Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೆಸ್ಸೆಸ್ ಸಂಘಟನೆಗಳಿಗೆ ತೊಂದರೆ ಆಗದಂತೆ...

ಆರೆಸ್ಸೆಸ್ ಸಂಘಟನೆಗಳಿಗೆ ತೊಂದರೆ ಆಗದಂತೆ ಪೊಲೀಸರ ಕೈ ಕಟ್ಟಿ ಹಾಕಲಾಗಿದೆ: ರಾಮಲಿಂಗಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ16 Aug 2022 11:12 PM IST
share
ಆರೆಸ್ಸೆಸ್ ಸಂಘಟನೆಗಳಿಗೆ ತೊಂದರೆ ಆಗದಂತೆ ಪೊಲೀಸರ ಕೈ ಕಟ್ಟಿ ಹಾಕಲಾಗಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು, ಆ.16: ಕಾನೂನು ಸುವ್ಯವಸ್ಥೆ ಕಾಪಾಡಲು ನಮ್ಮಲ್ಲಿ ಉತ್ತಮ, ದಕ್ಷ ಅಧಿಕಾರಿಗಳಿದ್ದಾರೆ. ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಕೋಮುಗಲಭೆ ನಿಯಂತ್ರಿಸಲು ಹೇಳಿದರೆ ಅವರು ನಿಭಾಯಿಸುತ್ತಾರೆ. ಆದರೆ ಬಿಜೆಪಿ ಸರಕಾರ ತಮ್ಮ ಸಂಘಪರಿವಾರದ ಸಂಘಟನೆಗಳಿಗೆ ಯಾವುದೇ ತೊಂದರೆ ಆಗದಂತೆ ಪೊಲೀಸರ ಕೈ ಕಟ್ಟಿ ಹಾಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗಾಗಿ ನೈತಿಕ ಪೊಲೀಸ್‍ಗಿರಿಗೆ ಪ್ರೋತ್ಸಾಹ ನೀಡುತ್ತಾರೆ. ಹಿಜಾಬ್, ಹಲಾಲ್ ಕಟ್ ಸೇರಿದಂತೆ ಅನೇಕ ವಿಚಾರವಾಗಿ ಈ ಸಂಘಟನೆಗಳು ಸಾಕಷ್ಟು ಗೊಂದಲ ಸೃಷ್ಟಿಸಿದರು ಸರಕಾರ ಇವರನ್ನು ನಿಯಂತ್ರಿಸುವ ಕೆಲಸ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಶಾಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿದ್ದರೆ ಕಾನೂನು ಸುವ್ಯವಸ್ಥೆ ನಾಶವಾಗುತ್ತದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿ ವಿರೋಧ ಪಕ್ಷದಲ್ಲಿ ಇದ್ದಾಗ ಎಸ್‍ಡಿಪಿಐ ನಿಷೇಧ ಆಗಬೇಕು ಎಂದು ಹೇಳುತ್ತಿದ್ದರು, ಈಗ ಅವರದೇ ಸರಕಾರ ಇದ್ದರೂ ನಿμÉೀಧ ಮಾಡುತ್ತಿಲ್ಲ. ಎಸ್‍ಡಿಪಿಐ ಮೂಲಕ ಕಾಂಗ್ರೆಸ್ ಮತ ವಿಭಜನೆ ಮಾಡಬಹುದು ಎಂಬ ಕಾರಣಕ್ಕೆ ಬಿಜೆಪಿಯವರೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ದೂರಿದರು.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಯಾವುದೇ ಸಂಘಟನೆ ಇದ್ದರೂ ಅವುಗಳನ್ನು ನಿಷೇಧಿಸಲಿ. ಸರಕಾರ ಈ ಸಂಘಟನೆಗಳನ್ನು ನಿಯಂತ್ರಣದಲ್ಲೂ ಇಟ್ಟುಕೊಳ್ಳುತ್ತಿಲ್ಲ, ನಿಷೇಧಿಸುತ್ತಲೂ ಇಲ್ಲ. ಈ ಎಲ್ಲ ಸಂಘರ್ಷಕ್ಕೆ ಈ ಸಂಘಟನೆಗಳು ಎಷ್ಟು ಕಾರಣವಾಗಿವೆಯೋ, ಅಷ್ಟೇ ಆರೆಸೆಸ್ಸ್, ಸಂಘಪರಿವಾರದ ಸಂಘಟನೆಗಳೂ ಕಾರಣ. ಈ ವಿಚಾರವಾಗಿ ವಿಚಾರವಾಗಿ ನಾನು ಪುಸ್ತಕವನ್ನೇ ಬಿಡುಗಡೆ ಮಾಡಿ, ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X