Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತ್ತೊಮ್ಮೆ ಏಕಾಂಗಿಯಾಗಿ ಜಗತ್ತು ಸುತ್ತುವ...

ಮತ್ತೊಮ್ಮೆ ಏಕಾಂಗಿಯಾಗಿ ಜಗತ್ತು ಸುತ್ತುವ ಹಂಬಲ: ಅಮೃತಾ ಜೋಷಿ

​ಏಕಾಂಗಿ ಬೈಕ್ ರೈಡರ್ ಮಂಗಳೂರಿಗೆ

ವಾರ್ತಾಭಾರತಿವಾರ್ತಾಭಾರತಿ10 Aug 2022 6:13 PM IST
share
ಮತ್ತೊಮ್ಮೆ ಏಕಾಂಗಿಯಾಗಿ ಜಗತ್ತು ಸುತ್ತುವ ಹಂಬಲ: ಅಮೃತಾ ಜೋಷಿ

ಮಂಗಳೂರು, ಆ.10: ಸುಮಾರು 6 ತಿಂಗಳ ಕಾಲ ಭಾರತದ ಎಲ್ಲ ರಾಜ್ಯಗಳನ್ನು ಸುತ್ತಾಡಿ, ಸುಮಾರು 23 ಸಾವಿರ ಕಿ.ಮೀ ಕ್ರಮಿಸಿದ ಏಕಾಂಗಿ ಸಾಹಸಿ ಬೈಕ್ ರೈಡರ್, ಕಾಸರಗೋಡು ಮೂಲದ 21ರ ಯುವತಿ ಅಮೃತಾ ಜೋಷಿ ಇಂದು ಮಂಗಳೂರಿಗೆ ಆಗಮಿಸಿದರು.

ಈ ಸಂದರ್ಭ ಅಮೃತ ಜೋಷಿ,  ತಾನು ಹೈಸ್ಕೂಲ್ ವಿದ್ಯಾಭ್ಯಾಸ ಮಾಡಿದ ನಗರದ ಕೆನರಾ ಶಾಲೆಗೆ ಆಗಮಿಸಿ ಶಿಕ್ಷಣ ಸಂಸ್ಥೆಯ ಸ್ಥಾಪಕ ದಿ.ಅಮ್ಮೆಂಬಳ ಸುಬ್ಬ ರಾವ್ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಹೈಸ್ಕೂಲ್ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅಮೃತಾ ಜೋಷಿ, ಭಾರತೀಯ ಸೇನಾ ಗೌರವಾರ್ಥ ಮತ್ತು ಜನಾಂಗೀಯ ಸಮಾನತೆಗಾಗಿ ಬೈಕ್‌ನಲ್ಲಿ ದೇಶ ಸುತ್ತಿದ್ದೇನೆ. ಕಾಸರಗೋಡು ಪ್ರವೇಶಿಸುವ ಮೂಲಕ ನನ್ನ ಈ ಯಾತ್ರೆ ಮುಕ್ತಾಯಗೊಳ್ಳುತ್ತಿದ್ದು, ಮತ್ತೊಮ್ಮೆ ಏಕಾಂಗಿಯಾಗಿ ಜಗತ್ತು ಸುತ್ತುವ ಹಂಬಲ ಹೊಂದಿದ್ದೇನೆ ಎಂದು ಹೇಳಿದರು.

ತನ್ನ ಯಾತ್ರೆಯ ಬಗ್ಗೆ ವಿವರ ನೀಡಿದ ಅಮೃತಾ ಜೋಷಿ, ಫೆ.4ರಂದು ಕೇರಳದ ಕ್ಯಾಲಿಕಟ್‌ನಿಂದ ಬೈಕ್‌ನಲ್ಲಿ ಸಂಚಾರ ಆರಂಭಿಸಿದ್ದೆ. ತಮಿಳ್ನಾಡು, ಆಂಧ್ರಪ್ರದೇಶ ಬಳಿಕ ಈಶಾನ್ಯ ರಾಜ್ಯಗಳಿಗೆ ತೆರಳಿದೆ. ಚೀನಾ ಗಡಿ ಪ್ರದೇಶ ತವಾಂಗ್‌ನಲ್ಲಿ ಸಂಚಾರ ಕೊನೆಗೊಳಿಸುವ ಉದ್ದೇಶ ಹೊಂದಿದ್ದೆ. ಎ.8ರಂದು ಅಲ್ಲಿಂದ ಮತ್ತೆ ಸಂಚಾರ ಮುಂದುವರಿಸಲು ತೀರ್ಮಾನಿಸಿ ನೇಪಾಳ, ಮ್ಯಾನ್‌ಮಾರ್ ದೇಶಗಳಿಗೂ ಭೇಟಿ ನೀಡಿದ್ದೇನೆ ಎಂದರು.

