ಆರೆಸೆಸ್ಸ್‍ನ ಕೇಂದ್ರ ಕಚೇರಿಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಪ್ರಾರಂಭಿಸಿದರು' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಇವರಿಗೆ ಲಾಂಛನಗಳ ಕುರಿತಾಗಿ ಎಂದಿಗೂ ಪವಿತ್ರ ಉದ್ದೇಶವಿಲ್ಲ. ನಮ್ಮ ಧ್ವಜ ಯಾವುದನ್ನು ಪ್ರತಿನಿಧಿಸುತ್ತಿತ್ತೊ ಆ ಎಲ್ಲ ಸ್ಫೂರ್ತಿಯನ್ನು ಧ್ವಂಸ ಮಾಡುತ್ತಲೆ, ಇವುಗಳಿಂದ ಜನರ ಗಮನ ದೂರ ಮಾಡಲು ‘ಹರ್ ಘರ್ ತಿರಂಗಾ’ ಎಂಬ ಘೋಷಣೆ ಪ್ರಾರಂಭಿಸಿದ್ದಾರೆ. ನಮ್ಮ ರೈತರು ತಯಾರಿಸಿದ ಹತ್ತಿ ಮತ್ತು ರೇಶ್ಮೆಯಲ್ಲಿ ಧ್ವಜವನ್ನು ಸಿದ್ಧಪಡಿಸಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರರು ಧ್ವಜ ರೂಪಿಸುವ ಚರ್ಚೆಯಲ್ಲಿ ನಿರ್ಣಯ ಅಂಗೀಕರಿಸಿದ್ದರು. ಆದರೆ, ಮೋದಿ ಸರಕಾರವು ಈಗ ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜಗಳನ್ನು ಮುದ್ರಿಸಿ ಹಂಚುತ್ತಿದೆ. ಇದು ಧ್ವಜದ ಪಾವಿತ್ರ್ಯದ ಮತ್ತು ಸ್ವದೇಶಿ ತತ್ವದ ಅವಮಾನವೂ ಆಗಿದೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಬಿಜೆಪಿ ಧ್ವಜದ ಆಕಾರವನ್ನೆ ವಿಕೃತಗೊಳಿಸಿರುವುದನ್ನು ಮಾಧ್ಯಮಗಳು ತೋರಿಸುತ್ತಿವೆ. ಚರಕದ ಮುಂದೆ ಕೂತು ಹಲವು ಬಾರಿ ಫೋಸು ಕೊಟ್ಟಿದ್ದ ಮೋದಿಯವರ ಕಣ್ಣು ಯಾವುದರ ಮೇಲೆಲ್ಲ ಬೀಳುತ್ತದೊ ಅದು ಸಂಪೂರ್ಣ ಹಾಳಾಯಿತೆಂದೆ ಅರ್ಥ. ಈಗ ಯಾವ ಸ್ವದೇಶಿಯೂ ಇಲ್ಲ ದೇಶದ ವಸ್ತ್ತುಗಳೆಲ್ಲ ಚೀನಿಮಯವಾಗುತ್ತಿವೆ. ಮೋದಿಯವರು ಧ್ವಜಗಳ ವಿಚಾರದಲ್ಲೂ ಚೀನಾಕ್ಕೆ ಅನುಕೂಲ ಮಾಡಿಕೊಡಲು ಹೊರಟಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ' ಎಂದು ಅವರು ದೂರಿದ್ದಾರೆ.

