Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಪಿ ಚಳವಳಿಯಿಂದ ಅಡ್ವಾಣಿ...

ಜೆಪಿ ಚಳವಳಿಯಿಂದ ಅಡ್ವಾಣಿ ರಥಯಾತ್ರೆವರೆಗೆ; ರಾಷ್ಟ್ರ ರಾಜಕಾರಣದ ಮೇಲೆ ಬಿಹಾರ ರಾಜಕೀಯ ಪ್ರಭಾವ ಹೀಗೆ..

ವಾರ್ತಾಭಾರತಿವಾರ್ತಾಭಾರತಿ11 Aug 2022 8:29 AM IST
share
ಜೆಪಿ ಚಳವಳಿಯಿಂದ ಅಡ್ವಾಣಿ ರಥಯಾತ್ರೆವರೆಗೆ; ರಾಷ್ಟ್ರ ರಾಜಕಾರಣದ ಮೇಲೆ ಬಿಹಾರ ರಾಜಕೀಯ ಪ್ರಭಾವ ಹೀಗೆ..

ಹೊಸದಿಲ್ಲಿ: ಪ್ರಾದೇಶಿಕ ಪಕ್ಷಗಳಿಂದ ಚಾಲಿತವಾಗಿ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಬದಲಾವಣೆಗಳಿಗೆ ಬಿಹಾರ ಕಾರಣವಾಗುತ್ತಿರುವುದು ಹೊಸದೇನೂ ಅಲ್ಲ. ಮಂಗಳವಾರದ ದಿಢೀರ್ ನಾಟಕೀಯ ಬೆಳವಣಿಗೆಯಲ್ಲಿ ಬಿಜೆಪಿ ಜತೆಗಿನ ಸಂಬಂಧ ಕಡಿದುಕೊಂಡು ಮಹಾಘಟಬಂಧನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದ ಬಳಿಕ ರಾಜಕೀಯದ ಸಂಕೀರ್ಣ ಮ್ಯಾಟ್ರಿಕ್ಸ್ ಹಾಗೂ ಬಿಹಾರದ ಪಾತ್ರ ಮತ್ತೆ ಮುನ್ನಲೆಗೆ ಬಂದಿದೆ.

1970ರ ದಶಕದ ಬಿಹಾರ ವಿದ್ಯಾರ್ಥಿ ಚಳವಳಿಯಿಂದ ಹಿಡಿದು, ಬಿಹಾರದ ಮುಖ್ಯಮಂತ್ರಿಯಾಗಿದ್ದ ಲಾಲೂಪ್ರಸಾದ್ ಯಾದವ್ ಅವರು ಸಮಷ್ಟಿಪುರದಲ್ಲಿ ಲಾಲ್‍ಕೃಷ್ಣ ಅಡ್ವಾಣಿಯವರ ರಥಯಾತ್ರೆಯನ್ನು ತಡೆದ ಘಟನೆಯವರೆಗೆ ರಾಷ್ಟ್ರ ರಾಜಕಾರಣದ ಮೇಲೆ ದೊಡ್ಡ ಪ್ರಮಾಣದ ಪ್ರಭಾವ ಬೀರುವ ಘಟನಾವಳಿಗಳು ಬಿಹಾರದಲ್ಲಿ ಸಂಭವಿಸಿವೆ. ಇಂಥ ಘಟನೆಗಳು ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಬಿರುಕುಗಳಿಗೆ ಕಾರಣವಾಗಿರುವ, ಆಡಳಿತ ಪಕ್ಷಗಳನ್ನು ಅಧಿಕಾರದಿಂದ ಕಿತ್ತೆಸೆದಿರುವ ಅಥವಾ ಅನಿರೀಕ್ಷಿತ ಮತ್ತು ಅಸ್ಥಿರ ಮೈತ್ರಿಗಳ ಉದಯಕ್ಕೆ ಕಾರಣವಾದ ನಿದರ್ಶನಗಳಿವೆ.

