Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಶವ ಕೃಪದಲ್ಲಿ ವಾರ್ಡ್‍ಗಳ ಮರು...

ಕೇಶವ ಕೃಪದಲ್ಲಿ ವಾರ್ಡ್‍ಗಳ ಮರು ವಿಂಗಡನೆ: ರಾಮಲಿಂಗಾರೆಡ್ಡಿ ಆರೋಪ

BBMP ಚುನಾವಣಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ

ವಾರ್ತಾಭಾರತಿವಾರ್ತಾಭಾರತಿ5 Aug 2022 6:45 PM IST
share
ಕೇಶವ ಕೃಪದಲ್ಲಿ ವಾರ್ಡ್‍ಗಳ ಮರು ವಿಂಗಡನೆ: ರಾಮಲಿಂಗಾರೆಡ್ಡಿ ಆರೋಪ

ಬೆಂಗಳೂರು, ಆ.5: ಬಿಬಿಎಂಪಿ (BBMP) ಚುನಾವಣೆಗೆ ಸಂಬಂಧಿಸಿದಂತೆ 7 ದಿನಗಳ ಒಳಗಾಗಿ ವಾರ್ಡುಗಳ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ಸುಪ್ರೀಂಕೋರ್ಟ್ ಗಡುವು ಕೊಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದೆ. ಮೀಸಲಾತಿಯನ್ನು ಮಾಡಲು ಮಾರ್ಗಸೂಚಿ ಇದೆ. ಆದರೆ ಮಾರ್ಗಸೂಚಿ ಪ್ರಕಾರ ಈ ಮೀಸಲಾತಿ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾರ್ಗಸೂಚಿಯನ್ನು ಸರಕಾರಕ್ಕೆ ಕಳುಹಿಸಿದ್ದರೂ ಅದಕ್ಕೆ ಅನುಮೋದನೆ ಸಿಕ್ಕಿರಲಿಲ್ಲ. ಆದರೂ ಮೀಸಲಾತಿ ಮಾಡಿದ್ದಾರೆ. ವಾರ್ಡ್‍ಗಳ ಮರುವಿಂಗಡಣೆಯನ್ನು ಬಿಜೆಪಿ ಶಾಸಕರು ಹಾಗೂ ಸಂಸದರ ಅನುಕೂಲಕ್ಕೆ ತಕ್ಕಂತೆ ಮಾಡಲಾಗಿದೆ ಎಂದು ಕಿಡಿಗಾರಿದರು.

ವಾರ್ಡ್‍ಗಳ ಮರುವಿಂಗಡಣೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇರಬೇಕು. ಇದನ್ನು ಕಂದಾಯ ಅಧಿಕಾರಿಗಳು ಗಡಿಗಳನ್ನು ಗುರುತಿಸಿ ಮಾರ್ಗಸೂಚಿಯಂತೆ ಮಾಡಬೇಕಿತ್ತು. ಆದರೆ ಈ ಬಾರಿ ಈ ಸಮಿತಿಯ ಮುಖ್ಯಸ್ಥರಾಗಿದ್ದ ಬಿಬಿಎಂಪಿ ಮುಖ್ಯ ಆಯುಕ್ತರು ಒಂದೇ ಒಂದು ಸಭೆ ಮಾಡದೇ ಬಿಜೆಪಿ ಶಾಸಕರು, ಸಂಸದರ ಕಚೇರಿ, ಕೇಶವಕೃಪದಲ್ಲಿ ಈ ಪ್ರಕ್ರಿಯೆ ನಡೆದಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ವಾರ್ಡುಗಳ ಮರು ವಿಂಗಡನೆಗೆ ಸಂಬಂಧಿಸಿದಂತೆ 3 ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿತ್ತು. ಆದರೆ ಇವುಗಳನ್ನು ಸರಕಾರಪರಿಗಣಿಸದೇ ಬಿಜೆಪಿಯವರು ಮಾಡಿದ್ದಕ್ಕೆ ಒಪ್ಪಿಗೆ ನೀಡಿದರು. ಶಿವಾಜಿನಗರ, ಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ಸಂಬಂಧವೇ ಇಲ್ಲದಂತೆ ವಾರ್ಡ್ ಮರುವಿಂಗಡಣೆ ಮಾಡಲಾಗಿದೆ ಎಂದು ಅವರು ದೂರಿದರು.