‘ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳನ್ನೂ ಚೀನಾದ ಕಂಪೆನಿಗಳಿಗೆ ಗುತ್ತಿಗೆ ನೀಡಿ ತಯಾರು ಮಾಡಿಸಿದ್ದರೆಂಬ ಆರೋಪ ಈಗಾಗಲೇ ಇದೆ. ಬಿಜೆಪಿ ಮಾಡುತ್ತಿರುವ ‘ಮನೆ ಮನೆಯಲ್ಲಿ ಧ್ವಜ’ ಯೋಜನೆಗೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ, ಧ್ವಜ ಹಾರಿಸಲು ಕರೆ ಕೊಡುವ ಮೊದಲು, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಸುಪರ್ದಿಯಲ್ಲಿ ಹತ್ತಿ ಮತ್ತು ರೇಶ್ಮ್ಮೆಯಿಂದ ಸಿದ್ಧಪಡಿಸಿದ ಧ್ವಜಗಳನ್ನು ಬಳಸಬೇಕು. ಇದರಿಂದ ರೈತರಿಗೆ, ನೇಕಾರರಿಗೆ ಅನುಕೂಲವಾಗುತ್ತದೆ. ಧ್ವಜ ತಯಾರಿಯನ್ನೂ ಲಾಭದಾಯಕ ದಂಧೆ ಎಂದು ತಿಳಿದು ಅಂಬಾನಿಗಳಂಥ ಉದ್ಯಮಿಗಳಿಗೆ ಅವಕಾಶ ಮಾಡಿಕೊಟ್ಟರೆ ಅಥವಾ ಚೀನಾದಿಂದ ಧ್ವಜಗಳನ್ನು ಆಮದು ಮಾಡಿಕೊಂಡರೆ ಅದು ದುಷ್ಟತನದ ಪರಮಾವಧಿಯಾಗುತ್ತದೆ. ಧ್ವಜದ ಆಕಾರವನ್ನು ವಿಕೃತಗೊಳಿಸಿ ಪಾಲಿಸ್ಟರ್ ಬಟ್ಟೆಯಲ್ಲಿ ತಯಾರಿಸಲು ಹೊರಟಿರುವುದು ದುಷ್ಟತನದ ಸಂಕೇತ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಆರೆಸೆಸ್ಸ್ ದೇಶದ ಜನರಿಗೆ ಧ್ವಜ ಹಾರಿಸಿ ಎಂದು ಹೇಳುವ ಮೊದಲು ಕಡ್ಡಾಯವಾಗಿ ತಮ್ಮ ಪ್ರತಿ ಶಾಖೆಗಳಲ್ಲೂ, ಕೇಶವ ಕೃಪಾದಂತಹ ಕಚೇರಿಗಳಲ್ಲಿ ಹಾರಿಸಬೇಕು. ತ್ರಿವರ್ಣ ಧ್ವಜವು ಅಪಶಕುನದ ಸಂಕೇತ ಎಂದು ಅಪಪ್ರಚಾರ ಮಾಡಿ ಆರ್ಗನೈಸರ್ ಪತ್ರಿಕೆಯಲ್ಲಿ ಬರೆದಿರುವ ಬರಹಗಳನ್ನು ಹಿಂಪಡೆದು ದೇಶದ ಜನರಲ್ಲಿ ಬಹಿರಂಗ ಕ್ಷಮೆ ಕೇಳಬೇಕು' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಭಾರತದ ಧ್ವಜವನ್ನು ಸುರಯ್ಯಾ ತಯ್ಯಬ್ಜಿ, ಪಿಂಗಳಿ ವೆಂಕಯ್ಯ, ಗಾಂಧೀಜಿ, ನೆಹರೂ, ಸುಭಾಶ್ ಚಂದ್ರ ಬೋಸ್ ಮುಂತಾದ ಮಹಾನ್ ದೇಶಭಕ್ತರು ಸ್ವಾತಂತ್ರ್ಯ ಹೋರಾಟದ ದೀರ್ಘ ಪ್ರಯತ್ನದ ಮೂಲಕ ಸಿದ್ಧಗೊಳಿಸಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಬೇಕು. ಆರೆಸೆಸ್ಸ್ ಪರಿವಾರದ ಜನಸಂಘ, ಬಿಜೆಪಿ ಇತರೆ ಸಂಘಟನೆಗಳು ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಬಗೆಗೆ ವ್ಯಕ್ತಪಡಿಸಿರುವ ಅಸಮರ್ಪಕ ಹಾಗೂ ಹಾನಿಕರವಾಗಿ ಅಭಿಪ್ರಾಯಗಳಿಗೆ ಕ್ಷಮೆ ಕೇಳಬೇಕು' ಎಂದು ಅವರು ಒತ್ತಾಯಿಸಿದ್ದಾರೆ

‘ದೇಶದ ಅಮೂಲ್ಯ ಸಂಪತ್ತನ್ನು ದೇಶದ ಜನರಿಗೆ ಉಳಿಸಬೇಕು. ಭಿನ್ನಮತವನ್ನು ಗೌರವಿಸಬೇಕು. ಪ್ರಜಾತಂತ್ರದ ಉದಾತ್ತ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆಂದು ಹಾಗೂ ಬಗಲಲ್ಲಿ ವಿಷ ಇಟ್ಟುಕೊಂಡು ದೇಶದ ಜನರನ್ನು ಮರುಳು ಮಾಡುವುದಿಲ್ಲವೆಂದು ಬಹಿರಂಗವಾಗಿ ಪ್ರಮಾಣ ಮಾಡಿ ರಾಷ್ಟ್ರ ಧ್ವಜವನ್ನು ಹಾರಿಸಲು ಮುಂದಾಗಬೇಕು'

-ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X