Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಪಾಲಕ್ಕಾಡ್‍ನಲ್ಲಿ ಸಿಪಿಐ(ಎಂ)...

ಕೇರಳದ ಪಾಲಕ್ಕಾಡ್‍ನಲ್ಲಿ ಸಿಪಿಐ(ಎಂ) ನಾಯಕನ ಬರ್ಬರ ಹತ್ಯೆ: ಹಲವರ ಬಂಧನ

ವಾರ್ತಾಭಾರತಿವಾರ್ತಾಭಾರತಿ16 Aug 2022 1:32 PM IST
share
ಕೇರಳದ ಪಾಲಕ್ಕಾಡ್‍ನಲ್ಲಿ ಸಿಪಿಐ(ಎಂ) ನಾಯಕನ ಬರ್ಬರ ಹತ್ಯೆ: ಹಲವರ ಬಂಧನ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‍ನಲ್ಲಿ ಆಗಸ್ಟ್ 14 ರ ರಾತ್ರಿ ಸಿಪಿಐ(ಎಂ) ನಾಯಕ ಕೆ ಶಾಜಹಾನ್ (SHAJAHAN) ಎಂಬವರನ್ನು ಆರು ಮಂದಿ ದುಷ್ಕರ್ಮಿಗಳ ತಂಡವೊಂದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. 

ಘಟನೆ ರಾತ್ರಿ ಸುಮಾರು 9.30ಕ್ಕೆ ನಡೆದಿದೆ. ಕೊಟ್ಟೆಕಾಡ್ ಎಂಬಲ್ಲಿ ಹರಿತವಾದ ಆಯುಧಗಳಿಂದ ದುಷ್ಕರ್ಮಿಗಳು 40 ವರ್ಷದ ಶಾಜಹಾನ್ ಅವರನ್ನು ಅಡ್ಡಗಟ್ಟಿ ಕೊಚ್ಚಿ ಕೊಂದಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಶಾಜಹಾನ್ ಅವರು ಸ್ಥಳೀಯ ಸಿಪಿಐ(ಎಂ) (CPI (M) ಸಮಿತಿ ಸದಸ್ಯರಾಗಿದ್ದರು.

ಈ ಹತ್ಯೆ ಖಂಡಿಸಿ ಸಿಪಿಐ(ಎಂ) ಮರುತ ರೋಡ್ ಪಂಚಾಯತ್‍ನಲ್ಲಿ ಹರತಾಳಕ್ಕೆ ಕರೆ ನೀಡಿತ್ತು. ಈ ಹತ್ಯೆಗೆ ಆರೆಸ್ಸೆಸ್(RSS) ಮತ್ತು ಬಿಜೆಪಿಯೊಂದಿಗೆ  ನಂಟು ಹೊಂದಿದವರು ಕಾರಣ ಎಂದು ಸಿಪಿಐ(ಎಂ) ಆರೋಪಿಸಿದರೆ, ಹತ್ಯೆಗೆ ಸಿಪಿಐ(ಎಂ) ಪಕ್ಷವನ್ನೇ ಕೇಸರಿ ಸಂಘಟನೆಗಳು ದೂರಿವೆ.

ದುಷ್ಕರ್ಮಿಗಳು ಟಾರ್ಗೆಟ್ ಮಾಡಿದ ಪ್ರತ್ಯಕ್ಷದರ್ಶಿ ಸಾಕ್ಷಿಯೊಬ್ಬರ ಪುತ್ರ ಕೂಡ ಹತ್ಯೆಗೈದ ತಂಡದಲ್ಲಿದ್ದ ಆರು ಮಂದಿಯಲ್ಲಿ ಒಬ್ಬನಾಗಿದ್ದ ಎಂದು ವರದಿ ಹೇಳಿದೆ. ಆದರೆ ಪ್ರತ್ಯಕ್ಷದರ್ಶಿ ಸಾಕ್ಷಿಯ ಪುತ್ರ ತಡೆದ ನಂತರ ದಾಳಿ ನಡೆಸಲಾಗಿಲ್ಲ.

