Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ನಾಯಕನೆಂದು ಗುರುತಿಸಿಕೊಂಡ...

ಬಿಜೆಪಿ ನಾಯಕನೆಂದು ಗುರುತಿಸಿಕೊಂಡ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 Aug 2022 1:51 PM IST
share
ಬಿಜೆಪಿ ನಾಯಕನೆಂದು ಗುರುತಿಸಿಕೊಂಡ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು

ನೊಯ್ಡಾ: ಉತ್ತರ ಪ್ರದೇಶದ ನೊಯ್ಡಾದ ಸೆಕ್ಟರ್ 93-ಬಿ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ತಾಳೆ ಗಿಡ ನೆಡುವ ವಿಚಾರದಲ್ಲಿ ಉಂಟಾದ  ಜಗಳದ ನಂತರ ಮಹಿಳೆಯೊಬ್ಬರನ್ನು ನಿಂದಿಸಿ ಅವರಿಗೆ ಹಲ್ಲೆಗೈದ ಆರೋಪದ ಮೇಳೆ ನೊಯ್ಡಾ ಪೊಲೀಸರು ಶ್ರೀಕಾಂತ್ ತ್ಯಾಗಿ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಹಲವಾರು ವೀಡಿಯೋಗಳು ಹರಿದಾಡುತ್ತಿದ್ದು ತಾಳೆ ಗಿಡಗಳನ್ನು ನೆಡುವುದರಿಂದ ಆಕೆ ಆತನನ್ನು ತಡೆದಾಗ ಆತ ಆಕೆಯನ್ನು ನಿಂದಿಸಿ ಆಕೆಯನ್ನು ದೂಡುತ್ತಿರುವುದು ಮತ್ತು ಆಕೆಯ ಪತಿಯನ್ನೂ ನಿಂದಿಸುತ್ತಿರುವುದು ಸ್ಪಷ್ಟವಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 354 ಅನ್ವಯ ಪ್ರಕರಣ ದಾಖಲಿಸಲಾಗಿದೆ.

ತಾನು ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹಾಗೂ ಯುವ ಕಿಸಾನ್ ಸಮಿತಿಯ ರಾಷ್ಟ್ರೀಯ ಸಂಘಟಕ ಎಂದು ಆರೋಪಿ ಗುರುತಿಸಿಕೊಂಡಿದ್ದರೂ, ನೊಯ್ಡಾ ಬಿಜೆಪಿ ಮುಖ್ಯಸ್ಥ ಮನೋಜ್ ಗುಪ್ತಾ ಪ್ರತಿಕ್ರಿಯಿಸಿ ಆತ ಬಿಜೆಪಿ ಸದಸ್ಯನಲ್ಲ ಎಂದಿದ್ದಾರೆ.

ತಾಳೆ ಗಿಡಗಳನ್ನು ನೆಡಲು ಅನುಮತಿಯಿದೆ, ತಳಅಂತಸ್ತಿನಲ್ಲಿ ಫ್ಲ್ಯಾಟ್ ನೋಂದಣಿ ಮಾಡುವಾಗ ಶೇ 6ರಷ್ಟು ಸ್ಥಳ ಶುಲ್ಕವನ್ನು ಪಾವತಿಸಿರುವುದರಿಂದ ನನ್ನ ಮನೆ ಹೊರಗೆ ಗಿಡ ನೆಡಲು ನನಗೆ ಹಕ್ಕಿದೆ ಎಂದು ತ್ಯಾಗಿ ಹೇಳುತ್ತಿದ್ದರೂ ಸಂತ್ರಸ್ತೆ ಮಹಿಳೆ ಇದನ್ನು ನಿರಾಕರಿಸುತ್ತಿದ್ದಾರಲ್ಲದೆ ಆತ ತನ್ನ ಪತಿ, ಮಕ್ಕಳನ್ನೂ ನಿಂದಿಸಿದ್ದಾನೆ, ತನ್ನ ಗಿಡಗಳನ್ನು ಮುಟ್ಟಿದರೆ ಪರಿಸ್ಥಿತಿ ನೆಟ್ಟಗಾಗದು ಎಂದು ಹೇಳಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

2019ರಲ್ಲಿ ಈ ಹೌಸಿಂಗ್ ಸೊಸೈಟಿ ನಿವಾಸಿಗಳು ನೊಯ್ಡಾ ಪ್ರಾಧಿಕಾರ ಮತ್ತು ಗೌತಮ್ ಬುದ್ಧ ನಗರ ಪೊಲೀಸರಿಗೆ ತ್ಯಾಗಿ ವಿರುದ್ಧ ದೂರು ನೀಡಿ ಸೊಸೈಟಿಯ ಕಾಮನ್ ಏರಿಯಾದಲ್ಲಿರುವ ಹಸಿರು ಪ್ರದೇಶವನ್ನು ಆತ ಅತಿಕ್ರಮಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅತಿಕ್ರಮಣವನ್ನು 15 ದಿನಗಳೊಳಗೆ ತೆಗೆಯುವಂತೆ ನೊಯ್ಡಾ ಪ್ರಾಧಿಕಾರವು ತ್ಯಾಗಿಗೆ ಅಕ್ಟೋಬರ್ 16, 2019 ರಲ್ಲಿ ಸೂಚಿಸಿತ್ತು. ಈ ನೋಟಿಸ್ ಅನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿ ನೊಯ್ಡಾ ಪ್ರಾಧಿಕಾರ ತನಗೆ ಕಳೆದ ವರ್ಷ ಪತ್ರ ನೀಡಿದೆ ಎಂದು ತ್ಯಾಗಿ ಹೇಳಿಕೊಂಡಿದ್ದಾರೆ.

Longer version of the video where BJP leader Shrikant Tyagi is seen abusing a woman.
Warning : **Abusive language** pic.twitter.com/1ahGdEjIUq

— Mohammed Zubair (@zoo_bear) August 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X