Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ಹಾನಿ ಪರಿಹಾರದಲ್ಲಿ ತಾರತಮ್ಯ ಆರೋಪ:...

ಮಳೆ ಹಾನಿ ಪರಿಹಾರದಲ್ಲಿ ತಾರತಮ್ಯ ಆರೋಪ: 'ಕೊಡಗು ಯಾವ ರಾಜ್ಯದಲ್ಲಿದೆ?' ಎಂದು ಪ್ರಶ್ನಿಸಿದ ನೆಟ್ಟಿಗರು

ಸಿಎಂ ಬೊಮ್ಮಾಯಿ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 Aug 2022 11:45 PM IST
share
ಮಳೆ ಹಾನಿ ಪರಿಹಾರದಲ್ಲಿ ತಾರತಮ್ಯ ಆರೋಪ: ಕೊಡಗು ಯಾವ ರಾಜ್ಯದಲ್ಲಿದೆ? ಎಂದು ಪ್ರಶ್ನಿಸಿದ ನೆಟ್ಟಿಗರು

ಮಡಿಕೇರಿ, ಆ.6: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 200 ಕೋಟಿ ರೂ. ಬಿಡುಗಡೆ ಮಾಡಲು  ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದು, ಕೊಡಗು ಜಿಲ್ಲೆಗೆ ಪರಿಹಾರ ಘೋಷಿಸಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. 

ಇಂದು (ಶನಿವಾರ ) ಸಂಜೆ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಿಂದಲೇ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಸಿಎಂ ಬೊಮ್ಮಾಯಿ,  ಪರಿಹಾರ ಬಿಡುಗೊಳಿಸುವಂತೆ ಆದೇಶಿಸಿದ್ದು, ಈ ಕುರಿತಾದ ಮಾಹಿತಿಯನ್ನು ತನ್ನ ಅಧಿಕೃತ ಫೇಸ್ ಬುಕ್ ಹಾಗೂ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಸಿಎಂ ಅವರ ಟ್ವೀಟ್ ಹಾಗೂ ಫೇಸ್ ಬುಕ್ ಪೋಸ್ಟ್ ನಲ್ಲಿ 21 ಜಿಲ್ಲೆಗಳ ಹೆಸರು ಹಾಗೂ ಪರಿಹಾರದ ಮೊತ್ತದ ವಿವರ ಇರುವ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಕೊಡಗು ಜಿಲ್ಲೆಯ ಹೆಸರು ಕಾಣಿಸುವುದಿಲ್ಲ. ಸದ್ಯ ಇದರ ಸ್ಕ್ರೀನ್ ಶಾಟ್ ಸಾಮಾಜಿಕ ತಾಣದಾದ್ಯಂತ ವೈರಲ್ ಆಗುತ್ತಿದ್ದು, ''ಬೆಂಗಳೂರಿಗೆ ಕಾವೇರಿ ನೀರು ಕೊಡುವ ಪುಟ್ಟ ಕೊಡಗು ನಿಮ್ಮ ಗಮನಕ್ಕೆ ಬರಲಿಲ್ಲವೇ'' ಎಂದು ಸಿಎಂ ಬೊಮ್ಮಾಯಿ ಅವರನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. 


''ನಾವು ಕೊಡಗಿನವರು ಈ ಮಳೆಯಲ್ಲಿ ಅಕ್ಷರಶ ನಲುಗಿ ಹೋಗಿದ್ದೇವೆ, ಗುಡ್ಡಗಳು ಕುಸಿದು ಬೀಳುತ್ತಿವೆ, ಹೊಳೆಗಳು ಉಕ್ಕೇರಿ ಬಂದು ಊರುಗಳು ಮುಳುಗಿ ಹೋಗುತ್ತಿವೆ, ತಾರು ರಸ್ತೆಗಳು ಮಳೆಯಿಂದಾಗಿ ಜರಿದು ಹೋಗುತ್ತಿದೆ, ನಮ್ಮ ಕೃಷಿ ಫಸಲುಗಳು ಅತಿವೃಷ್ಟಿಯಿಂದ ನೆಲಕಚ್ಚುತಿದೆ, ಮೈಸೂರು, ಮಂಡ್ಯ, ಬೆಂಗಳೂರಿಗೆ ಕಾವೇರಿ ನೀರು ಕೊಡುವ ಪುಟ್ಟ ಕೊಡಗು ನಿಮ್ಮ ಗಮನಕ್ಕೆ ಬರಲಿಲ್ಲವೇ ಮುಖ್ಯಮಂತ್ರಿಗಳೇ ? ಸಮಸ್ತ ಕೊಡಗಿನ ಜನರ ಪರವಾಗಿ ನಿಮಗೆ ನಮ್ಮ ಧಿಕ್ಕಾರವಿದೆ'' ಎಂದು ಅಚ್ಚಂದಿರ ಪವನ್ ಪೆಮ್ಮಯ್ಯ ಎಂಬವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 


