Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾ ಸಂಘರ್ಷ: ವಿಶ್ವಸಂಸ್ಥೆ ಭದ್ರತಾ...

ಗಾಝಾ ಸಂಘರ್ಷ: ವಿಶ್ವಸಂಸ್ಥೆ ಭದ್ರತಾ ಸಮಿತಿ ತುರ್ತು ಸಭೆ

ವಾರ್ತಾಭಾರತಿವಾರ್ತಾಭಾರತಿ9 Aug 2022 9:37 PM IST
share
ಗಾಝಾ ಸಂಘರ್ಷ: ವಿಶ್ವಸಂಸ್ಥೆ ಭದ್ರತಾ ಸಮಿತಿ ತುರ್ತು ಸಭೆ

ವಿಶ್ವಸಂಸ್ಥೆ, ಆ.9: ಗಾಝಾದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಸಮಿತಿ ತುರ್ತು ಸಭೆ ನಡೆಸಿದ್ದು, ಇಸ್ರೇಲ್ ಸೇನೆ ಮತ್ತು ಪೆಲೆಸ್ತೀನ್ ಹೋರಾಟಗಾರರ ನಡುವಿನ ಘರ್ಷಣೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಏರ್ಪಟ್ಟಿರುವ ದುರ್ಬಲ ಕದನ ವಿರಾಮದ ಬಗ್ಗೆ ಹಲವು ಸದಸ್ಯರು ತೀವ್ರ ಕಳವಳ ಮತ್ತು ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಸಭೆಯ ಆರಂಭದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಮಧ್ಯಪ್ರಾಚ್ಯ ದೇಶಗಳಿಗೆ ವಿಶ್ವಸಂಸ್ಥೆಯ ಪ್ರತಿನಿಧಿ ಟಾರ್ ವೆನೆಸ್ಲ್ಯಾಂಡ್ ‘ ಕದನ ವಿರಾಮ ದುರ್ಬಲವಾಗಿದೆ. ಯಾವುದೇ ಯುದ್ಧದ ಪುನರಾರಂಭವು ಪೆಲೆಸ್ತೀನೀಯರು ಮತ್ತು ಇಸ್ರೇಲಿಯನ್ನರಿಗೆ ವಿನಾಶಕಾರಿ ಪರಿಣಾಮವನ್ನುಂಟು ಮಾಡುತ್ತದೆ ಮತ್ತು ಪ್ರಮುಖ ವಿಷಯಗಳ ಕುರಿತ ರಾಜಕೀಯ ಅಭಿವೃದ್ಧಿಗೆ ತೊಡಕಾಗಲಿದೆ’ ಎಂದು ಎಚ್ಚರಿಸಿದರು.

 ಗಾಝಾದಲ್ಲಿನ ಹಿಂಸಾಚಾರದ ಮೌಲ್ಯಮಾಪನವನ್ನು ವಿಶ್ವಸಂಸ್ಥೆ ನಡೆಸುತ್ತಿದ್ದು ಸಶಸ್ತ್ರ ಪೆಲೆಸ್ತೀನ್ ಗುಂಪುಗಳು ಹಾರಿಸಿದ ಸುಮಾರು 1,100 ಕ್ಷಿಪಣಿಗಳಲ್ಲಿ 20%ದಷ್ಟು ಗಾಝಾ ಪಟ್ಟಿಯೊಳಗೆ ಬಿದ್ದಿವೆ ಎಂದವರು ಮಾಹಿತಿ ನೀಡಿದರು. ಗಾಝಾದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಭದ್ರತಾ ಸಮಿತಿ ಕಳವಳಗೊಂಡಿದ್ದು ಅಲ್ಲಿನ ಸಂಘರ್ಷ ಪೂರ್ಣ ಪ್ರಮಾಣದ ಸೇನಾ ಸಂಷರ್ಘ ಮರುಕಳಿಸುವುದಕ್ಕೆ ಕಾರಣವಾಗಬಹುದು ಮತ್ತು ಗಾಝಾದಲ್ಲಿ ಈಗಾಗಲೇ ಭೀಕರವಾಗಿರುವ ಮಾನವೀಯ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಬಹುದು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ರಶ್ಯ ರಾಯಭಾರಿ ವ್ಯಾಸಿಲಿ ನೆಬೆಂಝಿಯಾ ಹೇಳಿದರು.

