Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. BBMP ವಾರ್ಡ್ ಮೀಸಲಾತಿಗೆ ವಿರೋಧ;...

BBMP ವಾರ್ಡ್ ಮೀಸಲಾತಿಗೆ ವಿರೋಧ; ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆಗೆ ಕಾಂಗ್ರೆಸ್ ನಾಯಕರ ಯತ್ನ

ವಾರ್ತಾಭಾರತಿವಾರ್ತಾಭಾರತಿ5 Aug 2022 7:49 PM IST
share
BBMP ವಾರ್ಡ್ ಮೀಸಲಾತಿಗೆ ವಿರೋಧ; ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆಗೆ ಕಾಂಗ್ರೆಸ್ ನಾಯಕರ ಯತ್ನ

ಬೆಂಗಳೂರು, ಆ.5: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಪ್ರಕಟಿಸಿರುವ ವಾರ್ಡ್ ಮೀಸಲಾತಿಯನ್ನು ವಿರೋಧಿಸಿ, ಶುಕ್ರವಾರ ವಿಕಾಸಸೌಧದ ನಾಲ್ಕನೆ ಮಹಡಿಯಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ವಿಕಾಸಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕರು, ಮುಖಂಡರು ನಗರಾಭಿವೃದ್ಧಿ ಇಲಾಖೆಯ ಕಚೇರಿಗೆ ‘ಬಿಜೆಪಿ ಕಚೇರಿ’, ‘ಆರೆಸೆಸ್ಸ್ ಕಚೇರಿ’ ಎಂಬ ಭಿತ್ತಿ ಪತ್ರ ಅಂಟಿಸಿ, ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಅಲ್ಲದೆ, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಲು ಯತ್ನಿಸಿದರು. ನಗರಾಭಿವೃದ್ಧಿ ಕಚೇರಿ ಎದುರು ನೂಕುನುಗ್ಗಲು ಉಂಟಾಯಿತು. ಈ ವೇಳೆ ನಗರಾಭಿವೃದ್ಧಿ ಕಚೇರಿ ಎದುರು ಧರಣಿ ಕೂರಿದ ಕಾಂಗ್ರೆಸ್ ನಾಯಕರು, ಸರಕಾರವು ಅಸಮರ್ಪಕವಾದ ಮೀಸಲಾತಿಯನ್ನು ಪ್ರಕಟಿಸಿದೆ. ಸಾಮಾಜಿಕ ನ್ಯಾಯವನ್ನು ಕಡೆಗಣಿಸಿ, ಮನಸೋಇಚ್ಛೆ ಮೀಸಲಾತಿಯನ್ನು ಪ್ರಕಟಿಸಿದೆ ಎಂದು ಕಿಡಿಗಾರಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಾರ್ಡುಗಳ ಮರು ವಿಂಗಡನೆಯು ಕಾನೂನಿನ ಪ್ರಕಾರ ಅಧಿಕಾರಿಗಳ ಮಟ್ಟದಲ್ಲಿ ಆಗಿಲ್ಲ. ಬಿಬಿಎಂಪಿಯ ಮುಖ್ಯ ಆಯುಕ್ತರನ್ನು ವಾರ್ಡುಗಳ ಮರುವಿಂಗಡನೆಗೆ ಸಂಬಂಧಿಸಿದ ಸಮಿತಿಗೆ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಅವರು ಒಂದೇ ಒಂದು ಸಭೆಯನ್ನು ಮಾಡಿಲ್ಲ. ಅವೈಜ್ಞಾನಿಕ ರೀತಿಯಲ್ಲಿ ವಾರ್ಡುಗಳ ಮರುವಿಂಗಡನೆ ಮಾಡಲಾಗಿದೆ ಎಂದು ಕಿಡಿಗಾರಿದರು.

ವಾರ್ಡುಗಳ ಮರುವಿಂಗಡನೆಗೆ ಸಂಬಂಧಿಸಿದಂತೆ ಸುಮಾರು 3,500 ಆಕ್ಷೇಪಣೆಗಳು ಬಂದಿದ್ದವು. ಅವುಗಳ ಬಗ್ಗೆ ಗಮನ ಹರಿಸಿಲ್ಲ. ಇದೀಗ, ಸುಪ್ರೀಂಕೋರ್ಟ್ 7 ದಿನಗಳಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ಸೂಚಿಸುತ್ತಿದ್ದಂತೆ ತಮ್ಮ ಮನಸ್ಸಿಗೆ ಬಂದ ರೀತಿಯಲ್ಲಿ ಮೀಸಲಾತಿಯನ್ನು ಪ್ರಕಟಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಪಕ್ಷದ ಮಾಜಿ ಪಾಲಿಕೆ ಸದಸ್ಯರು ಚುನಾವಣೆಗೆ ನಿಲ್ಲದಂತೆ ಮಾಡಿದ್ದಾರೆ. ಎಲ್ಲೆಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೋ ಆ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಬಿಜೆಪಿ ಶಾಸಕರು ಇರುವ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷವನ್ನು ವಾಮ ಮಾರ್ಗದಲ್ಲಿ ಸೋಲಿಸಲು ನಡೆದಿರುವ ವ್ಯವಸ್ಥಿತ ಸಂಚು ಇದು ಎಂದು ರಾಮಲಿಂಗಾರೆಡ್ಡಿ ಕಿಡಿಗಾರಿದರು.

ಬಿಬಿಎಂಪಿಗೆ ಚುನಾವಣೆ ನಡೆಯಬೇಕು ಎಂಬುದು ನಮ್ಮ ಇಚ್ಛೆ. ಸರಕಾರ ಕಾನೂನು ರೀತಿ ಮೀಸಲಾತಿಯನ್ನು ಘೋಷಿಸಿ ಚುನಾವಣೆ ನಡೆಸಲಿ. ಅಸಮರ್ಪಕವಾಗಿ ಮಾಡಿರುವ ಮೀಸಲಾತಿಗೆ ನಮ್ಮ ವಿರೋಧವಿದೆ, ಸರಕಾರ ಈ ಅನ್ಯಾಯವನ್ನು ಸರಿಪಡಿಸದೆ ಇದ್ದರೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಶಾಸಕರಾದ ದಿನೇಶ್ ಗುಂಡೂರಾವ್, ಕೃಷ್ಣಭೈರೇಗೌಡ, ಝಮೀರ್ ಅಹ್ಮದ್ ಖಾನ್, ರಿಝ್ವಾನ್ ಅರ್ಶದ್, ಮಾಜಿ ಮೇಯರ್ ರಾಮಚಂದ್ರಪ್ಪ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X