Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೋಷಪೂರಿತ ರಾಷ್ಟ್ರಧ್ವಜಗಳನ್ನು ವಾರ್ಡ್...

ದೋಷಪೂರಿತ ರಾಷ್ಟ್ರಧ್ವಜಗಳನ್ನು ವಾರ್ಡ್ ಕಚೇರಿಗಳಿಗೆ ಹಿಂದಿರುಗಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್

ವಾರ್ತಾಭಾರತಿವಾರ್ತಾಭಾರತಿ6 Aug 2022 6:58 PM IST
share
ದೋಷಪೂರಿತ ರಾಷ್ಟ್ರಧ್ವಜಗಳನ್ನು ವಾರ್ಡ್ ಕಚೇರಿಗಳಿಗೆ ಹಿಂದಿರುಗಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್

ಬೆಂಗಳೂರು, ಆ.6: ದೋಷವುಳ್ಳ ಅಥವಾ ಗುಣಮಟ್ಟವಲ್ಲದ ರಾಷ್ಟ್ರಧ್ವಜಗಳನ್ನು ಸಾರ್ವಜನಿಕರು ಈಗಾಗಲೇ ಪಡೆದಿದ್ದರೆ, ಅಂತಹವರು ಬಿಬಿಎಂಪಿಯ ಯಾವುದೇ ವಾರ್ಡ್ ಕಚೇರಿಗಳಲ್ಲಿ ಅವುಗಳನ್ನು ಹಿಂದುರುಗಿಸಿ ಸರಿಯಾದ ರಾಷ್ಟ್ರಧ್ವಜವನ್ನು ಪಡೆಯಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. 

ಶನಿವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿ, ಎಪ್ಪತೈದನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆ.13 ರಿಂದ 15ರವರೆಗೆ ನಡೆಯಲಿರುವ “ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ(ಹರ್ ಘರ್ ತಿರಂಗಾ)” ಅಭಿಯಾನಕ್ಕಾಗಿ ಬಿಬಿಎಂಪಿಯ ಎಲ್ಲಾ ವಾರ್ಡ್ ಕಚೇರಿಗಳು, ಪ್ರಮುಖ ಜನನಿಬಿಡ ಪ್ರದೇಶಗಳು, ಮಾಲ್‍ಗಳು, ಕಚೇರಿಗಳು, ಇತರೆ ಸ್ಥಳಗಳಲ್ಲಿ ರಾಷ್ಟ್ರಧ್ವಜಗಳನ್ನು ವಿತರಿಸುತ್ತಿದೆ. ವಿತರಿಸಿದ ಧ್ವಜಗಳು ಭಾರತದ ಧ್ವಜ ಸಂಹಿತೆಯ ಪ್ರಕಾರ, ಧ್ವಜದ ಆಕಾರ, ಧ್ವಜದಲ್ಲಿರುವ ಕೇಸರಿ, ಬಿಳಿ ಮತ್ತು ಹಸಿರು ಬಣ್ಣವು ಸಮಾನ ಗಾತ್ರ ಹಾಗೂ ಅಶೋಕ ಚಕ್ರವು ಮಧ್ಯಭಾಗದಲ್ಲಿರಬೇಕು. ಸರಿಯಾಗಿ ಇಲ್ಲದ ರಾಷ್ಟ್ರ ಧ್ವಜಗಳನ್ನು ಅಂದರೆ ಅಳತೆ ವ್ಯತ್ಯಾಸಗಳು, ಅಶೋಕ ಚಕ್ರ ಮಧ್ಯಭಾಗದಲ್ಲಿರದೇ ಇರುವುದು, ಇಂತಹ ರಾಷ್ಟ್ರಧ್ವಜಗಳನ್ನು ಸಾರ್ವಜನಿಕರಿಗೆ, ನಾಗರಿಕರಿಗೆ ನೀಡದಿರಲು ಈಗಾಗಲೇ ಸ್ಪಷ್ಟ ಆದೇಶ ನೀಡಲಾಗಿದೆ ಎಂದರು.
  
ನಗರದ ಕೆಲ ಕಡೆ ಅಸ್ಪಷ್ಟವಾದ ಹಾಗೂ ಧ್ವಜ ನೀತಿಯಂತೆ ಇಲ್ಲದ ರಾಷ್ಟ್ರಧ್ವಜಗಳನ್ನು ನೀಡಲಾಗುತ್ತಿದೆ. ಅದನ್ನು ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು. ಹಾಗೆಯೇ ಅಂತಹ ಧ್ವಜಗಳನ್ನು ಹಿಂಪಡೆದು ಸರಕಾರಕ್ಕೆ ಹಿಂತಿರುಗಿಸಲಾಗುವುದು ಎಂದು ಅವರು ತಿಳಿಸಿದರು.

ಕೆ.ಆರ್. ಮಾರುಕಟ್ಟೆಗೆ ಈಗಾಗಲೇ ಭೇಟಿ ನೀಡಲಾಗಿದೆ. ಅಲ್ಲಿ ಬಯೋಗ್ಯಾಸ್‍ನ ಪ್ಲಾಂಟ್ ಕೆಟ್ಟಿದೆ. ಅದನ್ನು ಸರಿಪಡಿಸಲಾಗುವುದು. ಕೆ.ಆರ್. ಮಾರುಕಟ್ಟೆಯ ಕಟ್ಟಡದಲ್ಲಿ ಸ್ಮಾರ್ಟ್‍ಸಿಟಿ ಲಿಮಿಟೆಡ್ ಕಾಮಗಾರಿಯನ್ನು ನಡೆಸುತ್ತಿದೆ. ಇನ್ನು ಮಾರುಕಟ್ಟೆ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ, ಕಸ ವಿಲೇವಾರಿ ನಡೆಸಲು ಮುಂದಿನ ದಿಗಳಲಲ್ಲಿ ಕ್ರಮವಹಿಸಲಾಗುವುದು ಎಂದರು.

ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾರ್ಗಸೂಚಿಯನ್ನು ಪ್ರಕಟಿಸಿಲ್ಲ. ಸರಕಾರದ ಮಟ್ಟದಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ಬಳಿಕ ಅದರಂತೆ ಕ್ರಮ ಜರುಗಿಸಲಾಗುವುದು. ಆದರೆ ನಗರದಲ್ಲಿ ಪಿಓಪಿ ಗಣೇಶ ಹಾಗೂ ಆರ್ಟಿಫಿಶಿಯಲ್ ಬಣ್ಣ ಹಚ್ಚಿದ ಗಣೇಶ ಸೇರಿದಂತೆ ಸರಕಾರವು ನಿಷೇಧ ಮಾಡಿದ ಗಣೇಶ ಮೂರ್ತಿಗಳನ್ನು ಕೂರಿಸಲು ಅವಕಾಶ ಇಲ್ಲ. ಅವುಗಳನ್ನು ಉತ್ಪಾದಿಸುವ ಸ್ಥಳಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಸಹಕಾರದೊಂದಿಗೆ ದಾಳಿ ನಡೆಸಿ ಕ್ರಮ ವಹಿಸಲಾಗುತ್ತದೆ. 

-ತುಷಾರ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X