ಗಾಝಾದಲ್ಲಿನ ಪರಿಸ್ಥಿತಿಗೆ ಇಸ್ಲಾಮಿಕ್ ಜಿಹಾದ್ ಪಡೆಯನ್ನು ಸಂಪೂರ್ಣ ಹೊಣೆಯನ್ನಾಗಿಸಬೇಕು ಎಂದು ವಿಶ್ವಸಂಸ್ಥೆಗೆ ಇಸ್ರೇಲ್ ರಾಯಭಾರಿ ಗಿಲಾಡ್ ಎರ್ಡನ್ ಆಗ್ರಹಿಸಿದ್ದಾರೆ. ಸಭೆಗೂ ಮುನ್ನ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ಸಭೆಯ ಏಕೈಕ ಫಲಿತಾಂಶವೆಂದರೆ ಇಸ್ಲಾಮಿಕ್ ಜಿಹಾದ್ ಗಳನ್ನು ಖಂಡಿಸುವುದು, ಅವರ ಅವಳಿ ಯುದ್ದಾಪರಾಧ(ಇಸ್ರೇಲ್ ಜನರನ್ನು ಗುರಿಯಾಗಿಸಿ ದಾಳಿ ಮತ್ತು ಮೂಲಭೂತವಾದಿ ಉಗ್ರವಾದಿಗಳ ಹೆಗಲ ಮೇಲೆ ಬಂದೂಕವಿರಿಸಿ ಅಮಾಯಕ ಪೆಲೆಸ್ತೀನೀಯರನ್ನು ಹತ್ಯೆ ಮಾಡಿರುವುದು)ಕ್ಕೆ ಹೊಣೆಯನ್ನಾಗಿಸುವುದು.

ಇಸ್ರೇಲ್ ನಾಗರಿಕರತ್ತ ರಾಕೆಟ್ ದಾಳಿ ನಡೆಸಿದ ಅವರು ಗಾಝಾ ನಿವಾಸಿಗಳನ್ನು ಮಾನವ ಗುರಾಣಿಯಾಗಿ ಬಳಸಿಕೊಂಡಿದ್ದಾರೆ ’ ಎಂದು ಹೇಳಿದರು. ಭಯೋತ್ಪಾದಕರ ಬೆದರಿಕೆಯ ವಿರುದ್ಧ ತನ್ನ ಜನರನ್ನು ರಕ್ಷಿಸುವ ಎಲ್ಲಾ ಹಕ್ಕು ಇಸ್ರೇಲ್ಗೆ ಇದೆ ಎಂದು ವಿಶ್ವಸಂಸ್ಥೆಗೆ ಅಮರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್ಫೀಲ್ಡ್ ಸಭೆಯಲ್ಲಿ ಪ್ರತಿಪಾದಿಸಿದರು. ಕಳೆದ 11 ದಿನದಿಂದ ಗಾಝಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಕನಿಷ್ಟ 250 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

 ಈಜಿಪ್ಟ್ ಮಧ್ಯಸ್ಥಿಕೆಯಲ್ಲಿ ನಡೆದ ಕದನವಿರಾಮ ಒಪ್ಪಂದ ರವಿವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಆದರೆ ಕದನವಿರಾಮವನ್ನು ಉಲ್ಲಂಘಿಸಿದರೆ ಪ್ರತಿಕ್ರಿಯಿಸುವ ಹಕ್ಕನ್ನು ಎರಡೂ ಕಡೆಯವರು ಉಳಿಸಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X