Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ACB ರದ್ದು: ಲೋಕಾಯುಕ್ತ ಕಚೇರಿ ಎದುರು...

ACB ರದ್ದು: ಲೋಕಾಯುಕ್ತ ಕಚೇರಿ ಎದುರು ಎಎಪಿಯಿಂದ ಸಂಭ್ರಮಾಚಾರಣೆ

ವಾರ್ತಾಭಾರತಿವಾರ್ತಾಭಾರತಿ12 Aug 2022 6:13 PM IST
share
ACB ರದ್ದು: ಲೋಕಾಯುಕ್ತ ಕಚೇರಿ ಎದುರು ಎಎಪಿಯಿಂದ ಸಂಭ್ರಮಾಚಾರಣೆ

ಬೆಂಗಳೂರು: ಎಸಿಬಿಯನ್ನು ರದ್ದು ಪಡಿಸಿ ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿದ ಹೈಕೋರ್ಟ್‌ ಆದೇಶವನ್ನು ಸ್ವಾಗತಿಸಿ ಆಮ್‌ ಆದ್ಮಿ ಪಾರ್ಟಿ ನಾಯಕರು ಹಾಗೂ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಮುಂಭಾಗ ಕೇಕ್‌ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “2010 ಹಾಗೂ 2011ರಲ್ಲಿ ಕರ್ನಾಟಕದ ಸಾಮಾಜಿಕ ಹೋರಾಟಗಾರರು ಲೋಕಾಯುಕ್ತ ಸಂಸ್ಥೆಯನ್ನು ಬೆಂಬಲಿಸಿ ʻಭ್ರಷ್ಟಾಚಾರ ಸಾಕುʼ ಹೋರಾಟವನ್ನು ಆರಂಭಿಸಿದರು. ಅರವಿಂದ್‌ ಕೇಜ್ರಿವಾಲ್‌ರವರು ಕೂಡ ಈ ಹೋರಾಟದಲ್ಲಿ ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಈ ಹೋರಾಟವು ʻಭ್ರಷ್ಟಾಚಾರ ವಿರೋಧಿ ಭಾರತʼ ಹೆಸರಿನಲ್ಲಿ ದೇಶವ್ಯಾಪಿ ಹರಡಿ, ಆಮ್‌ ಆದ್ಮಿ ಪಾರ್ಟಿ ಜನ್ಮತಾಳಲು ಕಾರಣವಾಯಿತು. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡು ಬೇಸತ್ತಿದ್ದ ಪ್ರಜೆಗಳು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸಲು ಶುರುಮಾಡಿದರು” ಎಂದು ಹೇಳಿದರು.

“ಎಸಿಬಿಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳ ತನಿಖೆಯನ್ನು ಲೋಕಾಯುಕ್ತ ಸಂಸ್ಥೆಯು ತ್ವರಿತಗತಿಯಲ್ಲಿ ನಡೆಸಬೇಕು. ಅದೇ ರೀತಿ, ಎಸಿಬಿಯು ಮುಚ್ಚಿಹಾಕಿರುವ ಪ್ರಕರಣಗಳ ತನಿಖೆಯನ್ನು ಲೋಕಾಯುಕ್ತವು ಪುನರಾರಂಭಿಸಬೇಕು. ಹಲವು ಪ್ರಭಾವಿ ವ್ಯಕ್ತಿಗಳಿಗೆ ಎಸಿಬಿಯಿಂದ ಕ್ಲೀನ್‌ಚಿಟ್‌ ಸಿಕ್ಕಿದ್ದು, ಈಗ ಲೋಕಾಯುಕ್ತವು ಆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ಕೈಗೆತ್ತಿಕೊಂಡರೆ ಅಪರಾಧಿಗಳು ಹೊರಬರುತ್ತಾರೆ. ರಾಜ್ಯ ಸರ್ಕಾರವು ಲೋಕಾಯುಕ್ತ ಸಂಸ್ಥೆಗೆ ಪರಮಾಧಿಕಾರ ನೀಡುವ ಮೂಲಕ ಇದಕ್ಕೆ ಅವಕಾಶ ಮಾಡಿಕೊಡಲಿ” ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಲೋಕಾಯುಕ್ತ ಸಂಸ್ಥೆಗೆ ಶಕ್ತಿಯಿದ್ದರೆ ಹಲವು ನಾಯಕರು ಜೈಲಿಗೆ ಹೋಗಬೇಕಾಗುತ್ತದೆ ಎಂದು ಹೆದರಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು 2016ರಲ್ಲಿ ಎಸಿಬಿ ಎಂಬ ನಾಟಕೀಯ ಸಂಸ್ಥೆಯನ್ನು ರಚಿಸಿತು. ಲೋಕಾಯುಕ್ತ ಸಂಸ್ಥೆಗಿದ್ದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಹಲ್ಲು ಕಿತ್ತ ಹಾವಿನಂತೆ ಮಾಡಿತು. ಸರ್ಕಾರವೇ ನಿಯಂತ್ರಿಸುವಂತಹ ಎಸಿಬಿ ಸಂಸ್ಥೆಯ ಮೂಲಕ ಭ್ರಷ್ಟ ಸಚಿವರಿಗೆ ರಕ್ಷಣೆ ನೀಡಿತು. ಬಿಜೆಪಿ ಹಾಗೂ ಜೆಡಿಎಸ್‌ನಲ್ಲೂ ಭ್ರಷ್ಟ ನಾಯಕರು ಇದ್ದಿದ್ದರಿಂದ ಅವು ಕೂಡ ಈ ನಿರ್ಧಾರದಿಂದ ಸಂತೋಷಗೊಂಡವು. ನ್ಯಾಯಾಲಯದ ಆದೇಶದಿಂದಾಗಿ ಆ ಮೂರು ಪಕ್ಷಗಳಿಗೆ ಹಿನ್ನಡೆಯಾಗಿದೆ” ಎಂದು ಹೇಳಿದರು.

ನಂತರ ಪಕ್ಷದ ನಾಯಕರುಗಳು  ಲೋಕಾಯುಕ್ತರನ್ನು ಭೇಟಿ ಮಾಡಿ ಶೀಘ್ರ ಗತಿಯಲ್ಲಿ ಪ್ರಕರಣಗಳನ್ನು ಮುಗಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರು. ನಿಯೋಗದಲ್ಲಿ ನಿವೃತ್ತ  ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮಾಧ್ಯಮ ವಕ್ತಾರ ಕೆ. ಮಥಾಯಿ , ಹಿರಿಯ ಮುಖಂಡರುಗಳಾದ ಲಕ್ಷ್ಮೀಕಾಂತ ರಾವ್ ,  ಚನ್ನಪ್ಪಗೌಡ ನೆಲ್ಲೂರ, ಕುಶಲ ಸ್ವಾಮಿ , ರಾಜಶೇಖರ್ ದೊಡ್ಡಣ್ಣ , ಉಷಾ ಮೋಹನ್  ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X