Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಬೇಡಿಕೆ ಈಡೇರಿಸುವ ಭರವಸೆ...

ಬೆಂಗಳೂರು | ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆ: 2 ದಿನಗಳಿಂದ ನಡೆಯುತ್ತಿದ್ದ ದಾಸೋಹ ನೌಕರರ ಧರಣಿ ವಾಪಸ್

ವಾರ್ತಾಭಾರತಿವಾರ್ತಾಭಾರತಿ17 Aug 2022 8:46 PM IST
share
ಬೆಂಗಳೂರು | ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆ: 2 ದಿನಗಳಿಂದ ನಡೆಯುತ್ತಿದ್ದ ದಾಸೋಹ ನೌಕರರ ಧರಣಿ ವಾಪಸ್

ಬೆಂಗಳೂರು, ಆ.17: ಅಕ್ಷರ ದಾಸೋಹ ನೌಕರರಿಗೆ ನಿವೃತ್ತಿ ಭದ್ರತೆಯಾಗಿ 1 ಲಕ್ಷ ರೂ. ನೀಡಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ರಾಜ್ಯ ಸರಕಾರ ಈಡೇರಿಸಿರುವ ಭರವಸೆ ನೀಡಿರುವ ಹಿನ್ನೆಲೆ ಎರಡು ದಿನಗಳಿಂದ ನಡೆಯುತ್ತಿದ್ದ ಧರಣಿಯನ್ನು ಅಕ್ಷರ ದಾಸೋಹ ನೌಕರರು ಹಿಂಪಡೆದರು.

ಬುಧವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ(ಸಿಐಟಿಯು) ಅಧ್ಯಕ್ಷೆ ವರಲಕ್ಷ್ಮೀ ಸೇರಿದಂತೆ ಹಲವು ಹೋರಾಟಗಾರರು ಪಾಲ್ಗೊಂಡು, ತಮ್ಮ ಬೇಡಿಕೆಗಳನ್ನು ಮಂಡಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವರಲಕ್ಷ್ಮೀ, ಅಕ್ಷರ ದಾಸೋಹ ನೌಕರರಿಗೆ ನಿವೃತ್ತಿ ಭದ್ರತೆಯಾಗಿ 1 ಲಕ್ಷ ರೂ. ನೀಡಬೇಕು ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಈ ಬಗ್ಗೆ ಹಣಕಾಸು ಇಲಾಖೆಗೆ ಶಿಫಾರಸ್ಸು ಮಾಡಲಾಗುವುದೆಂದು ತಿಳಿಸಿದ್ದಾರೆ. ಹಾಗಾಗಿ, ಸದ್ಯ ಧರಣಿಯನ್ನು ಹಿಂಪಡೆಯಲಾಗಿದೆ ಎಂದು ಹೇಳಿದರು.

ಅದೇ ರೀತಿ, ಅದೇ ರೀತಿ, ಬಜೆಟ್‍ನಲ್ಲಿ ಘೋಷಣೆ ಮಾಡಿರುವಂತೆ 1 ಸಾವಿರ ರೂ.ಗಳನ್ನು ಮಾರ್ಚ್‍ನಿಂದಲೇ ನೀಡಬೇಕು ಎನ್ನುವ ಬೇಡಿಕೆಯೂ ಈಡೇರಿಸಲಾಗುವುದೆಂದು ತಿಳಿಸಲಾಗಿದೆ ಎಂದ ಅವರು, ನೌಕರರ ಕೊಂದು ಕೊರೆತೆ ಆಲಿಸಲು ಸಭೆಗಳನ್ನು ನಡೆಸಲು ಇಲಾಖೆ ಮುಂದಾಗಿದೆ.ಹೀಗಾಗಿ, ಹಲವು ಬೇಡಿಕೆಗಳನ್ನು 15 ದಿನದೊಳಗೆ ಈಡೇರಿಸುವ ಭರವಸೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ ► ಮಡಿಕೇರಿ | ತಲ್ತರೆಶೆಟ್ಟಳ್ಳಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ: ಆರೋಪ 

ಅಹೋರಾತ್ರಿ: ಅಕ್ಷರದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ 60 ವರ್ಷ ತುಂಬಿದ ನೌಕರರನ್ನು ಅವಮಾನವೀಯವಾಗಿ ಕೆಲಸದಿಂದ ಬಿಡುಗಡೆಗೊಳಿಸುತ್ತಿರುವ ಸರಕಾರದ ಆದೇಶದ ವಿರುದ್ಧ ನೌಕರರು ಅಹೋರಾತ್ರಿ ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಜಮಾಯಿಸಿದ ಮಹಿಳಾ ನೌಕರರು ಫ್ರೀಡಂ ಪಾರ್ಕಿನ ಮೈದಾನದಲ್ಲಿ ಮಂಗಳವಾರ ಇಡೀ ರಾತ್ರಿ ಕಳೆದರು.

ಬುಧವಾರ ಮುಂಜಾನೆ ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಹೋರಾಟ ಆರಂಭಿದ ನೌಕರರು, ನಿನ್ನೆಯಿಂದ ಹೋರಾಟ ನಡೆಸುತ್ತಿದ್ದರು ಸಮಸ್ಯೆ ಆಲಿಸದ ಇಲಾಖೆಗೆ ನಾಚಿಗೆ ಆಗಬೇಕು. ನಿನ್ನೆಯಿಂದ ಇಲ್ಲಿದ್ದೇವೆ ಯಾರು ಬಂದಿಲ್ಲ ಅವರಿಗೆ ನಮ್ಮ ಕಷ್ಟ ಕಾಣುತ್ತಿಲ್ಲ. ಆರಾಮವಾಗಿ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ರಾಜ್ಯದಲ್ಲಿ ಬಿಸಿಯೂಟದ ಕಾರ್ಯಕ್ರಮ 2002-03ನೇ ಸಾಲಿನಲ್ಲಿ ಅನುಷ್ಠಾನಗೊಂಡಿದೆ.ಅಂದಿನಿಂದಲೂ ಯಾವುದೇ ವಯಸ್ಸಿನ ನಿಬರ್ಂಧ ಇಲ್ಲದೆ ಅಡುಗೆ ಸಿಬ್ಬಂದಿ ಕನಿಷ್ಠ ಗೌರವಧನ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಸರಕಾರ ಮಾ.5 ರಂದು 60 ವರ್ಷ ದಾಟಿದ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲು ಆದೇಶ ಹೊರಡಿಸಿತ್ತು. ಆದೇಶದಂತೆ ಇದೀಗ ಅವಮಾನೀಯವಾಗಿ ಮನೆಗೆ ಕಳುಹಿಸುತ್ತಿದ್ದಾರೆ ಎಂದು ಬೇಸರ ಹೊರಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X