Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಫಿನಾಡಿನಲ್ಲಿ ನಿಲ್ಲದ ಮಳೆಯ ಆರ್ಭಟ:...

ಕಾಫಿನಾಡಿನಲ್ಲಿ ನಿಲ್ಲದ ಮಳೆಯ ಆರ್ಭಟ: ಅಲ್ಲಲ್ಲಿ ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ7 Aug 2022 8:06 PM IST
share
ಕಾಫಿನಾಡಿನಲ್ಲಿ ನಿಲ್ಲದ ಮಳೆಯ ಆರ್ಭಟ: ಅಲ್ಲಲ್ಲಿ ಮನೆಗಳಿಗೆ ಹಾನಿ

ಚಿಕ್ಕಮಗಳೂರು: ಜಿಲ್ಲಾದ್ಯಂತ ಮುಂಗಾರು ಮಳೆಯ ಆರ್ಭಟ ರವಿವಾರವೂ ಮುಂದುವರಿದಿದ್ದು, ಭಾರೀ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದ್ದರೇ, ಅಲ್ಲಲ್ಲಿ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳ ಸರಣಿ ಮುಂದುವರಿದಿದೆ.

ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ಕಳಸ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ರವಿವಾರವೂ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಹರಿಯುವ ಭದ್ರಾ, ತುಂಗಾ, ಹೇಮಾವತಿ ಸೇರಿದಂತೆ ಸಣ್ಣಪುಟ್ಟ ಹಳ್ಳಕೊಳ್ಳಗಳೂ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕೆಲ ಗ್ರಾಮಗಳಲ್ಲಿ ನದಿ, ಹಳ್ಳಗಳ ನೆರೆ ನೀರು ಕಾಫಿ, ಅಡಿಕೆ, ಭತ್ತದ ಗದ್ದೆಗಳಿಗೆ ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದರೇ, ಭೂ ಕುಸಿತದಿಂದಾಗಿ ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಪಂ ವ್ಯಾಪ್ತಿಯಲ್ಲಿರುವ ಕವನಹಳ್ಳ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಯಶೋಧ ಎಂಬವರ ಮನೆಯ ಹಿಂಬದಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದಿಂದಾಗಿ ಧರೆಯ ಮಣ್ಣು ಯಶೋಧ ಅವರ ಮನೆಯ ಹಿಂಬದಿಯ ಗೋಡೆ ಮೇಲೆ ಉರುಳಿದ ಪರಿಣಾಮ ಗೋಡೆ ಕುಸಿದು ಮನೆ ಜಖಂಗೊಂಡಿದೆ. ಮೆನಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಕುಟುಂಬದ ಸದಸ್ಯರು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಮನೆಯಲ್ಲಿದ್ದ ಸಾಮಗ್ರಿಗಳನ್ನು ಸ್ಥಳಾಂತರ ಮಾಡಿದ್ದು, ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಭೂಕುಸಿತ ಹೆಚ್ಚಾಗಿ ಮನೆ ಸಂಪೂರ್ಣವಾಗಿ ಮಣ್ಣುಪಾಲಾಗುವ ಭೀತಿ ಕುಟುಂಬಸ್ಥರದ್ದಾಗಿದೆ.

ಕಳಸ ಸುತ್ತಮುತ್ತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಸೇತುವೆ ಮುಳುಗಡೆಗೆ ಅರ್ಧ ಅಡಿ ನೀರು ಬಾಕಿ ಇದ್ದು, ರವಿವಾರ ರಾತ್ರಿ ಮಳೆ ಹೆಚ್ಚಾದಲ್ಲಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಹೇಮಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ತಗ್ಗುಪ್ರದೇಶದಲ್ಲಿ ನದಿಯ ನೆರೆ ನೀರು ಭತ್ತ, ಕಾಫಿ, ಅಡಿಕೆ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಸಂಭವಿಸಿದೆ.

ಉಳಿದಂತೆ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲೂ ರವಿವಾರ ಉತ್ತಮ ಮಳೆಯಾಗಿದ್ದು, ಈ ತಾಲೂಕು ವ್ಯಾಪ್ತಿಯಲ್ಲಿ ರವಿವಾರ ಬೆಳಗ್ಗೆ ಸಾಧಾರಣ ಮಳೆಯಾಗಿದ್ದು, ಮಧ್ಯಾಹ್ನದ ಬಳಿಕ ಮಳೆ ಬಿರುಸುಗೊಂಡಿದೆ. ಶೃಂಗೇರಿ ಪಟ್ಟಣದಲ್ಲಿ ಹರಿಯುವ ತುಂಗಾ ನದಿ ಕೂಡ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಶೃಂಗೇರಿ ದೇವಾಲಯ ಸಮೀಪದ ಕಪ್ಪೆಶಂಕರ ಮಂಟಪ ತುಂಗಾ ನದಿ ನೀರಿನಲ್ಲಿ ಮುಳುಗಡೆಯಾಗಿದ್ದು, ದೇವಾಲಯ ಸಮೀಪದ ಗಾಂಧಿ ಮೈದಾನವೂ ತುಂಗಾ ನದಿಯ ನೆರೆ ನೀರಿನಲ್ಲಿ ಮುಳುಗಡೆಯಾಗುವ ಭೀತಿ ಎದುರಾಗಿದೆ. 

ಚಿಕ್ಕಮಗಳೂರು ತಾಲೂಕಿನಾದ್ಯಂತ ರವಿವಾರ ಬೆಳಗ್ಗೆಯಿಂದ ಸಂಜೆವರೆಗೆ ಸಾಧಾರಣ ಮಳೆಯಾಗಿದ್ದು, ನಿರಂತರ ಮಳೆಯಿಂದಾಗಿ ಚಿಕ್ಕಮಗಳೂರು ನಗರದ ಶಂಕರಪುರ ಬಡಾವಣೆ ಹಾಗೂ ಹೊಸಕೋಟೆ, ಮಾರನಹಳ್ಳಿ ಗ್ರಾಮಗಳಲ್ಲಿ ತಲಾ ಒಂದೊಂದು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕಡೂರು, ತರೀಕೆರೆ, ಅಜ್ಜಂಪುರ ತಾಲೂಕು ವ್ಯಾಪ್ತಿಯಲ್ಲೂ ರವಿವಾರ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಜಿಲ್ಲಾದ್ಯಂತ ಸದ್ಯ ಭತ್ತದ ಗದ್ದೆಗಳಲ್ಲಿ ಕೃಷಿ ಚಟುವಟಿಕೆ, ನಾಟಿ ಕಾರ್ಯ ನಡೆಯುತ್ತಿದ್ದು, ನಿರಂತರ ಮಳೆ ಭತ್ತದ ಗದ್ದೆಗಳ ಕೃಷಿ ಚಟುವಟಿಕೆಗೆ ಅಡ್ಡಿಯುಂಟು ಮಾಡಿದೆ. ಕಾಫಿ, ಅಡಿಕೆ ತೋಟಗಳ ಕೃಷಿ ಕೆಲಸಕ್ಕೂ ನಿರಂತರ ಮಳೆ ತೊಂದರೆಯನ್ನುಂಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X