Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಗಾರು ಅಧಿವೇಶನ‌ ಅವಧಿಪೂರ್ವ ಮುಕ್ತಾಯ:...

ಮುಂಗಾರು ಅಧಿವೇಶನ‌ ಅವಧಿಪೂರ್ವ ಮುಕ್ತಾಯ: ಪ್ರಮುಖ ವಿಷಯಗಳಿಗೆ ಉತ್ತರಿಸದೆ ಬಿಜೆಪಿ ಓಡಿಹೋಗಿದೆ ಎಂದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ9 Aug 2022 7:42 PM IST
share
ಮುಂಗಾರು ಅಧಿವೇಶನ‌ ಅವಧಿಪೂರ್ವ ಮುಕ್ತಾಯ: ಪ್ರಮುಖ ವಿಷಯಗಳಿಗೆ ಉತ್ತರಿಸದೆ ಬಿಜೆಪಿ ಓಡಿಹೋಗಿದೆ ಎಂದ ಕಾಂಗ್ರೆಸ್

ಹೊಸದಿಲ್ಲಿ: ಸಂಸತ್ತಿನ ಮುಂಗಾರು ಅಧಿವೇಶನ ನಿಗದಿತ ಸಮಯಕ್ಕಿಂತ ನಾಲ್ಕು ದಿನ ಮುಂಚಿತವಾಗಿ ಕೊನೆಗೊಂಡಿದ್ದು, ಬಿಜೆಪಿಯು ರಾಷ್ಟ್ರೀಯ ಪ್ರಮುಖ ವಿಷಯಗಳಿಗೆ ಪ್ರತಿಕ್ರಿಯಿಸದೆ "ಓಡಿಹೋಗಿದೆ" ಎಂದು ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

"ಕಾಂಗ್ರೆಸ್ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಮತ್ತು ಅಗ್ನೀಪಥ್‌ ಯೋಜನೆಯ ಬಗ್ಗೆ ಮಂಡಿಸಲು ಬಯಸಿದೆ" ಎಂದು ಪಕ್ಷದ ಲೋಕಸಭಾ ಸಂಸದ ಗೌರವ್ ಗೊಗೊಯ್ ಮಂಗಳವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. “ಭಾರತ ಮತ್ತು ಚೀನಾ ನಡುವೆ ಸುಮಾರು 16 ಬಾರಿ ಗಡಿ ವಿವಾದಗಳ ಕುರಿತು ಸಭೆಗಳು ನಡೆದಿವೆ ಮತ್ತು ಇಂದು ಭಾರತೀಯ ಸೇನೆಯು ಗಡಿಯಲ್ಲಿ ಗಸ್ತು ತಿರುಗಲು ಸಾಧ್ಯವಿಲ್ಲ. ಬಿಜೆಪಿಯು ಇಂತಹ ವಿಷಯಗಳ ಚರ್ಚೆಯಿಂದ ಓಡಿಹೋಗಲು ಬಯಸಿದೆ” ಎಂದು ಅವರು ಹೇಳಿದ್ದಾರೆ.

 ಅಧಿವೇಶನವನ್ನು ಮೂಲತಃ ಜುಲೈ 18 ಮತ್ತು ಆಗಸ್ಟ್ 12 ರ ನಡುವೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಪುನರಾರಂಭಕ್ಕೆ ನಿಗದಿತ ದಿನಾಂಕವಿಲ್ಲದೆ ಮುಂದೂಡಲ್ಪಟ್ಟಿದ್ದರಿಂದ ಮಾನ್ಸೂನ್ ಅಧಿವೇಶನ ಸೋಮವಾರ ಕೊನೆಗೊಂಡಿತ್ತು.

 ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರೊಂದಿಗೆ ಮಾತನಾಡಿದ ಗೊಗೊಯ್, ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಬಿಜೆಪಿ ಪ್ರಶ್ನೆಗಳನ್ನು ಎದುರಿಸುವುದನ್ನು ತಪ್ಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಇದರ ಬಗ್ಗೆ ಕೇಳಿದಾಗ, ಹಣಕಾಸು ಸಚಿವರು ಉಕ್ರೇನ್, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಇತಿಹಾಸದ ಬಗ್ಗೆ ಮಾತನಾಡುತ್ತಾರೆ, ಆದರೆ ಹಣದುಬ್ಬರದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅವರ ಬಳಿ ಉತ್ತರವಿಲ್ಲ ಎಂದು ಗೊಗೊಯ್ ಹೇಳಿದರು.

ಸದನದಲ್ಲಿ ಬೆಲೆ ಏರಿಕೆ ವಿಷಯ ಪ್ರಸ್ತಾಪಿಸಿದ ಸಂಸದರ ವಿರುದ್ಧ ಕ್ರಮ ಏಕೆ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ ಗೊಗೋಯ್‌, ಜುಲೈ 25 ರಂದು ಲೋಕಸಭೆಯಲ್ಲಿ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಪ್ರತಿಭಟನಾತ್ಮಕವಾಗಿ ಫಲಕಗಳನ್ನು ಬಳಸಿದ ನಂತರ ಅಮಾನತುಗೊಂಡ ನಾಲ್ವರು ಕಾಂಗ್ರೆಸ್ ಸಂಸದರನ್ನು ಉಲ್ಲೇಖಿಸಿದ್ದಾರೆ.

"ಇಂದು, ನಾವು ಪ್ರಶ್ನೋತ್ತರ ಅವಧಿಯಲ್ಲಿ ಮಂತ್ರಿಗಳಿಂದ ಬೆದರಿಕೆಗಳನ್ನು ಪಡೆಯುತ್ತೇವೆಯೇ ಹೊರತು, ಉತ್ತರಗಳಲ್ಲ" ಎಂದು ಅವರು ಹೇಳಿದರು. ಕಾರ್ಪೊರೇಟ್ ವ್ಯವಹಾರಗಳ ಸಚಿವೆ (ನಿರ್ಮಲಾ ಸೀತಾರಾಮನ್) ಅವರು ಅಸಂಸದೀಯ ಭಾಷೆ ಬಳಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಗೊಗೋಯ್‌ ಹೇಳಿದರು.

ಇದನ್ನೂ ಓದಿ: ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿದ ನಿತೀಶ್‌ ಕುಮಾರ್‌

ಈ ನಡುವೆ, ರಾಜ್ಯಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್ ಅವರು ಆಗಸ್ಟ್ 10 ಮತ್ತು 12 ರಂದು ಪ್ರತಿಪಕ್ಷಗಳು ಚರ್ಚೆಗೆ ಸಿದ್ಧವಾಗಿವೆ, ಆದರೆ ಸರ್ಕಾರದ ಕಡೆಯಿಂದ ಯಾವುದೇ ಉತ್ಸಾಹ ಕಂಡುಬಂದಿಲ್ಲ ಎಂದು ಹೇಳಿದರು.

ಹಣದುಬ್ಬರ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲೆ ವಿಧಿಸಿರುವ ಜಿಎಸ್‌ಟಿ ಮೊದಲಾದ ವಿಷಯಗಳ ಬಗ್ಗೆ ಸಂಸತ್ತಿನ ಹೊರಗೆ ಕಾಂಗ್ರೆಸ್‌ ಉತ್ತರವನ್ನು ಕೇಳಲಿದೆ ಎಂದು ರಮೇಶ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X