Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸೇವೆಗೆ ಹೋಗಲು ಬಯಸದ ಹಿರಿಯ...

ಕೇಂದ್ರ ಸೇವೆಗೆ ಹೋಗಲು ಬಯಸದ ಹಿರಿಯ ಐಪಿಎಸ್ ಅಧಿಕಾರಿಗಳು !

ವಾರ್ತಾಭಾರತಿವಾರ್ತಾಭಾರತಿ8 Aug 2022 12:33 PM IST
share
ಕೇಂದ್ರ ಸೇವೆಗೆ ಹೋಗಲು ಬಯಸದ ಹಿರಿಯ ಐಪಿಎಸ್ ಅಧಿಕಾರಿಗಳು !

ಹೊಸದಿಲ್ಲಿ: ಆಲ್ ಇಂಡಿಯಾ ಸರ್ವಿಸ್ (AIS, ಎಐಎಸ್) ಅಧಿಕಾರಿಗಳ ಕೊರತೆ ಕೇಂದ್ರ ಸರಕಾರವನ್ನು ಬಾಧಿಸುತ್ತಿದ್ದು  ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶಗಳಂತೆ ಜುಲೈ 18ರಲ್ಲಿದ್ದಂತೆ ಕೇವಲ ಮೂವರು ಐಪಿಎಸ್(IPS) ಅಧಿಕಾರಿಗಳು ಕೇಂದ್ರೀಯ ಡೆಪ್ಯುಟೇಶನ್‍ಗೆ ಲಭ್ಯಗೊಳ್ಳಲು ಮುಂದೆ ಬಂದಿದ್ದಾರೆ.

ಆದರೆ ಈ ಮೂವರು ಅಧಿಕಾರಿಗಳು ಎಸ್‍ಪಿ ಶ್ರೇಣಿಯವರಾಗಿದ್ದು  ಡಿಜಿಪಿ, ಎಡಿಜಿಪಿ, ಐಜಿ ಮತ್ತು ಡಿಐಜಿ ಶ್ರೇಣಿಯ ಯಾವುದೇ ಅಧಿಕಾರಿ ಕೇಂದ್ರೀಯ ಡೆಪ್ಯುಟೇಶನ್(Deputation) ಮೇರೆಗೆ ನೇಮಕಗೊಳ್ಳಲು ಮುಂದೆ ಬಂದಿಲ್ಲ.

ಅಕ್ಟೋಬರ್ 2018ರಲ್ಲಿ 18 ಐಪಿಎಸ್ ಅಧಿಕಾರಿಗಳು ಕೇಂದ್ರೀಯ ಡೆಪ್ಯುಟೇಶನ್ ಮೇಲೆ ನೇಮಕಗೊಳ್ಳಲು ಮುಂದೆ ಬಂದಿದ್ದರು.

ಸಚಿವಾಲಯದ ಅಂಕಿಅಂಶಗಳಂತೆ ಐಪಿಎಸ್ ಅಧಿಕಾರಿಗಳ ಹುದ್ದೆಗೆ  ಸಿಬಿಐ, ಸಿಎಪಿಎಫ್, ಗುಪ್ತಚರ ಬ್ಯುರೋ ಸೇರಿದಂತೆ 17 ಕೇಂದ್ರೀಯ ಏಜನ್ಸಿಗಳಲ್ಲಿ 263 ಹುದ್ದೆಗಳು ಖಾಲಿಯಿದ್ದು ಇವುಗಳಲ್ಲಿ 94 ಡಿಐಜಿ ಶ್ರೇಣಿಯ ಹಾಗೂ 137 ಎಸ್‍ಪಿ ಶ್ರೇಣಿಯ ಹುದ್ದೆಗಳಾಗಿವೆ.

ನೀತಿ ತಿದ್ದುಪಡಿ:

ಫೆಬ್ರವರಿಯಲ್ಲಿ ಗೃಹ ಸಚಿವಾಲಯವು ಐಪಿಎಸ್ ಅವಧಿ ನೀತಿಗೆ ತಿದ್ದುಪಡಿ ತಂದಿದ್ದು ಇದರ ಪ್ರಕಾರ  ಡಿಐಜಿ ಹಂತದ ಅಧಿಕಾರಿಗಳೇ ಕಡ್ಡಾಯವಾಗಿ ಡಿಐಜಿಗಳಾಗಿ ಕೇಂದ್ರೀಯ ಡೆಪ್ಯುಟೇಶನ್ ಮೇರೆಗೆ ನಿಯೋಜನೆಗೊಳ್ಳಬೇಕೆಂದೇನಿಲ್ಲ, ಬದಲು ಕನಿಷ್ಠ 14 ವರ್ಷ ಸೇವಾನುಭವ ಇರುವ ಅಧಿಕಾರಿಗಳನ್ನು ಕೇಂದ್ರ ಡಿಐಜಿ ಶ್ರೇಣಿಯ ಹುದ್ದೆಗೆ ನೇಮಿಸಬಹುದಾಗಿದೆ.

