Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು | ನಿವೇಶನ ನೀಡಲು...

ಚಿಕ್ಕಮಗಳೂರು | ನಿವೇಶನ ನೀಡಲು ನಿರ್ಲಕ್ಷ್ಯ ಆರೋಪ: ರಾಷ್ಟ್ರಧ್ವಜ ಹಾರಿಸದಿರಲು ಸಂತ್ರಸ್ತರಿಂದ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ11 Aug 2022 8:30 PM IST
share
ಚಿಕ್ಕಮಗಳೂರು | ನಿವೇಶನ ನೀಡಲು ನಿರ್ಲಕ್ಷ್ಯ ಆರೋಪ: ರಾಷ್ಟ್ರಧ್ವಜ ಹಾರಿಸದಿರಲು ಸಂತ್ರಸ್ತರಿಂದ ನಿರ್ಧಾರ

ಚಿಕ್ಕಮಗಳೂರು, ಆ.11: ಕಳೆದ 20 ವರ್ಷಗಳಿಂದ ಸುಮಾರು 200ಕ್ಕೂ ಹೆಚ್ಚು ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಬನ್ನೂರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯವಹಿಸಿದ್ದಾರೆ. ಪರಿಣಾಮ ನಿವೇಶನ ರಹಿತರ ಸ್ವಂತ ಸೂರು ಹೊಂದುವ ಕನಸು ನನಸಾಗಿಯೇ ಉಳಿದಿದೆ. ನಿವೇಶನ, ಮನೆ ನೀಡುವಲ್ಲಿ ಸರಕಾರ ವಿಫಲವಾಗಿರುವುದನ್ನು ಖಂಡಿಸಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂಬ ಸರಕಾರದ ಆದೇಶವನ್ನು ಪಾಲಿಸುವುದಿಲ್ಲ ಎಂದು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ನಿವೇಶನ ರಹಿತರ ಹೋರಾಟ ಸಮಿತಿ, ಹಸಲರ ಸಂಘ ಹಾಗೂ ಆದಿವಾಸಿಗಳ ಹಕ್ಕು ಹೋರಾಟ ಸಮಿತಿ ಮುಖಂಡರು ತಿಳಿಸಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಳೆಹೊನ್ನೂರು ನಿವೇಶನ ರಹಿತರ ಹೋರಾಟ ಸಮಿತಿ ಮುಖಂಡ ಶ್ರೀಕಾಂತ್, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿರುವ ಬನ್ನೂರು ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಸುಮಾರು 200ಕ್ಕೂ ಹೆಚ್ಚು ನಿವೇಶನ ರಹಿತರು ನಿವೇಶನಕ್ಕೆ ಆಗ್ರಹಿಸಿ ಬನ್ನೂರು ಗ್ರಾಮ ಪಂಚಾಯತ್‍ಗೆ ಕಳೆದ 20 ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದು, ಗ್ರಾಮ ಪಂಚಾಯತ್‍ನಿಂದ ನಿವೇಶನ ಹಂಚಿಕೆ ಮಾಡುವ ಭರವಸೆ ಸಿಗುತ್ತಿದೆಯೇ ಹೊರತು ಇದುವರೆಗೂ ನಿವೇಶನ ಹಂಚಿಕೆ ಮಾಡದೇ ನಿರ್ಲಕ್ಷ್ಯವಹಿಸಿದೆ. ಪರಿಣಾಮ 200ಕ್ಕೂ ಹೆಚ್ಚು ನಿವೇಶನ ರಹಿತರ ನಿವೇಶನ, ಸ್ವಂತ ಮನೆ ಹೊಂದುವ ಕನಸು ನನಸಾಗಿಯೇ ಉಳಿದಿದ್ದು, ನಿವೇಶನ ಇಲ್ಲದ ಕುಟುಂಬಗಳು ಬಾಡಿಗೆ ಮನೆಗಳಲ್ಲಿ, ಎಸ್ಟೇಟ್‍ಗಳ ಲೈನ್ ಮನೆಗಳಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿದರು.