ಕಾಸರಗೋಡಿನ ಕುಂಬಳೆ ನಿವಾಸಿ ಅಶೋಕ್ ಜೋಷಿ ಮತ್ತು ಅನ್ನಪೂರ್ಣ ದಂಪತಿಯ ಪುತ್ರಿ ಅಮೃತಾ ಜೋಷಿ. ಈಕೆಗೆ ಸಹೋದರಿ ಹಾಗೂ ಸಹೋದರ ಇದ್ದಾರೆ. ಮಂಗಳೂರಿನ ಕೆನರಾದಲ್ಲಿ ಹೈಸ್ಕೂಲ್ ಬಳಿಕ ಕೆಪಿಟಿಯಲ್ಲಿ ಪದವಿ ವ್ಯಾಸಂಗ ಮಾಡಿದ್ದಾರೆ. 12 ವರ್ಷ ಇರುವಾಗಲೇ ರೈಡಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಅಮೃತಾ, 18 ವರ್ಷ ಬಳಿಕ ಬೈಕ್ ಸವಾರಿ ಶುರು ಮಾಡಿದ್ದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಏಕಾಂಗಿ ದೇಶ ಸುತ್ತುವ ಸಾಹಸಕ್ಕೆ ಈಕೆ ಕೈಹಾಕಿದ್ದರು. ಅದಕ್ಕೂ ಮೊದಲು ಎರಡೂವರೆ ವರ್ಷ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರು ಅಮೃತಾ. ತನ್ನ ಪುತ್ರಿ ಬೈಕ್ ಸಂಚಾರ ಮಾಡಿ ಸಾಧನೆ ಮಾಡಬೇಕು ಎಂಬ ಹಂಬಲ ಹೊಂದಿದ್ದರು. ಇದೀಗ ತನ್ನ ತಂದೆಯ ಆಸೆಯನ್ನು ಈಡೇರಿಸಿರುವುದಾಗಿ ಅಮೃತಾ ಜೋಷಿ ಹೇಳಿದರು.

ಈ ಸಂದರ್ಭ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಂಚಾಲಕ ಬಸ್ತಿ ಪುರುಷೋತ್ತಮ ಶೆಣೈ, ಕಾರ್ಯದರ್ಶಿ ರಂಗನಾಥ ಭಟ್, ಜತೆ ಕಾರ್ಯದರ್ಶಿ ಸುರೇಶ್ ಕಾಮತ್, ಆಡಳಿತ ಮಂಡಳಿ ಸದಸ್ಯ ನರೇಶ್ ಶೆಣೈ, ಮುಖ್ಯಗುರು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

"ದಿನಂಪ್ರತಿ ಸರಾಸರಿ 500 ಕಿ.ಮೀ. ಪ್ರಯಾಣಿಸುತ್ತಿದ್ದೆ. ಎಲ್ಲಿ ಪ್ರಯಾಣ ಮುಗಿಯುತ್ತದೋ ಅಲ್ಲಿ ವಾಸ್ತವ್ಯ ಮಾಡುತ್ತಿದ್ದೆ. ನನಗೆ ಎಲ್ಲಿಯೂ ಕಿರುಕುಳ, ತೊಂದರೆ ಯಾರಿಂದಲೂ ಆಗಿಲ್ಲ. ಈಶಾನ್ಯ ರಾಜ್ಯಗಳಲ್ಲಂತೂ ಸ್ವಂತ ಸಹೋದರಿಯಂತೆ ನನ್ನನ್ನು ಸ್ವಾಗತಿಸಿದ್ದಾರೆ".
ಅಮೃತಾ ಜೋಷಿ, ಬೈಕ್ ಸವಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X