Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ ಮೇಲಿನ ಕಾಂಕ್ರೀಟ್‌ ಬ್ಲಾಕ್‌...

ರಸ್ತೆ ಮೇಲಿನ ಕಾಂಕ್ರೀಟ್‌ ಬ್ಲಾಕ್‌ ತೆರವುಗೊಳಿಸಿದ್ದ ಡೆಲಿವರಿ ಬಾಯ್ ಅನ್ನು ಭೇಟಿಯಾದ ದುಬೈ ಯುವರಾಜ ಶೇಖ್‌ ಹಮ್ದಾನ್

ವಾರ್ತಾಭಾರತಿವಾರ್ತಾಭಾರತಿ11 Aug 2022 9:28 PM IST
share
ರಸ್ತೆ ಮೇಲಿನ ಕಾಂಕ್ರೀಟ್‌ ಬ್ಲಾಕ್‌ ತೆರವುಗೊಳಿಸಿದ್ದ ಡೆಲಿವರಿ ಬಾಯ್ ಅನ್ನು ಭೇಟಿಯಾದ ದುಬೈ ಯುವರಾಜ ಶೇಖ್‌ ಹಮ್ದಾನ್

ದುಬೈ: ದುಬೈನ ಯುವರಾಜ ಹಾಗೂ ಎಕ್ಸಿಕ್ಯೂಟಿವ್ ಕೌನ್ಸಿಲ್ ಅಧ್ಯಕ್ಷ ಶೇಖ್ ಹಮ್ದಾನ್ ಬಿನ್ ಮಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್  ಅವರು, ರಸ್ತೆ ಮೇಲಿನ ಕಲ್ಲುಗಳನ್ನು ತೆರವುಗೊಳಿಸಿ ವೈರಲ್‌ ಆಗಿದ್ದ ಪಾಕಿಸ್ತಾನ ಮೂಲದ ಡೆಲಿವರಿ ಬಾಯ್ ಅಬ್ದುಲ್ ಗಫೂರ್ ಅವರನ್ನು ಭೇಟಿ ಮಾಡಿದ್ದಾರೆ.  ಅಬ್ದುಲ್‌ ಗಫೂರ್‌ (Abdul Gafoor) ಅವರು ರಸ್ತೆಯಿಂದ ಎರಡು ಕಾಂಕ್ರೀಟ್ ಬ್ಲಾಕ್‌ಗಳನ್ನು ತೆಗೆದುಹಾಕುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ ಹಲವಾರು ನೆಟ್ಟಿಗರು ಗಫೂರ್‌ ಅವರ ನಿಸ್ವಾರ್ಥ ಸೇವೆಗೆ ಅಭಿನಂದಿಸಿದ್ದರು. 

ಕಳೆದ ತಿಂಗಳು ದುಬೈಯ ಅಲ್‌ ಕೂಝ್ (Al Quoz) ಭಾಗದ ರಸ್ತೆಯೊಂದರಲ್ಲಿ ಟ್ರಾಫಿಕ್‌ಗೆ ಕಾರಣವಾಗುತ್ತಿದ್ದ ಕಾಂಕ್ರೀಟ್‌ ಇಟ್ಟಿಗೆಗಳನ್ನು ಡೆಲಿವರಿ ಬಾಯ್‌ ಗಫೂರ್‌ ತೆರವು ಗೊಳಿಸಿದ್ದರು. ರಸ್ತೆಯಲ್ಲಿದ್ದ ಎಲ್ಲಾ ವಾಹನಗಳು ಹೋಗುವ ತನಕ ಕಾದು ನಿಂತ ಗಫೂರ್‌ ಬಳಿಕ ರಸ್ತೆಯಲ್ಲಿ ಬಿದ್ದಿದ್ದ ಎರಡು ಕಲ್ಲುಗಳನ್ನು ಎತ್ತಿ ರಸ್ತೆ ಬದಿಗೆ ಹಾಕಿದ್ದರು, ಬಳಿಕ ತಮ್ಮ ದ್ವಿಚಕ್ರ ವಾಹನ ಹತ್ತಿ ಹೋಗಿದ್ದರು. ಇದನ್ನು ಬೇರೆ ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಚಿತ್ರೀಕರಿಸಿದ್ದರು. ಆದರೆ, ವಿಡಿಯೋದಲ್ಲಿ ಗಫೂರ್‌ ಅವರ ಮುಖ ಹೆಲ್ಮೆಟ್‌ ಧರಿಸಿದ್ದರಿಂದ ಪತ್ತೆಯಾಗಿರಲಿಲ್ಲ. ಘಟನೆ ನಡೆದು ಎರಡು ವಾರಗಳ ತನಕ ಗಫೂರ್‌ ಗೆ ತನ್ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಷಯ ಗೊತ್ತಿರಲಿಲ್ಲ‌ ಎಂದು gulfnews.com ವರದಿಯಲ್ಲಿ ತಿಳಿಸಿದೆ. 