ಆಗಸ್ಟ್ 4 ರಂದು ಸಿಪಿಐ(ಎಂ)ನ ವಿ ಶಿವದಾಸನ್ ಅವರಿಗೆ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದ ಸಿಬ್ಬಂದಿ ಖಾತೆ ಸಚಿವ ಜಿತೇಂದ್ರ ಸಿಂಗ್,  ಪ್ರಧಾನಿ ಕಾರ್ಯಾಲಯದಲ್ಲಿ 14 ಐಎಎಸ್ ಅಧಿಕಾರಿಗಳನ್ನು  ನಿಯೋಜಿಸಲಾಗಿದೆ, ಇವರಲ್ಲಿ ತಲಾ ಇಬ್ಬರು ಅಧಿಕಾರಿಗಳು ಗುಜರಾತ್, ಬಿಹಾರ ಕೇಡರ್‍ನವರಾಗಿದ್ದರೆ, ತಲಾ ಒಬ್ಬ ಅಧಿಕಾರಿ ಉತ್ತರಾಖಂಡ, ಸಿಕ್ಕಿಂ, ಮಣಿಪುರ, ಮಹಾರಾಷ್ಟ್ರ, ನಾಗಾಲ್ಯಾಂಡ್, ಛತ್ತೀಸಗಢ, ಮಧ್ಯಪ್ರದೇಶ, ಕರ್ನಾಟಕ ಮತ್ತು ಎಜಿಎಂಯುಟಿ ಕೇಡರ್‍ನವರಾಗಿದ್ದಾರೆ. ಕೇಂದ್ರ ಸರಕಾರ ಆಲ್ ಇಂಡಿಯಾ ಸರ್ವಿಸಸ್ ಅಧಿಕಾರಿಗಳ ಕೊರತೆಯನ್ನೂ ಎದುರಿಸುತ್ತಿದ್ದು ಈ ಸಮಸ್ಯೆಯನ್ನು ನೀಗಿಸಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆ  ಡಿಸೆಂಬರ್ 2021ರಲ್ಲಿ  ರಾಜ್ಯ ಸರಕಾರಗಳ ಅನುಮತಿಯಿಲ್ಲದೆಯೇ ಐಎಎಸ್, ಐಪಿಎಸ್ ಮತ್ತು ಐಎಫ್‍ಎಸ್ ಅಧಿಕಾರಿಗಳನ್ನು ಕೇಂದ್ರೀಯ ಸೇವೆಗೆ ನಿಯೋಜಿಸುವ ಕುರಿತಂತೆ ಪ್ರಸ್ತಾಪಿಸಿದ್ದು ಅದು ಇನ್ನೂ ಪರಿಶೀಲನೆ ಹಂತದಲ್ಲಿದೆ.

ಒಬ್ಬ ಐಎಎಸ್ ಅಧಿಕಾರಿಯನ್ನು ಕೇಂದ್ರೀಯ ಡೆಪ್ಯುಟೇಶನ್‍ಗೆ ನಿಯೋಜಿಸುವ ಮೊದಲು ಆತ ಅಥವಾ ಆಕೆಯ ಅನುಮತಿ ಅಗತ್ಯವಾಗಿದೆ.

ಸಿಬ್ಬಂದಿ ಮತ್ತು ತರಬೇತಿ  ಇಲಾಖೆ ಸಂಸತ್ತಿಗೆ ನೀಡಿದ ಮಾಹಿತಿಯಂತೆ ಜನವರಿ 1 ರಲ್ಲಿದ್ದಂತೆ ವಿವಿಧ ರಾಜ್ಯಗಳಲ್ಲಿ 1472 ಐಎಎಸ್  ಹಾಗೂ 864 ಐಪಿಎಸ್ ಅಧಿಕಾರಿಗಳ ಹುದ್ದೆಗಳು ಖಾಲಿಯಿವೆ. ಒಟ್ಟು ಅನುಮೋದಿತ ಐಎಎಸ್ ಹುದ್ದೆಗಳ ಸಂಖ್ಯೆ 6700 ಹಾಗೂ ಐಪಿಎಸ್ ಹುದ್ದೆಗಳ ಸಂಖ್ಯೆ 4900 ಆಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X