ಬನ್ನೂರು ಗ್ರಾಮದಲ್ಲಿ ಸುಮಾರು 315 ಎಕರೆ ಗೋಮಾಳ ಜಾಗ ಇದೆಯಾದರೂ ಗ್ರಾಪಂ ಪಂಚಾಯತ್ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ರಾಜಕಾರಣಿಗಳು, ಪ್ರಭಾವಿಗಳ ಒತ್ತಡಕ್ಕೆ ಮಣಿದು ನಿವೇಶನ ನೀಡಲು ಹಿಂದೇಟು ಹಾಕುತ್ತಿದ್ದಾರೆ. ನಿವೇಶನ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖಾಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದು, ಇದುವರೆಗೂ ನಿವೇಶನ ಸೌಲಭ್ಯ ಸಿಕ್ಕಿಲ್ಲ ಎಂದು ಆರೋಪಿಸಿದ ಅವರು, ಪ್ರಧಾನಿ ಮೋದಿ ಅವರು, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಪ್ರತೀ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕೆಂದು ಕರೆ ನೀಡಿದ್ದಾರೆ. ಆದರೆ ಬನ್ನೂರು ಗ್ರಾಮದಲ್ಲಿ ದಲಿತರೂ ಸೇರಿದಂತೆ ಅಲ್ಪಸಂಖ್ಯಾತರು, ಹಿಂದುಳಿದ ಸಮುದಾಯದವರಿಗೆ ಸ್ವಂತ ನಿವೇಶನ ಮನೆಯೇ ಇಲ್ಲ. ನಿವೇಶನ ಕಲ್ಪಿಸಲು ಸರಕಾರಿ ಜಾಗ ಇದ್ದರೂ ಸಂಬಂಧಿಸಿದ ಅಧಿಕಾರಿಗಳು, ಕ್ಷೇತ್ರದ ಶಾಸಕರು ಈ ಸಂಬಂಧ ದಿವ್ಯ ನಿರ್ಲಕ್ಷ್ಯವಹಿಸಿದ್ದಾರೆ. ಸ್ವಂತ ಮನೆ ಇಲ್ಲದ ಹಿನ್ನೆಲೆಯಲ್ಲಿ ಇಲ್ಲಿನ ನಿವೇಶನ ರಹಿತರು ಸರಕಾರದ ಹರ್‍ಘರ್ ತಿರಂಗಾ ಯೋಜನಗೆ ಸಹಕಾರ ನೀಡುವುದಿಲ್ಲ. ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.15ರಂದು ಮಾತ್ರ ಸರಳವಾಗಿ ಸ್ವಾತಂತ್ರದಿನಾಚರಣೆ ಮಾಡುತ್ತೇವೆ ಎಂದರು.

ಬನ್ನೂರು ಗ್ರಾಮದಲ್ಲಿ ನಿವೇಶನ ಜಾಗ ಹೊಂದಿರುವ ಸುಮಾರು 20 ಕುಟುಂಬಗಳಿದ್ದು, ಈ ಕುಟುಂಬಗಳಿಗೆ 100 ವರ್ಷ ಕಳೆದರೂ ನಿವೇಶನ ಹಕ್ಕುಪತ್ರ ಸಿಕ್ಕಿಲ್ಲ. ಹಕ್ಕುಪತ್ರಕ್ಕಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ರಾಜಕಾರಣಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡ ಅವರು, ಜಿಲ್ಲಾಡಳಿತ ಬನ್ನೂರು ಗ್ರಾಮದಲ್ಲಿರುವ ಎಲ್ಲ ಸಮುದಾಯದ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಸರಕಾರಿ ಜಾಗ ಗುರುತಿಸಿ ಶೀಘ್ರ ನಿವೇಶನ ಹಂಚಿಕೆ ಮಾಡಬೇಕು. ಹಕ್ಕುಪುತ್ರ ವಂಚಿತರಿಗೆ ಶೀಘ್ರ ಹಕ್ಕುಪತ್ರ ನೀಡಬೇಕು. ತಪ್ಪಿದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮುಗಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಅರೆ ಬೆತ್ತಲೆ ಧರಣಿ ನಡೆಸಲಾಗುವುದು, ಅಲ್ಲದೇ ಬನ್ನೂರು ಗ್ರಾಪಂ ಕಚೇರಿ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಪವನ್, ಗೋಪಾಲ್, ಅನುಪಮ, ಜಾನಕಿ, ವನಜಾ ಮತ್ತಿತರರು ಉಪಸ್ಥಿತರಿದ್ದರು.


ಕೇಂದ್ರ, ರಾಜ್ಯ ಸರಕಾರಗಳ ಹರ್ ಘರ್ ತಿರಂಗಾ ಯೋಜನೆಗೆ ಆದೇಶಿಸಿರುವುದು ಅರ್ಥವಿಲ್ಲದ ಆಚರಣೆಯಾಗಿದೆ. ಇದರ ಬದಲು ನಿವೇಶನ ಇಲ್ಲದ ಪ್ರತೀ ಕುಟುಂಬಕ್ಕೂ ನಿವೇಶನ, ಮನೆ ಎಂಬ ಯೋಜನೆಯನ್ನು ಜಾರಿ ಮಾಡಲಿ.

- ಗೋಪಾಲ್, ಮುಖಂಡ, ನಿವೇಶನ ರಹಿತರ ಹೋರಾಟ ಸಮಿತಿ, ಬಾಳೆಹೊನ್ನೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X