Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. VIDEO- ಕಡೂರು: ಹಳ್ಳದಲ್ಲಿ ಕೊಚ್ಚಿ...

VIDEO- ಕಡೂರು: ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ ಸ್ಥಳೀಯರು

ವಾರ್ತಾಭಾರತಿವಾರ್ತಾಭಾರತಿ9 Aug 2022 7:26 PM IST
share
VIDEO- ಕಡೂರು: ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ ಸ್ಥಳೀಯರು

ಕಡೂರು, ಆ.9: ತಾಲೂಕಿನಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರೊಂದನ್ನು ಜೆಸಿಬಿ ಸಹಾಯದಿಂದ ಮೇಲೆತ್ತಿದ ಸ್ಥಳೀಯರು ಕಾರಿನಲ್ಲಿದ್ದ ಇಬ್ಬರ ಪ್ರಾಣ ಕಾಪಾಡಿರುವ ಘಟನೆ ಮಂಗಳವಾರ ಮಂಜಾನೆ ತಾಲೂಕಿನ ಪಿಳ್ಳೇನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ತಾಲೂಕಿನ ಸಖರಾಯಪಟ್ಟಣ ಸಮೀಪದ ಪಿಳ್ಳೇನಹಳ್ಳಿಯ ಮಸಣದಹಳ್ಳದಲ್ಲಿ ರಸ್ತೆಯ ಮೇಲೆ 5 ಅಡಿಯಷ್ಟು ಎತ್ತರಕ್ಕೆ ನೆರೆ ನೀರು ರಭಸವಾಗಿ ಹರಿಯುತ್ತಿದ್ದು, ಕಾರು ಚಾಲಕನೋರ್ವ ಹುಚ್ಚಾಟ ಮಾಡಲು ಹೋಗಿ ಅಪಾಯಕ್ಕೆ ಸಿಲುಕಿಕೊಂಡಿದ್ದ. ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಕಾರನ್ನು ನೀರಿಗಿಳಿಸಿದ್ದು, ಈ ವೇಳೆ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಗಲಾರಂಭಿಸಿತ್ತು.

ಇದನ್ನು ಗಮನಿಸಿದ ಸ್ಥಳೀಯರು ಸಿನಿಮೀಯ ರೀತಿಯಲ್ಲಿ ಕಾರಿನ ಗ್ಲಾಸ್ ಒಡೆದು ಹಗ್ಗ ಕಟ್ಟಿ ಜೆಸಿಬಿ ಮೂಲಕ ಕಾರನ್ನು ಮೇಲೆತ್ತಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ನೀರಿನಲ್ಲಿ ಪ್ರಾಣ ಕಳೆದುಕೊಳ್ಳ ಬೇಕಿದ್ದ ಇಬ್ಬರ ಪ್ರಾಣ ಉಳಿದಿದ್ದು, ರಭಸವಾಗಿ ಹರಿಯುವ ನೀರಿನಲ್ಲಿ ಕಾರು ಚಲಾಯಿಸಿದ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇಬ್ಬರ ಜೀವ ಉಳಿಸಿದ ಸ್ಥಳೀಯರ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಮಾಹಿತಿ ತಿಳಿದ ತಕ್ಷಣ ಸಖರಾಯಪಟ್ಟಣ ಪೊಲೀಸರು ಸ್ಥಲಕ್ಕೆ ಧಾವಿಸಿ ಸ್ಥಳ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕಾರು ಕೇತುಮಾರನಹಳ್ಳಿ ಗ್ರಾಮದ ಗಿರೀಶ್ ಎಂಬವರಿಗೆ ಸೇರಿದ್ದು ಎಂಬುದನ್ನು ಖಚಿತಪಡಿಸಿದ್ದಾರೆ.

ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾದ ತಕ್ಷಣ ಮುನ್ನೆಚ್ಚರಿಕೆಯ ಕ್ರಮವಾಗಿ ರೈಲ್ವೇ ಅಂಡರ್ ಪಾಸ್ ಬಳಿ ಬ್ಯಾರಿಕೇಡ್ ಹಾಕಲಾಗಿತ್ತು. ಸಾರ್ವಜನಿಕರು ಬ್ಯಾರಿಕೇಡ್ ಪಕ್ಕಕ್ಕೆ ಸರಿಸಿ ಓಡಾಡುತ್ತಿದ್ದರು. ಕಾರು ಚಾಲಕ ಕೂಡಾ ಹರಿಯುವ ನೀರಲ್ಲಿ ಸಾಹಸ ಪ್ರದರ್ಶಿಸಲು ಹೋಗಿ ಸಾವಿನ ದವಡೆಗೆ ಸಿಲುಕಿದ್ದ ಎಂದು ಸಖರಾಯಪಟ್ಟಣ ಪೊಲೀಸ್ ಠಾಣೆಯ ಪಿಎಸ್ಸೈ ನವೀನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X