Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ರೆಡ್‌ಕ್ರಾಸ್‌ನಿಂದ ವಿಶ್ವ...

ಮಂಗಳೂರು: ರೆಡ್‌ಕ್ರಾಸ್‌ನಿಂದ ವಿಶ್ವ ಅಂಗಾಂಗ ದಿನಾಚರಣೆ

ಅಂಗಾಗ ದಾನ ಘೋಷಿಸಿದ ದ.ಕ. ಡಿ.ಸಿ. ಡಾ.ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ13 Aug 2022 10:37 PM IST
share
ಮಂಗಳೂರು: ರೆಡ್‌ಕ್ರಾಸ್‌ನಿಂದ ವಿಶ್ವ ಅಂಗಾಂಗ ದಿನಾಚರಣೆ

ಮಂಗಳೂರು : ಅಂಗಾಂಗ ದಾನ ಮಾಡಿ ಅಗತ್ಯ ಇರುವ ವ್ಯಕ್ತಿಯ ದೇಹಕ್ಕೆ ಕಸಿ ಮಾಡುವುದರಿಂದ ಜೀವದಾನ ನೀಡಿದಂತಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ದ.ಕ.ಜಿಲ್ಲಾ ಶಾಖೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಅಸೋಸಿಯೇಷನ್ ಆಫ್ ಮೆಡಿಕಲ್ ಕನ್ಸಲ್‌ಟೆಂಟ್ಸ್ ಮತ್ತು ಜೀವ ಸಾರ್ಥಕತೆ ವತಿಯಿಂದ ನಗರದ  ನಗರದ ಐಎಂಎ ಭವನದಲ್ಲಿ ಶನಿವಾರ ನಡೆದ ವಿಶ್ವ ಅಂಗಾಂಗ ದಾನ ದಿನಾಚರಣೆ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅತ್ಯಂತ ದುಃಖದ ಸಮಯದಲ್ಲಿ ಪ್ರೀತಿಪಾತ್ರರ ಅಂಗಾಂಗ ದಾನ ಮಾಡುವ ಕಠಿಣ ನಿರ್ಧಾರ ಕೈಗೊಳ್ಳುವ ದಾನಿಗಳ ಕುಟುಂಬದ ತ್ಯಾಗವನ್ನು ನಾವು ಸದಾ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮುಖ್ಯ ಅತಿಥಿಯಾಗಿದ್ದ ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ ಚಾನ್ಸಲರ್ ಡಾ.ಎಂ.ಶಾಂತಾರಾಮ ಶೆಟ್ಟಿ ಮಾತನಾಡಿ ‘ಒಬ್ಬ ವ್ಯಕ್ತಿಯ ದೇಹದಾನದಿಂದ 8 ಮಂದಿಯ ಜೀವ ಉಳಿಸಲು ಸಾಧ್ಯವಿದೆ.  ಭಾರತದಲ್ಲಿ ಅಂಗಾಗ ಕಸಿ ಮಾಡಿಸಿಕೊಳ್ಳಬೇಕಾದವರ ಸಂಖ್ಯೆ ಅತಿಯಾಗಿದೆ. ಆದರೆ ಆಂಗಾಗ ದಾನಿಗಳ ಸಂಖ್ಯೆ ಶೇ.01 ಮಾತ್ರ ಇದೆ. ಅಂಗಾಗ ದಾನದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವುದು ಅವಶ್ಯ ಎಂದರು.

ರೆಡ್‌ಕ್ರಾಸ್ ಆರೋಗ್ಯ ಉಪಸಮಿತಿಯ ಚೇರ್ಮನ್ ಡಾ.ಬಿ.ಸಚ್ಚಿದಾನಂದ ರೈ ಮಾತನಾಡಿ ರೆಡ್‌ಕ್ರಾಸ್ ವತಿಯಿಂದ ಅಂಗಾಂಗ ದಾನ ಪ್ರೇರೇಪಿಸುವ ಉದ್ದೇಶದಿಂದ  ಘೋಷಣಾ ಪತ್ರ ಮುದ್ರಿಸಿ ವಿದ್ಯಾರ್ಥಿ ಸಮುದಾಯಕ್ಕೆ ವಿತರಿಸಲಾಗಿದೆ. ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ರೆಡ್‌ಕ್ರಾಸ್ ಸಂಸ್ಥೆ ದ.ಕ.ಜಿಲ್ಲಾ ಶಾಖೆಯ ಆರೋಗ್ಯ ಉಪ ಸಮಿತಿ ಪ್ರಕಟಿಸಿರುವ ಅಂಗಾಂಗಗಳ ಮತ್ತು ದೇಹ ದಾನದ ಮಾಹಿತಿ ಕೈ ಪಿಡಿಯನ್ನು  ಐಎಂಎ ಮಂಗಳೂರು ಘಟಕದ ಅಧ್ಯಕ್ಷ ಡಾ.ಸತ್ಯಮೂರ್ತಿ ಐತಾಳ್ ಮತ್ತು ಅಸೋಸಿಯೇಷನ್ ಆಫ್ ಮೆಡಿಕಲ್ ಕನ್ಸಲ್‌ಟೆಂಟ್ಸ್ ನ ಅಧ್ಯಕ್ಷ ಡಾ.ತಾಜುದ್ದೀನ್ ಬಿಡುಗಡೆಗೊಳಿಸಿದರು.

ಅಂಗಾಂಗ ದಾನ ಮಾಡಿದ ದಿ.ಸತೀಶ್ ಕುಲಾಲ್ ಅವರ ತಂದೆ ಜಾರಪ್ಪ ಕುಲಾಲ್, ದಿ. ಕೆ.ವಿ.ರಮೇಶ್ ಅವರ ಸಹೋದರಿ ಪೂರ್ಣಿಮಾ, ದಿ.ಪ್ರೀತಿ ಮನೋಜ್ ಅವರ ಪತಿ ಮನೋಜ್ ಕಲ್ಯ ಹಾಗೂ ದಿ.ಲಿಂಡಾ ಅವರ ಸಹೋದರ ಪ್ರಕಾಶ್ ಡಿಸೋಜಾ ಇವರುಗಳನ್ನು ಗೌರವಿಸಲಾಯಿತು. ಅಂಗಾಂಗ ದಾನ ಪಡೆದ ಲಿಂಗಪ್ಪ ಕೋಡಿಕಲ್ ಮತ್ತು ಭುಜಂಗ ಪೂಜಾರಿ ತಮ್ಮ ಅನಿಸಿಕೆಗಳನ್ನು ತಿಳಿಸಿದರು.

ರೆಡ್‌ಕ್ರಾಸ್ ಸಂಸ್ಥೆ ದ.ಕ.ಜಿಲ್ಲಾ ಶಾಖೆಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಸ್ವಾಗತಿಸಿ, ಗೌರವ ಕಾರ್ಯದರ್ಶಿ ಕುಸುಮಾಧರ ಬಿ.ಕೆ. ಆಡಳಿತ ಸಮಿತಿ ನಿರ್ದೇಶಕಿ ಸುಮನ.ಬಿ. ಕಾರ್ಯಕ್ರಮ ನಿರೂಪಿಸಿದರು.

ಅಂಗಾಗ ದಾನ ಘೋಷಿಸಿದ ಡಿ.ಸಿ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಂಗಾಂಗ ದಾನ ಮಾಡುವುದಾಗಿ ಸಭೆಯಲ್ಲಿ ಘೋಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X