Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಲಾಖ್-ಇ-ಹಸನ್ ಪದ್ಧತಿ ತ್ರಿವಳಿ...

ತಲಾಖ್-ಇ-ಹಸನ್ ಪದ್ಧತಿ ತ್ರಿವಳಿ ತಲಾಖ್‍ನಂತಲ್ಲ, ಮಹಿಳೆಯರಿಗೆ 'ಖುಲಾ' ಆಯ್ಕೆಯೂ ಇದೆ: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Aug 2022 3:49 PM IST
share
ತಲಾಖ್-ಇ-ಹಸನ್ ಪದ್ಧತಿ ತ್ರಿವಳಿ ತಲಾಖ್‍ನಂತಲ್ಲ, ಮಹಿಳೆಯರಿಗೆ ಖುಲಾ ಆಯ್ಕೆಯೂ ಇದೆ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಇಸ್ಲಾಂ  ಧರ್ಮದಲ್ಲಿ ತಿಂಗಳಿಗೊಮ್ಮೆ  ಮೂರು ತಿಂಗಳ ಕಾಲ ʼತಲಾಖ್-ಇ-ಹಸನ್' (Talaaq-e-Hassan) ಹೇಳುವ ಮೂಲಕ ತಲಾಖ್ ನೀಡುವ ಪದ್ಧತಿಯನ್ನು ತ್ರಿವಳಿ ತಲಾಖ್(Teiple Talaq) ಪದ್ಧತಿಗೆ ಹೋಲಿಸಲು ಸಾಧ್ಯವಿಲ್ಲ ಹಾಗೂ ಮಹಿಳೆಯರಿಗೆ ʼಖುಲಾ' ಆಯ್ಕೆಯೂ ಇದೆ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಇಸ್ಲಾಂ ಧರ್ಮದಲ್ಲಿ ಪುರುಷ ತಲಾಖ್ ಮೂಲಕ ಪತ್ನಿಗೆ ವಿಚ್ಛೇದನ ನೀಡಬಹುದಾದರೆ ಮಹಿಳೆಯು ಖುಲಾ ಮೂಲಕ ಪತಿಗೆ ವಿಚ್ಛೇದನ ನೀಡಬಹುದಾಗಿದೆ.

ತಲಾಖ್-ಇ-ಹಸನ್ ಮತ್ತು ಇತರ  ಕಾನೂನುಬದ್ಧವಲ್ಲದ ತಲಾಖ್ ರೀತಿಗಳನ್ನು ರದ್ದುಗೊಳಿಸಿ ಅವುಗಳನ್ನು ಅಸಂವಿಧಾನಿಕ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಎಂ ಎಂ ಸುಂದರೇಶ್ ಅವರ ಪೀಠ ಮೇಲಿನಂತೆ ಹೇಳಿದೆ.

"ಈ ಪದ್ಧತಿ ತ್ರಿವಳಿ ತಲಾಖ್ ಅಲ್ಲ, ಮಹಿಳೆಯರಿಗೆ ಖುಲಾ ಆಯ್ಕೆಯೂ ಇದೆ. ಇಬ್ಬರಿಗೆ ಒಟ್ಟಿಗೆ ಜೀವಿಸಲು ಸಾಧ್ಯವಿಲ್ಲವೆಂದಾದರೆ ನಾವು ಮತ್ತೆ ಪುನಃಸ್ಥಾಪಿಸಲಾಗದ ವಿವಾಹದ ಆಧಾರದಲ್ಲಿ ವಿಚ್ಛೇದನ ಕೂಡ ನೀಡಬಲ್ಲೆವು. ಮೆಹರ್ ನೀಡಿದರೆ  ಪರಸ್ಪರ ಸಹಮತದ ವಿಚ್ಛೇದನಕ್ಕೆ ನೀವು ಸಿದ್ಧರಿದ್ದೀರಾ? ಮೂಲತಃ ಅರ್ಜಿದಾರರ ವಾದವನ್ನು ನಾವು ಒಪ್ಪುವುದಿಲ್ಲ. ಇದು ಬೇರೆ ಕಾರಣಗಳಿಗಾಗಿ ಒಂದು ಅಜೆಂಡಾ ಆಗುವುದು ನಮಗೆ ಬೇಕಿಲ್ಲ," ಎಂದು ನ್ಯಾಯಪೀಠ ಹೇಳಿದೆ.

ಅರ್ಜಿದಾರೆ ಬೇನಝೀರ್ ಹೀನಾ ಪರ ವಾದಿಸಿದ ವಕೀಲ ಪಿಂಕಿ ಆನಂದ್, ಸುಪ್ರೀಂ ಕೋರ್ಟ್(Supreme Court) ತ್ರಿವಳಿ ತಲಾಖ್ ಅನ್ನು ಅಸಂವಿಧಾನಿಕ ಎಂದು ಘೋಷಿಸಿದ್ದರೂ ತಲಾಖ್-ಇ-ಹಸನ್ ಬಗ್ಗೆ ನಿರ್ಧರಿಸಿಲ್ಲ ಎಂದರು.

ಮೆಹರ್‍ಗಿಂತ ಹೆಚ್ಚಿನ ಮೊತ್ತ ನೀಡುವುದಾದರೆ ಪರಸ್ಪರ ಸಹಮತದ ವಿಚ್ಛೇದನಕ್ಕೆ ಅರ್ಜಿದಾರರು ಒಪ್ಪುತ್ತಾರೆಯೇ ಎಂದು ಕೇಳಲು ಅವರ ವಕೀಲರಿಗೆ ನ್ಯಾಯಾಲಯ ಸೂಚಿಸಿತಲ್ಲದೆ  ಈ ನ್ಯಾಯಾಲಯದ ಹಸ್ತಕ್ಷೇಪವಿಲ್ಲದೆ ʼಮುಬಾರತ್' ಮೂಲಕ ಕೂಡ ವಿಚ್ಛೇದನಕ್ಕೆ ಅವಕಾಶವಿದೆ ಎಂದು ಹೇಳಿದೆ.

ಮುಂದಿನ ವಿಚಾರಣೆ ಆಗಸ್ಟ್ 29ಕ್ಕೆ ನಿಗದಿಯಾಗಿದೆ.

ಗಾಝಿಯಬಾಧ್ ನಿವಾಸಿಯಾಗಿರುವ ಅರ್ಜಿದಾರೆ ಹೀನಾ ತಾನು ತಲಾಖ್-ಇ-ಹಸನ್ ಸಂತ್ರಸ್ತೆಯಾಗಿರುವುದಾಗಿ ಹೇಳಿದ್ದಾರೆ. ಎಲ್ಲಾ ನಾಗರಿಕರಿಗೂ ವಿಚ್ಛೇದನಕ್ಕೆ ಸಮಾನ ಆಧಾರ ಮತ್ತು ಪ್ರಕ್ರಿಯೆಗಳಿಗೆ ಮಾರ್ಗಸೂಚಿಗಳನ್ನು ರಚಿಸುವಂತೆ ಕೇಂದ್ರಕ್ಕೆ ನಿರ್ದೇಶಿಸಬೇಕೆಂದೂ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X