Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಾಣಿಗಳೂ ತಿನ್ನಲಿಕ್ಕಿಲ್ಲ: ಕಳಪೆ...

ಪ್ರಾಣಿಗಳೂ ತಿನ್ನಲಿಕ್ಕಿಲ್ಲ: ಕಳಪೆ ಗುಣಮಟ್ಟದ ಊಟದ ಕುರಿತು ಬೀದಿಯಲ್ಲಿ ನಿಂತು ಅಳುತ್ತಿರುವ ಉತ್ತರಪ್ರದೇಶ ಪೊಲೀಸ್

ವೀಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ11 Aug 2022 12:23 PM IST
share
ಪ್ರಾಣಿಗಳೂ ತಿನ್ನಲಿಕ್ಕಿಲ್ಲ: ಕಳಪೆ ಗುಣಮಟ್ಟದ ಊಟದ ಕುರಿತು ಬೀದಿಯಲ್ಲಿ ನಿಂತು ಅಳುತ್ತಿರುವ ಉತ್ತರಪ್ರದೇಶ ಪೊಲೀಸ್

ಫಿರೋಝಾಬಾದ್: ತನ್ನ ಸುತ್ತ ಹಲವು ಜನರು ನೆರೆದಿರುವಂತೆಯೇ ಉತ್ತರ ಪ್ರದೇಶದ ಫಿರೋಝಾಬಾದ್ (Firozabad) ಜಿಲ್ಲೆಯ ಪೊಲೀಸ್ ಕಾನ್‍ಸ್ಟೇಬಲ್ ಒಬ್ಬರು ರಸ್ತೆಯಲ್ಲಿ ಆಹಾರದ ತಟ್ಟೆ ಹಿಡಿದುಕೊಂಡು ಪೊಲೀಸ್ ಮೆಸ್‍ನಲ್ಲಿ (Police mess) ಒದಗಿಸಲಾಗುವ ಆಹಾರದ ಗುಣಮಟ್ಟದ ಬಗ್ಗೆ ದೂರುತ್ತಾ ಬಿಕ್ಕಿ ಬಿಕ್ಕಿ ಅಳುತ್ತಿರುವುದು ಕಾಣಿಸುತ್ತದೆ. ಇನ್ನೊಂದು ವೀಡಿಯೋದಲ್ಲಿ ಡಿವೈಡರ್ ಒಂದರಲ್ಲಿ ಅನ್ನ, ಚಪಾತಿ ಹಾಗೂ ಪಲ್ಯ ಇರುವ ತಟ್ಟೆಯನ್ನು ಕೈಯ್ಯಲ್ಲಿ ಹಿಡಿದುಕೊಂಡಿರುವ ಈತ "ಇದನ್ನು ಪ್ರಾಣಿಗಳು ಕೂಡ ತಿನ್ನಲಿಕ್ಕಿಲ್ಲ" ಎಂದು ಹೇಳುತ್ತಿರುವುದು ಕೇಳಿಸುತ್ತದೆ. ಸದ್ಯ ಈ ವೀಡಿಯೊ ವೈರಲ್‌ ಆಗಿದೆ.

ಮನೋಜ್ ಕುಮಾರ್ ಎಂಬ ಹೆಸರಿನ ಪೊಲೀಸ್ ಕಾನ್‍ಸ್ಟೇಬಲ್‍ನ (Police Constable) ಈ ವೀಡಿಯೋ ವೈರಲ್ ಆಗಿದ್ದು ಆಹಾರದ ತಟ್ಟೆ ಕೈಯ್ಯಲ್ಲಿ ಹಿಡಿದುಕೊಂಡು  ಆತ ಅಳುತ್ತಿರುವಂತೆಯೇ ಹಿರಿಯಾಧಿಕಾರಿಯೊಬ್ಬರು ಆತನನ್ನು ಸಮಾಧಾನಿಸಿ ಠಾಣೆಯೊಳಗೆ ಕರೆದೊಯ್ಯಲು ಯತ್ನಿಸುತ್ತಿರುವುದು ಕಾಣಿಸುತ್ತದೆ.

ಆಹಾರದ ಗುಣಮಟ್ಟದ ಬಗ್ಗೆ ಹಿರಿಯಾಧಿಕಾರಿಗಳಿಗೆ ದೂರಿದರೂ ಕ್ರಮಕೈಗೊಂಡಿಲ್ಲ ಎಂದು ಆತ ದೂರಿದ್ದಾನೆ. "ನನ್ನನ್ನು ಕೆಲಸದಿಂದ ತೆಗೆದು ಹಾಕಲಾಗುವುದಾಗಿ ಬೆದರಿಸಲಾಗುತ್ತಿದೆ" ಎಂದೂ ಆತ ಹೇಳಿಕೊಂಡಿದ್ದಾನೆ.

"ಪೊಲೀಸರಿಗೆ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸಲು ಸರಕಾರ ಅನುದಾನ ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ ಹಲವಾರು ಗಂಟೆಗಳ ಕರ್ತವ್ಯದ ನಂತರ ನಮಗೆ ದೊರೆಯುತ್ತಿರುವುದು ಇದು, ಸೂಕ್ತ ಆಹಾರ ದೊರೆಯದೇ ಇದ್ದರೆ ಪೊಲೀಸರು ಹೇಗೆ ಕರ್ತವ್ಯ ನಿರ್ವಹಿಸಬಹುದು" ಎಂದು ಆತ ಪ್ರಶ್ನಿಸುತ್ತಾನೆ.

ಆತನ ಕುರಿತು ಫಿರೋಝಾಬಾದ್ ಪೊಲೀಸರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿ ಆತ ಅಶಿಸ್ತಿನ ನಡವಳಿಕೆಯ ಇತಿಹಾಸ ಹೊಂದಿದ್ದಾರೆ, ಅವ್ಯವಹಾರ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ 15 ಬಾರಿ ಶಿಕ್ಷೆಗೊಳಗಾಗಿದ್ದಾರೆ ಎಂದು ತಿಳಿಸಿದೆ. ಈ ನಿರ್ದಿಷ್ಟ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

A UP police constable posted in Firozabad district protests against the quality of food served at the mess in police lines. He was later whisked away. A probe has been ordered. pic.twitter.com/nxspEONdNN

— Piyush Rai (@Benarasiyaa) August 10, 2022

The state of affairs this Constable is indicating is not only true of UP but many parts of India where working conditions of lower constabulary are very poor. Ration allowance is provided, then why is there such a situation? Mismanagement by police mess is not a political issue. pic.twitter.com/97GeNz5icO

— Shesh Paul Vaid (@spvaid) August 11, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X