Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಕ್ರಮಣಕ್ಕೆ ಚೀನಾ ಸಿದ್ಧತೆ;...

ಆಕ್ರಮಣಕ್ಕೆ ಚೀನಾ ಸಿದ್ಧತೆ; ಸ್ವರಕ್ಷಣೆಗೆ ಸಮರಾಭ್ಯಾಸ ಆರಂಭ: ತೈವಾನ್

ವಾರ್ತಾಭಾರತಿವಾರ್ತಾಭಾರತಿ9 Aug 2022 10:01 PM IST
share
ಆಕ್ರಮಣಕ್ಕೆ ಚೀನಾ ಸಿದ್ಧತೆ; ಸ್ವರಕ್ಷಣೆಗೆ ಸಮರಾಭ್ಯಾಸ ಆರಂಭ: ತೈವಾನ್

ತೈಪೆ, ಆ.9: ದ್ವೀಪರಾಷ್ಟ್ರದ ಮೇಲೆ ಆಕ್ರಮಣ ನಡೆಸಲು ಚೀನಾ ಸನ್ನದ್ಧಗೊಂಡಿರುವುದರಿಂದ ಸ್ವರಕ್ಷಣೆಗಾಗಿ ‘ಲೈವ್ ಫೈರ್’ ಫಿರಂಗಿ ಸಮರಾಭ್ಯಾಸ ಆರಂಭಿಸಲಾಗಿದೆ ಎಂದು ತೈವಾನ್ ಸೇನೆ ಮಂಗಳವಾರ ಹೇಳಿದೆ.

 ಪಿಂಗ್ಟುಂಗ್ ನಗರದಲ್ಲಿ ಮಂಗಳವಾರ ಬೆಳಿಗ್ಗೆ 6:10ಕ್ಕೆ (ಭಾರತೀಯ ಕಾಲಮಾನ) ಲೈವ್ ಫೈರ್ ಡ್ರಿಲ್ ಅಥವಾ ಸಜೀವ ಮದ್ದುಗುಂಡುಗಳನ್ನು ಬಳಸಿ ನಡೆಸುವ ಸಮರಾಭ್ಯಾಸಕ್ಕೆ ಚಾಲನೆ ನೀಡಲಾಗಿದೆ ಎಂದು ತೈವಾನ್ನ 8ನೇ ಆರ್ಮಿ ಕಾರ್ಪ್ಸ್ನ ವಕ್ತಾರ ಲೂವ್ ವೊಯ್ಜ್ಯೆ ಹೇಳಿದ್ದಾರೆ. ಚೀನಾದ ಬೆದರಿಕೆ, ಆಕ್ಷೇಪದ ಮಧ್ಯೆಯೂ ಅಮೆರಿಕ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್ಗೆ ಭೇಟಿ ನೀಡಿದ್ದರಿಂದ ಆಕ್ರೋಶಗೊಂಡಿರುವ ಚೀನಾ ಆಗಸ್ಟ್ 3ರಂದು ತೈವಾನ್ ಸುತ್ತಮುತ್ತ ಸೇನಾ ಸಮರಾಭ್ಯಾಸಕ್ಕೆ ಚಾಲನೆ ನೀಡಿತ್ತು.

ಈ ಮಧ್ಯೆ, ಚೀನಾವು ಸಮರಾಭ್ಯಾಸದ ನೆಪದಲ್ಲಿ ತೈವಾನ್ ಮೇಲೆ ಆಕ್ರಮಣಕ್ಕೆ ಸರ್ವ ಸಿದ್ಧತೆ ನಡೆಸುತ್ತಿದೆ ಎಂದು ತೈವಾನ್ನ ವಿದೇಶಾಂಗ ಸಚಿವ ಜೋಸೆಫ್ ವೂ ಆರೋಪಿಸಿದ್ದಾರೆ. ಚೀನಾವು ಭಾರೀ ಪ್ರಮಾಣದ ಸಮರಾಭ್ಯಾಸ, ಕ್ಷಿಪಣಿ ಉಡಾವಣೆಯ ಜತೆ ಸೈಬರ್ ದಾಳಿಯನ್ನೂ ನಡೆಸುತ್ತಿದೆ. ತೈವಾನ್ನ ಆತ್ಮಸ್ಥೈರ್ಯವನ್ನು ದುರ್ಬಲಗೊಳಿಸುವ ತಪ್ಪು ಮಾಹಿತಿ ಪ್ರಚಾರ ಮತ್ತು ಆರ್ಥಿಕ ದಬ್ಬಾಳಿಕೆ ಎಸಗುತ್ತಿದೆ ಎಂದವರು ಪ್ರತಿಪಾದಿಸಿದ್ದಾರೆ.

ರಕ್ಷಣಾ ವಿಷಯದ ಸಭೆ, ಹವಾಮಾನ ಸಹಕಾರ ಒಪ್ಪಂದ ಸಭೆ ಸೇರಿದಂತೆ ಪ್ರಮುಖ ವಿಷಯಗಳಲ್ಲಿ ಅಮೆರಿಕದೊಂದಿಗಿನ ಸಂಪರ್ಕವನ್ನು ಕಡಿದುಕೊಂಡಿರುವುದಾಗಿ ಶುಕ್ರವಾರ ಚೀನಾ ಘೋಷಿಸಿತ್ತು. ತೈವಾನ್ ಜಲಸಂಧಿಯಲ್ಲಿನ ಈಗಿನ ಉದ್ವಿಗ್ನ ಪರಿಸ್ಥಿತಿಯು ಸಂಪೂರ್ಣವಾಗಿ ಪ್ರಚೋದನಕಾರಿಯಾಗಿದ್ದು ಇದಕ್ಕೆ ಅಮೆರಿಕವೇ ಹೊಣೆಯಾಗಿದೆ ಮತ್ತು ಇದರ ಗಂಭೀರ ಪರಿಣಾಮವನ್ನು ಆ ದೇಶವೇ ಎದುರಿಸಬೇಕು. ಎರಡೂ ದೇಶಗಳು ಮತ್ತು ಮಿಲಿಟರಿಗಳ ನಡುವಿನ ಸಂಬಂಧ, ತೈವಾನ್ ಸಮಸ್ಯೆ ಇತ್ಯಾದಿ ವಿಷಯಗಳ ಬಗ್ಗೆ ಚೀನಾದ ಸ್ಪಷ್ಟ ಮತ್ತು ದೃಢ ನಿಲುವನ್ನು ಹಲವು ಬಾರಿ ಸ್ಪಷ್ಟಪಡಿಸಲಾಗಿದೆ ಎಂದು ಚೀನಾದ ರಕ್ಷಣಾ ಇಲಾಖೆಯ ವಕ್ತಾರ ವು ಕ್ವಿಯಾನ್ರನ್ನು ಉಲ್ಲೇಖಿಸಿ ಕ್ಸಿನ್ಹುವಾ ಸುದ್ದಿಸಂಸ್ಥೆ ಸೋಮವಾರ ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X