''ಕೊಡಗಿನ ಶಾಸಕರು, ಸಂಸದರು ಎಲ್ಲರೂ ಬಿಜೆಪಿಗರೆ. ಏನ್ ಪ್ರಯೋಜನ ಬಂತು...!? ಕೊಡಗು ಈ ಮಳೆಗಾಲದಲ್ಲಿ ಅಕ್ಷರಶಃ ಪ್ರವಾಹ, ಗುಡ್ಡ ಕುಸಿತಗಳಿಂದ ನಲುಗಿ ಹೋಗಿದೆ...ಆದರೂ ಪ್ರವಾಹ ಪರಿಹಾರ ಅಂತ ಕರ್ನಾಟಕ ಸರ್ಕಾರ ಬಿಡಿಗಾಸನ್ನೂ ಕೊಡಗಿಗೆ ಬಿಡುಗಡೆ ಮಾಡಿಲ್ಲ...!! ಇದಲ್ಲವೇ ತಾರತಮ್ಯ...ಇದಲ್ಲವೇ ಮಲತಾಯಿ ಧೋರಣೆ...!? ನಿಮ್ಮ ಈ ಧೋರಣೆಗೆ ಕೊಡಗಿನ ಜನರ ಧಿಕ್ಕಾರವಿದೆ'' ಎಂದು ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಿಎಂ ಬೊಮ್ಮಾಯಿ ಅವರ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಜಿಲ್ಲೆ ಹಾಗೂ ಅನುದಾನ ಮೊತ್ತದ ವಿವರ ಇಂತಿದೆ...

ಬಳ್ಳಾರಿ- 5ಕೋಟಿ ರೂ., ಚಿಕ್ಕಮಗಳೂರು-10 ಕೋಟಿ ರೂ., ಚಿತ್ರದುರ್ಗ-5 ಕೋಟಿ ರೂ., ದಕ್ಷಿಣ ಕನ್ನಡ-20 ಕೋಟಿ ರೂ., ದಾವಣಗೆರೆ-15, ಧಾರವಾಡ-5 ಕೋಟಿ ರೂ., ಗದಗ-5 ಕೋಟಿ ರೂ., ಹಾಸನ-15 ಕೋಟಿ ರೂ., ಹಾವೇರಿ-5 ಕೋಟಿ ರೂ., ಕೊಪ್ಪಳ-10 ಕೋಟಿ ರೂ., ಮಂಡ್ಯ-10 ಕೋಟಿ ರೂ., ರಾಯಚೂರು-10 ಕೋಟಿ ರೂ., ಶಿವಮೊಗ್ಗ-10 ಕೋಟಿ ರೂ., ತುಮಕೂರು-10 ಕೋಟಿ ರೂ., ಉಡುಪಿ-15 ಕೋಟಿ ರೂ., ಉತ್ತರ ಕನ್ನಡ-10 ಕೋಟಿ ರೂ., ವಿಜಯನಗರ-5 ಕೋಟಿ ರೂ., ಮೈಸೂರು-15 ಕೋಟಿ ರೂ., ಚಾಮರಾಜನಗರ-5 ಕೋಟಿ ರೂ., ಕೋಲಾರ-5 ಕೋಟಿ ರೂ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ 10 ಕೋಟಿ ರೂ.

@CMofKarnataka @BSBommai @RAshokaBJP ಕೊಡಗು ಜಿಲ್ಲೆ‌ ಯಾವ ರಾಜ್ಯದಲ್ಲಿದೆ ಮುಖ್ಯಮಂತ್ರಿಗಳೇ..? @ASPonnanna @prathapsimhamp @BopaiahG pic.twitter.com/uE77JnPOfp

— ponnanna Machamada (@Ponnannansui) August 6, 2022

ನಿಮಗೆ ಕೊಡಗಿನ ನೀರು ಬೇಕು ಆದರೆ ಕೊಡಗು ನೀರಲ್ಲಿದ್ದರೂ ನಮಗೆ ಚೊಂಬು ಮಾತ್ರ ಸಿಗುತ್ತದೆ

— Navin (@navinchekk) August 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X