ಹಂತಕರ ಮಾಹಿತಿ ದೊರಕಿದೆ ಎಂದು ಪಾಲಕ್ಕಾಡ್(PALAKKAD) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ವಿಶ್ವನಾಥ್ ಹೇಳಿದ್ದಾರೆ. ಘಟನೆಯ ಪ್ರತ್ಯಕ್ಷದರ್ಶಿ ಸಾಕ್ಷಿ ಸೋಮವಾರ ಆರಂಭದಲ್ಲಿ ಈ ಹತ್ಯೆಗೆ ಸಿಪಿಐ(ಎಂ) ಸದಸ್ಯರು ಕಾರಣ ಎಂದು ಹೇಳಿಕೊಂಡರೆ ನಂತರ ತನ್ನ ಹೇಳಿಕೆ ಬದಲಾಯಿಸಿ ಅವರು ಆರೆಸ್ಸೆಸ್ ಕಾರ್ಯಕರ್ತರು ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಈ ಹತ್ಯೆಯಲ್ಲಿ ತನ್ನ ಪಾತ್ರವನ್ನು ಮರೆಮಾಚಲು ಸಿಪಿಐ(ಎಂ) ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ದಾಳಿ ನಡೆದ ಸಂದರ್ಭ ಪ್ರತ್ಯಕ್ಷದರ್ಶಿ ಸಾಕ್ಷಿಯು ಹತ್ಯೆಯಾದ ಶಾಜಹಾನ್ ಜೊತಗಿದ್ದರು. ದಾಳಿಕೋರರು ಹಾಗೂ ಶಾಜಹಾನ್ ನಡುವೆ ವ್ಯಾಗ್ಯುದ್ಧ ನಡೆದ ನಂತರ ಆತನನ್ನು ಹತ್ಯೆಗೈಯ್ಯಲಾಯಿತು ಎಂದು ಸಾಕ್ಷಿ ಹೇಳಿದ್ದಾರೆ.

ದುಷ್ಕರ್ಮಿಗಳು ತಮ್ಮಿಬ್ಬರಿಗಾಗಿ ಪಾಲಕ್ಕಾಡಿನ ಮರುತ ರಸ್ತೆಯಲ್ಲಿ ಕಾದಿದ್ದರು. ಹಾಗೂ ದಾಳಿಕೋರರಲ್ಲಿ ಒಬ್ಬಾತ ತನ್ನ ಪುತ್ರನಾಗಿದ್ದರಿಂದ ತನ್ನನ್ನು ಹತ್ಯೆಗೈಯ್ಯದೆ ಬಿಟ್ಟುಬಿಡಲಾಯಿತು ಎಂದು ಪ್ರತ್ಯಕ್ಷದರ್ಶಿ ಸಾಕ್ಷಿ ಆರಂಭದಲ್ಲಿ ಹೇಳಿದ್ದರು. ನಂತರ ಹೇಳಿಕೆ ಬದಲಾಯಿಸಿದ ಆತ ಎಲ್ಲಾ ದಾಳಿಕೋರರು ಆರೆಸ್ಸೆಸ್ ಕಾರ್ಯಕರ್ತರು, ಅವರಲ್ಲಿ ಇಬ್ಬರು ಈ ಹಿಂದೆ ಸಿಪಿಐ(ಎಂ) ಸದಸ್ಯರಾಗಿದ್ದರು ಈಗ ಆರೆಸ್ಸೆಸ್ ಜೊತೆಗಿದ್ದಾರೆ ಎಂದು ಹೇಳಿದ್ದಾರೆ.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಇ ಎನ್ ಸುರೇಶ್ ಬಾಬು ಕೂಡ ಪ್ರತಿಕ್ರಿಯಿಸಿ ದುಷ್ಕರ್ಮಿಗಳು ಹಿಂದೆ ತಮ್ಮ ಪಕ್ಷದ ಸದಸ್ಯರಾಗಿದ್ದರೂ ಕಳೆದೊಂದು ವರ್ಷದಿಂದ ಆರೆಸ್ಸೆಸ್ ಭಾಗವಾಗಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X