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ ಪ್ರಬಲ ಅಭ್ಯರ್ಥಿಗಳು ಸ್ಪರ್ಧೆ ಮಾಡಬಾರದು ಎಂದು ಮೀಸಲಾತಿ ಪಟ್ಟಿ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ 9 ವಾರ್ಡ್‍ಗಳಲ್ಲಿ 8 ಮಹಿಳೆಯರ ಮೀಸಲಾತಿ ನೀಡಿದ್ದಾರೆ. ಜಯನಗರದಲ್ಲಿ 6ರಲ್ಲಿ 5 ಮಹಿಳೆಯರಿಗೆ ನೀಡಿದ್ದಾರೆ. ಗಾಂಧಿನಗರ ಕ್ಷೇತ್ರದಲ್ಲಿ 7ಕ್ಕೆ 7 ವಾರ್ಡ್‍ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಕಾನೂನು ಹೋರಾಟ: ಎಸ್ಸಿ ಹಾಗೂ ಎಸ್ಟಿ ಮೀಸಲಾತಿಯನ್ನು ಜನಸಂಖ್ಯೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಆ ರೀತಿ ಮಾಡದೇ ಮನಸ್ಸಿಗೆ ಬಂದಂತೆ ಮೀಸಲಾತಿ ಮಾಡಿದ್ದಾರೆ. ಈ ರೀತಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿದೆ. ಇದು ಖಂಡನೀಯ. ನಾವು ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತೇವೆ. ಈ ಮೀಸಲಾತಿ ವಿರುದ್ಧ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

65 ಸಾಮಾನ್ಯ ಕ್ಷೇತ್ರಗಳ ಪೈಕಿ 49 ಕ್ಷೇತ್ರಗಳು ಬಿಜೆಪಿ ಶಾಸಕರ ಕ್ಷೇತ್ರಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಇದನ್ನು ಸರಕಾರ ಹಿಂಪಡೆಯಬೇಕು. ಕಾಂಗ್ರೆಸ್ ಶಾಸಕರು, ಮಾಜಿ ಸದಸ್ಯರು ಗೆಲ್ಲದಂತೆ ಒಂದು ಕಡೆ ಕುತಂತ್ರ ಮಾಡಿದರೆ, ಮತ್ತೊಂದೆಡೆ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಭವಿಷ್ಯದಲ್ಲಿ ಅವರಿಂದ ಸ್ಪರ್ಧೆ ಎದುರಾಗುತ್ತದೆ ಎಂದು ಅವರನ್ನು ಮುಗಿಸಲು ಸಂಚು ರೂಪಿಸಲಾಗಿದೆ ಎಂದು ಅವರು ಕಿಡಿಗಾರಿದರು.

ಒಟ್ಟು ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಲ್ಲಿ 87 ವಾರ್ಡ್‍ಗಳಿದ್ದು, ಅದರಲ್ಲಿ 67 ವಾರ್ಡ್‍ಗಳು ಮಹಿಳಾ ಮೀಸಲಾತಿ ನೀಡಲಾಗಿದೆ. ಜೆಡಿಎಸ್ 1 ವಿಧಾನಸಭಾ ಕ್ಷೇತ್ರದಲ್ಲಿ 12 ವಾರ್ಡ್‍ಗಳಿಂದ 9 ಮಹಿಳಾ ಮೀಸಲಾತಿ ನೀಡಲಾಗಿದೆ. ಬಿಜೆಪಿ ಮಹಿಳಾ ಮೀಸಲಾತಿಗೆ ವಿರೋಧವಿದ್ದು, ಈ ಮೂಲಕ ಅದನ್ನು ವ್ಯಕ್ತಪಡಿಸಿದ್ದಾರೆ ಎಂದು ದೂರಿದರು.