ಇದನ್ನೂ ಓದಿ:  ವಿವಾಹಿತ ಹೆಣ್ಣುಮಕ್ಕಳು ವಿಮೆಗೆ ಅರ್ಹರು: ಹೈಕೋರ್ಟ್ ಆದೇಶ

ಈ ವೀಡಿಯೋವನ್ನು ಟ್ವಿಟರಿನಲ್ಲಿ ಹಂಚಿಕೊಂಡಿದ್ದ ಕ್ರೌನ್‌ ಪ್ರಿನ್ಸ್‌, “ದುಬೈನಲ್ಲಿ ಒಳ್ಳೆಯತನದ ಈ ಕಾರ್ಯವು ಪ್ರಶಂಸೆಗೆ ಅರ್ಹವಾಗಿದೆ. ಯಾರಾದರೂ ಈ ವ್ಯಕ್ತಿಯನ್ನು ನನಗೆ ತೋರಿಸಬಹುದೇ?” ಎಂದು ಮನವಿ ಮಾಡಿದ್ದರು.  ಸ್ವಲ್ಪ ಸಮಯದ ಬಳಿಕ ಗಫೂರ್‌ ಅವರ ಚಿತ್ರವನ್ನು ಹಂಚಿಕೊಂಡ ಯುವರಾಜ, “ಉತ್ತಮ ವ್ಯಕ್ತಿ ಸಿಕ್ಕಿದ್ದಾರೆ. ಧನ್ಯವಾದ ಗಫೂರ್‌, ಶೀಘ್ರವೇ ನಾವು ಒಮ್ಮೆ ಭೇಟಿಯಾಗೋಣ” ಎಂದು ಟ್ವೀಟ್‌ ಮಾಡಿದ್ದರು. 

ಆ ವೇಳೆ ಯುನೈಟೆಡ್‌ ಕಿಂಗ್ಡಂನಲ್ಲಿದ್ದ ಯುವರಾಜ ಹಮ್ದಾನ್ ಸದ್ಯ ಯುಎಇಗೆ ಮರಳಿದ್ದು ಅಬ್ದುಲ್‌ ಗಫೂರ್ ರನ್ನು ಭೇಟಿಯಾಗಿದ್ದಾರೆ. ಅಲ್ಲದೆ, ಅವರೊಂದಿಗಿರುವ ಚಿತ್ರವನ್ನು ಹಂಚಿಕೊಂಡಿರುವ ಹಮ್ದಾನ್, “ಅಬ್ದುಲ್‌ ಗಪೂರ್‌, ನಿಮ್ಮನ್ನು ಭೇಟಿಯಾಗುವುದು ಗೌರವವಾಗಿದೆ, (ಗಪೂರ್)‌ ನಾವೆಲ್ಲರೂ ಅನುಸರಿಸಬೇಕಾದ ನಿಜವಾದ ಮಾದರಿ” ಎಂದು ಟ್ವೀಟ್‌ ಮಾಡಿದ್ದಾರೆ. 

ಗಫೂರ್‌ ಅವರಿಗೆ ಅವರು ಕೆಲಸ ಮಾಡುತ್ತಿರುವ ತಲಬತ್ (Talabat) ಸಂಸ್ಥೆಯು ಊರಿಗೆ ಟಿಕೆಟ್‌ ಅನ್ನು ಉಡುಗೊರೆಯಾಗಿ ನೀಡಿದೆ. ಈ ಹಿಂದೆ ಯುವರಾಜ ಹಮ್ದಾನ್‌ ಬೆಕ್ಕೊಂದನ್ನು ರಕ್ಷಿಸಿದ್ದ ನಾಲ್ವರು ಅನಿವಾಸಿಗಳಿಗೆ ತಲಾ 10 ಲಕ್ಷ ರೂ. ಉಡುಗೊರೆ ನೀಡಿದ್ದರು. 

ಇದನ್ನೂ ಓದಿ: ಮನುಸ್ಮೃತಿ ಭಾರತೀಯ ಮಹಿಳೆಯರಿಗೆ ಗೌರವಾನ್ವಿತ ಸ್ಥಾನವನ್ನು ನೀಡಿದೆ: ದಿಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಸಿಂಗ್

An honor to meet you Abdul Ghafoor, a true example to be followed. pic.twitter.com/eRQ0nuYAZF

— Hamdan bin Mohammed (@HamdanMohammed) August 11, 2022

An act of goodness in Dubai to be praised. Can someone point me to this man? pic.twitter.com/clEIWQQe3A

— Hamdan bin Mohammed (@HamdanMohammed) July 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X