Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ | ಅಭ್ಯತ್ ಮಂಗಲದಲ್ಲಿ...

ಮಡಿಕೇರಿ | ಅಭ್ಯತ್ ಮಂಗಲದಲ್ಲಿ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು; ತೋಟ, ಗದ್ದೆ ನಾಶ: ಆತಂಕದಲ್ಲಿ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ5 Aug 2022 7:26 PM IST
share
ಮಡಿಕೇರಿ | ಅಭ್ಯತ್ ಮಂಗಲದಲ್ಲಿ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು; ತೋಟ, ಗದ್ದೆ ನಾಶ: ಆತಂಕದಲ್ಲಿ ಗ್ರಾಮಸ್ಥರು

ಮಡಿಕೇರಿ ಆ.5 : ಅಭ್ಯತ್ ಮಂಗಲ ವ್ಯಾಪ್ತಿಯಲ್ಲಿ ಹಾಡಹಗಲೇ ಸಂಚರಿಸುತ್ತಿರುವ ಕಾಡಾನೆಗಳ ಹಿಂಡು ಆತಂಕವನ್ನು ಸೃಷ್ಟಿಸಿದೆ. ಬಹುತೇಕ ಗದ್ದೆಗಳು ಹಾಗೂ ತೋಟಗಳು ವನ್ಯಜೀವಿಯ ದಾಳಿಗೆ ನಾಶವಾಗಿದೆ.

ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಮರಿಯಾನೆಗಳೊಂದಿಗೆ ಗಂಡಾನೆ ಹಾಗೂ ಹೆಣ್ಣಾನೆ ಸಂಚರಿಸುತ್ತಿದ್ದು, ಮುಖ್ಯ ರಸ್ತೆಯ ಮೂಲಕ ಗದ್ದೆ, ತೋಟಗಳಿಗೆ ಲಗ್ಗೆ ಇಡುತ್ತಿವೆ. ಹೀಗೆ ಸಂಚರಿಸುವಾಗ ಮರಿಯಾನೆಗಳು ಕಣ್ಣಿಗೆ ಕಾಣದಾದಾಗ ಜೋರಾಗಿ ಘೀಳಿಡುವ ಕಾಡಾನೆಗಳು ಕೋಪದಿಂದ ತೋಟಗಳನ್ನು ನಾಶ ಮಾಡುತ್ತಿವೆ.

ಇಂದು ಬೆಳೆಗಾರರಾದ ಅಂಚೆಮನೆ ಸುಧಿ ಹಾಗೂ ಆದರ್ಶ ಅವರುಗಳ ಗದ್ದೆಗಳಿಗೆ ನುಗ್ಗಿದ ಆನೆಗಳ ಹಿಂಡು ಸಾಕಷ್ಟು ಹಾನಿ ಮಾಡಿದೆ. 15 ದಿನಗಳ ಹಿಂದೆಯಷ್ಟೇ ಭತ್ತದ ಬಿತ್ತನೆ ಮಾಡಿದ್ದು, ಮುಂದಿನವಾರ ನಾಟಿ ಮಾಡಲು ತಯಾರಿ ನಡೆಸುತ್ತಿರುವಾಗಲೇ ಎಲ್ಲವೂ ಆನೆ ಪಾಲಾಗಿದೆ. ಅಂಚೆಮನೆ ಕುಟುಂಬಕ್ಕೆ ಸೇರಿದ ಕಾಫಿ ಮತ್ತು ಅಡಿಕೆ ತೋಟಕ್ಕೂ ಹಾನಿಯಾಗಿದ್ದು, ಅಡಿಕೆ ಗಿಡಗಳು ನೆಲಸಮವಾಗಿವೆ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಜೆಯಾಗುತ್ತಲೇ ರಸ್ತೆಗಳಲ್ಲಿ ಕಾಡಾನೆಗಳ ಹಿಂಡಿನ ಸಂಚಾರ ಹೆಚ್ಚಾಗಿ ಕಂಡು ಬರುತ್ತಿದ್ದು, ಶಾಲೆ ಬಿಟ್ಟು ಮನೆಗೆ ಬರುವ ಮಕ್ಕಳು ಹಾಗೂ ತೋಟದ ಕಾರ್ಮಿಕರು ಭಯಗೊಂಡಿದ್ದಾರೆ. ಅತ್ತಿಮಂಗಲದಿಂದ ಒಂಟಿಯಂಗಡಿ ವರೆಗೆ ವಿದ್ಯುತ್ ಕಂಬಗಳನ್ನು ಹಾಕಲಾಗಿದೆಯಾದರೂ ಬೀದಿದೀಪಗಳಿಲ್ಲ. ಕಾರ್ಗತ್ತಲಿನಲ್ಲಿ ಕಾಡಾನೆಗಳು ಸಂಚರಿಸುವಾಗ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಅನಾಹುತ ಸಂಭವಿಸುವ ಮೊದಲು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಮತ್ತು ಗ್ರಾ.ಪಂ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. 

ಅತಿಯಾದ ಮಳೆಯೊಂದಿಗೆ ಕಾಡಾನೆಗಳ ದಾಳಿಯೂ ನಿರಂತರವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಉಂಟಾದ ನಷ್ಟದ ಬಗ್ಗೆ ವರದಿ ತಯಾರಿಸಿ ಸೂಕ್ತ ಪರಿಹಾರ ನೀಡಬೇಕು. ಯಾವುದೇ ಕಾರಣಕ್ಕೂ ಅಲ್ಪಪ್ರಮಾಣದ ಪರಿಹಾರ ನೀಡಬಾರದೆಂದು ಬೆಳೆಗಾರರು ಒತ್ತಾಯಿಸಿದ್ದಾರೆ. 

::: ಅಧಿಕಾರಿಗಳ ಭೇಟಿ 

ಇಂದು ಸಂಜೆ ಅಭ್ಯತ್ ಮಂಗಲಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಕಾಡಾನೆಗಳನ್ನು ಕಾಡಿಗಟ್ಟುವ ಭರವಸೆ ನೀಡಿದರು. ಹಾನಿಗೊಳಗಾದ ಗದ್ದೆ ಮತ್ತು ತೋಟವನ್ನು ಪರಿಶೀಲಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X