ಚಾಮರಾಜಪೇಟೆ ಕ್ಷೇತ್ರದ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಮಾತನಾಡಿ, ನನ್ನ ಕ್ಷೇತ್ರದಲ್ಲಿ 6ಕ್ಕೆ 5 ಮಹಿಳಾ ಮೀಸಲಾತಿ ಮಾಡಿದ್ದಾರೆ. ಆಜಾದ್ ನಗರದಲ್ಲಿ ಎಸ್ಟಿ ಜನಸಂಖ್ಯೆ 350ರಿಂದ 400 ಇದೆ. ಅಲ್ಲಿ ಎಸ್ಟಿ ಮೀಸಲಾತಿ ನೀಡಿದ್ದಾರೆ. ಚಾಮರಾಜಪೇಟೆ ಭಾಗವನ್ನು ಜಾಲಿ ಮೊಹಲ್ಲಾಗೆ, ಅಲ್ಲಿನ ಭಾಗವನ್ನು ಸಿಟಿ ಮಾರುಕಟ್ಟೆ ಸೇರಿಸಿದ್ದಾರೆ. ಕಾಂಗ್ರೆಸ್‍ನವರು ಎಲ್ಲೂ ಗೆಲ್ಲದಂತೆ ಮರುವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆಲ್ಲಲಿದೆ ಎಂಬ ಭಯಕ್ಕೆ ಈ ರೀತಿ ಮಾಡಿದ್ದಾರೆ ಎಂದರು.

ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್ ಮಾತನಾಡಿ, ಬಿಜೆಪಿ ಶಾಸಕರ ಕ್ಷೇತ್ರ ಹಾಗೂ ಕಾಂಗ್ರೆಸ್ ಶಾಸಕರ ಕ್ಷೇತ್ರ ಹೋಲಿಕೆ ಮಾಡಿ ನೋಡಿ. 19 ಸಾವಿರ ಮತವಿರುವ ಒಂದು ವಾರ್ಡ್ ಸೃಷ್ಟಿಸಿದರೆ, ಅದರ ಪಕ್ಕದಲ್ಲಿ 45 ಸಾವಿರ ಮತವಿರುವ ವಾರ್ಡ್ ಮಾಡಲಾಗಿದೆ. ಇವರ ವೆಬ್‍ಸೈಟ್‍ನಲ್ಲಿ 45 ಸಾವಿರ ಮತವಿದ್ದರೂ 37 ಸಾವಿರ ಜನಸಂಖ್ಯೆ ಇದೆ ಎಂದು ತೋರಿಸಲಾಗಿದೆ. ನಮ್ಮ ಕ್ಷೇತ್ರದಲ್ಲಿ ವಾರ್ಡ್ ಕಡಿಮೆ ಮಾಡಲಾಗಿದೆ ಎಂದರು.

ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕೇಶವಕೃಪದಲ್ಲಿ ತೀರ್ಮಾನವಾಗಿ ವಿಕಾಸ ಸೌಧದ ನಗರಾಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಆದೇಶ ನೀಡಲಾಗಿದೆ. ಹೀಗಾಗಿ ವಿಕಾಸ ಸೌಧದ ನಗರಾಭಿವೃದ್ಧಿ ಇಲಾಖೆ ಕಚೇರಿಯನ್ನು ಬಿಜೆಪಿ ಕಚೆರಿಯನ್ನಾಗಿ ಮಾಡಿಕೊಂಡಿದ್ದು, ಅದಕ್ಕೆ ಎಲ್ಲರೂ ಒಪ್ಪಿದರೆ ಆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯು ಸೋಲಿನ ಭೀತಿಯಿಂದ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಮೀಸಲಾತಿ ಪಟ್ಟಿ ಮಾಡಿದೆ. ಇದರಲ್ಲಿ ಬೆಂಗಳೂರಿನ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿಗಳ ಕೈವಾಡ ನೇರವಾಗಿದೆ. ಬೆಂಗಳೂರು ಬಿಜೆಪಿ ಶಾಸಕರ ಕೈಗೊಂಬೆಯಾಗಿ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿ ಮೀಸಲಾತಿ ಆದೇಶ ಹೊರಡಿಸಿದ್ದಾರೆ ಎಂದು ಸುರೇಶ್ ದೂರಿದರು.

ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಕೃಷ್ಣ ಭೈರೇಗೌಡ ಮಾತನಾಡಿ, ಬಿಜೆಪಿ ನೇರ ಮಾರ್ಗದಲ್ಲಿ ಚುನಾವಣೆ ಮಾಡಿದರೆ ಗೆಲ್ಲುವುದಿಲ್ಲ ಎಂದು ಕಾನೂನು ಬಾಹಿರವಾಗಿ ತಮಗೆ ಇಚ್ಛಿಸಿದಂತೆ ವಾರ್ಡ್ ಮೀಸಲಾತಿ ಮಾಡಿದೆ ಎಂದು ದೂರಿದರು.

ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಬಿಜೆಪಿ ಬಂದಾಗಿನಿಂದ ಅನುದಾನ, ಕೆಲಸ ಕಾಮಗಾರಿಯವರೆಗೆ, ಎಲ್ಲದರಲ್ಲೂ ತಾರತಮ್ಯ ಮಾಡಿಕೊಂಡು ಬಂದಿದೆ. ಸಿದ್ದರಾಮಯ್ಯ ಅವರ ಕಾಲದಲ್ಲಿನ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಯೋಜನೆ ಹಾಗೂ ಮೈತ್ರಿ ಸರಕಾರದ ಯೋಜನೆ ತಡೆದು, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ ಎಂದರು.

ಸಾಮಾಜಿಕ ನ್ಯಾಯ ಎಂದರೆ ಸಮಾನ ಅವಕಾಶ ಮತ್ತು ಅಧಿಕಾರ ನೀಡಬೇಕು. ಅನುದಾನ, ಕಾಯ್ದೆ, ವಾರ್ಡ್ ಮರುವಿಂಗಡಣೆ,ಮೀಸಲಾತಿ ಎಲ್ಲದರಲ್ಲೂ ರಾಜಕೀಯ. ಹೀಗಿರುವಾಗ ಬೆಂಗಳೂರು ಅಭಿವೃದ್ಧಿ ಹೇಗೆ ಸಾಧ್ಯ. ಸ್ಥಳೀಯ ಸಂಸ್ಥೆಗಳ ದುರ್ಬಲ ಮಾಡಲಾಗುತ್ತಿದೆ. ಒಬಿಸಿ ಮೀಸಲಾತಿ ನಾವು ಬೆಂಬಲಿಸುತ್ತೇವೆ. ಬಿಜೆಪಿ ಆಡಳಿತ ಕೇವಲ ಸ್ವಾರ್ಥಕ್ಕೆ ಮಾಡುತ್ತಿದೆಯೇ ಹೊರತು ಜನರಿಗಾಗಿ ಅಲ್ಲ ಎಂದು ಅವರು ಹೇಳಿದರು.

ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆಯುತ್ತಿದೆ. ಹಿಂದುಳಿದವರಿಗೆ ಮೀಸಲಾತಿ ನೀಡಿದ್ದೇವೆ. ಇಷ್ಟೆಲ್ಲಾ ಮಾಡಿದ ನಂತರ ಜನಪ್ರತಿನಿಧಿಗಳು ನೇರವಾಗಿ ಆಯ್ಕೆಯಾಗ ಬೇಕೆ ಹೊರತು. ವಾಮಮಾರ್ಗದ ಮೂಲಕ ಅಲ್ಲ. ಇದನ್ನು ನಾವು ಖಂಡಿಸುತ್ತೇವೆ. ಮೀಸಲಾತಿಗಳನ್ನು ಒಂದೇ ಕ್ಷೇತ್ರಗಳಿಗೆ ನೀಡಲಾಗಿದೆ. ಎಸ್ಸಿ ಮೀಸಲಾತಿಗೆ ಅದರದೇ ಆದ ಮಾನದಂಡಗಳಿವೆ. ಜನಸಂಖ್ಯೆ ಇಲ್ಲದಿದ್ದರೂ ಅಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X