ಬಿಹಾರದಲ್ಲಿ ವಿದ್ಯಾರ್ಥಿ ಚಳವಳಿಯಾಗಿ ಹುಟ್ಟಿಕೊಂಡು ಬಳಿಕ ಜೆಪಿ ಚಳವಳಿ ಎಂದು ಹೆಸರಾದ ಚಳವಳಿಯಲ್ಲಿ ಬಿಹಾರ ರಾಜಧಾನಿಯ ಗಾಂಧಿ ಮೈದಾನದಲ್ಲಿ ಜೆಪಿ ಮಾಡಿದ ಭಾಷಣ, ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲೂ ಪ್ರತಿಧ್ವನಿಸಿತ್ತು. ಈ ಚಳವಳಿ ಬಳಿಕ 1975-77ರ ಅವಧಿಯಲ್ಲಿ ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಲು ಕಾರಣವಾಯಿತು. ಬಳಿಕ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿತು. ಜೆಪಿ ಚಳವಳಿಯಲ್ಲಿ ಲಾಲೂ ಪ್ರಸಾದ್ ಯಾದವ್ ಹಾಗೂ ನಿತೀಶ್ ಕುಮಾರ್ ಅವರ ಬೆಸುಗೆ ಕುಡಿಯೊಡೆದಿತ್ತು ಎನ್ನುವುದು ಗಮನಾರ್ಹ.

ಇದೀಗ ನಿತೀಶ್ ಕುಮಾರ್ ಅವರ ನಡೆ 2024ರ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಈ ಬೆಳವಣಿಗೆಗಳು ಪ್ರಾದೇಶಿಕ ಹಾಗೂ ರಾಷ್ಟ್ರ ರಾಜಕಾರಣದ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದು ಪಾಟ್ನಾದ ಬಹುತೇಕ ವಿದ್ಯಾರ್ಥಿ ಮುಖಂಡರ ಅಭಿಮತ.

ಬಿಹಾರದ ಮುಖ್ಯಮಂತ್ರಿಯಾಗಿದ್ದ ಬಿ.ಪಿ.ಮಂಡಲ್ ನೇತೃತ್ವದ ಮಂಡಲ್ ಆಯೋಗದ ವರದಿ ಕೂಡಾ ರಾಷ್ಟ್ರ ರಾಜಕಾರಣದ ಮೇಲೆ ಭಾರಿ ಪರಿಣಾಮ ಬೀರಿತ್ತು. ವರದಿ ವಿರುದ್ಧ ಪ್ರತಿಭಟನೆಗಳು, ಆತ್ಮಾಹುತಿ ಪ್ರಯತ್ನಗಳೂ ನಡೆದಿದ್ದವು.

ಬಿಜೆಪಿ ಮುತ್ಸದ್ಧಿ ಲಾಲ್‍ಕೃಷ್ಣ ಆಡ್ವಾಣಿ ಗುಜರಾತ್‌ನ ಸೋಮನಾಥದಿಂದ ರಥಯಾತ್ರೆ ಆರಂಭಿಸಿ ಅಯೋಧ್ಯೆಯಲ್ಲಿ ಮುಕ್ತಾಯಗೊಳಿಸಿದ ಘಟನೆ ಇಂಥ ಮತ್ತೊಂದು ನಿದರ್ಶನ. ಮಂದಿರ ನಿರ್ಮಿಸುತ್ತೇವೆ ಎಂಬ ಘೋಷಣೆಯೊಂದಿಗೆ ಬಿಹಾರಕ್ಕೆ ಯಾತ್ರೆ ಆಗಮಿಸುತ್ತಿದ್ದಾಗಲೇ ಕೋಮು ಸಾಮರಸ್ಯಕ್ಕೆ ಧಕ್ಕೆ ಬರುವ ಸೂಚನೆ ಕಂಡ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಅಡ್ವಾಣಿ ಬಂಧನಕ್ಕೆ ಐಎಎಸ್ ಅಧಿಕಾರಿ ಅರ್.ಕೆ.ಸಿಂಗ್‍ಗೆ ಸೂಚನೆ ನೀಡಿದ್ದರು. ಇದನ್ನು ಪ್ರತಿಭಟಿಸಿ ಬಿಜೆಪಿ ವಿ.ಪಿ.ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸು ಪಡೆದು ಸರ್ಕಾರ ಪತನಕ್ಕೆ ಕಾರಣವಾಗಿತ್ತು ಎಂದು newindianexpress.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X