Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ಯಾನರ್ ಗಳಲ್ಲಿ ಕನ್ನಡ ಭಾಷೆಯನ್ನು...

ಬ್ಯಾನರ್ ಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಕೆ ಮಾಡಲು ಮುಖ್ಯಮಂತ್ರಿ, ಸಚಿವರಿಗೆ ಪ್ರಾಧಿಕಾರದ ಪತ್ರ

ವಾರ್ತಾಭಾರತಿವಾರ್ತಾಭಾರತಿ6 Aug 2022 8:22 PM IST
share
ಬ್ಯಾನರ್ ಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಕೆ ಮಾಡಲು ಮುಖ್ಯಮಂತ್ರಿ, ಸಚಿವರಿಗೆ ಪ್ರಾಧಿಕಾರದ ಪತ್ರ

ಬೆಂಗಳೂರು, ಆ. 6: ‘ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡುವುದು ತಮ್ಮ ಜವಾಬ್ದಾರಿ ಆಗಿರುತ್ತದೆ' ಎಂದು ಮುಖ್ಯಮಂತ್ರಿ, ಸರಕಾರದ ಕಾರ್ಯದರ್ಶಿಗಳು ಹಾಗೂ ಎಲ್ಲ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಪತ್ರ ಬರೆದಿದ್ದಾರೆ. 

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಸರಕಾರವು ಕನ್ನಡವನ್ನು ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸಲು ಅನೇಕ ಸುತ್ತೋಲೆ ಮತ್ತು ಆದೇಶಗಳನ್ನು  ಹೊರಡಿಸುತ್ತಾ ಬಂದಿದೆ. ಆದರೂ ಸರಕಾರದ ಇಲಾಖೆಗಳು ಕೆಲವು ಸಣ್ಣ-ಪುಟ್ಟ ಸಂಗತಿಗಳಲ್ಲಿ ಕನ್ನಡವನ್ನು ನಿರ್ಲಕ್ಷಿಸುತ್ತಿರುವ ಅಂಶಗಳು ಸರಕಾರದ ಗಮನಕ್ಕೆ ಬಂದಿದ್ದರೂ, ವಿವಿಧ ಇಲಾಖೆಗಳು ನಡೆಸುವ ಅಧಿಕೃತ ಸಮಾರಂಭ, ವೇದಿಕೆಯಲ್ಲಿ ಹಾಕುವ ಬ್ಯಾನರುಗಳಲ್ಲಿ ಕನ್ನಡವನ್ನು ಬಳಸುವುದು ಕಡ್ಡಾಯವಾಗಬೇಕು' ಎಂದು ತಿಳಿಸಿದ್ದಾರೆ.

‘ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆ. ಕನ್ನಡ ಭಾಷೆ ನಮಗೆ ಆದ್ಯತೆ ಭಾಷೆಯಾಗಬೇಕೆ ಹೊರತು, ಆಯ್ಕೆಯಾಗಬಾರದು. ಕನ್ನಡ ಭಾಷೆಯನ್ನು ಬಳಸದ ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಯಕ್ರಮಗಳಲ್ಲಿ ತಾವುಗಳು ಭಾಗವಹಿಸುವುದರಿಂದ ಪ್ರಾಧಿಕಾರದ ಜೊತೆಗೆ ಸರಕಾರಕ್ಕೂ ಮುಜುಗರ ಉಂಟಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಪ್ರಾಧಿಕಾರವನ್ನು ಗುರುತು ಮಾಡಿ ಟೀಕೆ ಟಿಪ್ಪಣಿಗಳನ್ನು ಮಾಡುವುದರೊಂದಿಗೆ ಈ ಸರಕಾರಕ್ಕೆ ಕನ್ನಡದ ಬದ್ಧತೆಯಿಲ್ಲವೆಂಬಂತೆ ಚರ್ಚೆ ನಡೆಯುತ್ತಿದೆ' ಎಂದು ಅವರು ಹೇಳಿದ್ದಾರೆ.

‘ಇನ್ನು ಮುಂದೆ ನಡೆಯುವ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಳವಡಿಸಲಾಗುವ ಪರದೆಗಳಲ್ಲಿ, ಫಲಕಗಳಲ್ಲಿ ಅಲ್ಲದೇ ಒಟ್ಟಾರೆಯಾಗಿ ಕಾರ್ಯಕ್ರಮದ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಬೇಕು' ಎಂದು ನಾಗಾಭರಣ ಇದೇ ಸಂದರ್ಭದಲ್ಲಿ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X