Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹತ್ಯಾಕಾಂಡದ ಬಗ್ಗೆ ಪೆಲೆಸ್ತೀನ್...

ಹತ್ಯಾಕಾಂಡದ ಬಗ್ಗೆ ಪೆಲೆಸ್ತೀನ್ ಅಧ್ಯಕ್ಷರ ಹೇಳಿಕೆಗೆ ಜರ್ಮನಿ ಛಾನ್ಸಲರ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ17 Aug 2022 9:12 PM IST
share

ಬರ್ಲಿನ್, ಆ.17: ಹತ್ಯಾಕಾಂಡದ ಬಗ್ಗೆ ಪೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ಬರ್ಲಿನ್ನಲ್ಲಿ ನೀಡಿದ ಹೇಳಿಕೆ ಅಸಹ್ಯವಾಗಿದೆ ಎಂದು ಜರ್ಮನ್ ಛಾನ್ಸಲರ್ ಒಲಾಫ್ ಶ್ಹಾಲ್ಜ್ ಬುಧವಾರ ಪ್ರತಿಕ್ರಿಯಿಸಿದ್ದಾರೆ. 1972ರ ಮ್ಯೂನಿಚ್ ಒಲಿಂಪಿಕ್ಸ್ ಸಂದರ್ಭ ಪೆಲೆಸ್ತೀನಿಯನ್ ಬಂದೂಕುಧಾರಿಗಳು ಇಸ್ರೇಲ್ ತಂಡವನ್ನು ಒತ್ತೆಯಾಳುಗಳನ್ನಾಗಿ ಇರಿಸಿದ ಪ್ರಕರಣದ ಬಗ್ಗೆ (ಈ ಪ್ರಕರಣದಲ್ಲಿ ಇಸ್ರೇಲ್ನ 11 ಕ್ರೀಡಾಳುಗಳು ಹಾಗೂ ಕೋಚ್ ಹತರಾಗಿದ್ದರು) ಕ್ಷಮೆ ಯಾಚಿಸುವಿರಾ ಎಂದು ಮಂಗಳವಾರ ಶ್ಹಾಲ್ಜ್ರೊಂದಿಗಿನ ಜಂಟಿ ಸುದ್ಧಿಗೋಷ್ಟಿಯ ಸಂದರ್ಭ ಅಬ್ಬಾಸ್ರನ್ನು ಮಾಧ್ಯಮದವರು ಪ್ರಶ್ನಿಸಿದ್ದರು.

 ಇದಕ್ಕೆ ನೇರ ಉತ್ತರ ನೀಡದ ಅಬ್ಬಾಸ್, ಅದರ ಬದಲು ಈ ಪ್ರಕರಣವನ್ನು ಪೆಲೆಸ್ತೀನ್ ಪ್ರದೇಶದಲ್ಲಿನ ಪರಿಸ್ಥಿತಿಗೆ ಹೋಲಿಸಿದ್ದರು ಮತ್ತು 1947ರಿಂದ ಪೆಲೆಸ್ತೀನೀಯರ ವಿರುದ್ಧ ಇಸ್ರೇಲ್ 50 ಹತ್ಯಾಕಾಂಡ ಮತ್ತು 50 ಕಗ್ಗೊಲೆಗಳನ್ನು ನಡೆಸಿದೆ ಎಂದು ಆರೋಪಿಸಿದ್ದರು. ‌

ಪೆಲೆಸ್ತೀನಿಯನ್ ಅಧ್ಯಕ್ಷರ ಅತಿರೇಕದ ಹೇಳಿಕೆಗಳಿಂದ ನಾನು ಅಸಹ್ಯಗೊಂಡಿದ್ದೇನೆ ಎಂದು ಶ್ಹಾಲ್ಜ್ ಟ್ವೀಟ್ ಮಾಡಿದ್ದಾರೆ. ನಮಗೆ, ನಿರ್ದಿಷ್ಟವಾಗಿ ಜರ್ಮನ್ನರಿಗೆ, ಹತ್ಯಾಕಾಂಡದ ಹೋಲಿಕೆಯ ಯಾವುದೇ ಸಾಪೇಕ್ಷತೆ ಅಸಹನೀಯ ಮತ್ತು ಸ್ವೀಕಾರಾರ್ಹವಲ್ಲ. ಹತ್ಯಾಕಾಂಡದ ಅಪರಾಧವನ್ನು ನಿರಾಕರಿಸುವ ಯಾವುದೇ ಪ್ರಯತ್ನವನ್ನು ನಾನು ಖಂಡಿಸುತ್ತೇನೆ ಎಂದವರು ಹೇಳಿದ್ದಾರೆ. ಆದರೆ ಅಬ್ಬಾಸ್ ಹೇಳಿಕೆಯನ್ನು ಪತ್ರಿಕಾಗೋಷ್ಟಿಯಲ್ಲೇ ಖಂಡಿಸದ ಬಗ್ಗೆ ಶ್ಹಾಲ್ಜ್ ವಿರುದ್ಧವೂ ವ್ಯಾಪಕ ಅಸಹನೆ, ಟೀಕೆ ವ್ಯಕ್ತವಾಗಿದೆ.

ಶ್ಹಾಲ್ಜ್ ತಕ್ಷಣ ಪ್ರತಿಕ್ರಿಯೆ ಮತ್ತು ಸ್ಪಷ್ಟನೆ ನೀಡುತ್ತಾರೆಂದು ಎಲ್ಲರೂ ನಿರೀಕ್ಷಿಸಿದ್ದರು ಎಂದು ‘ಸ್ಪೀಗೆಲ್’ ಪತ್ರಿಕೆ ಬರೆದಿದೆ. ಇಸ್ರೇಲ್ ಪ್ರಧಾನಿ ಯಾಪಿರ್ ಲ್ಯಾಪಿಡ್ ಅವರೂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಹ್ಮೂದ್ ಅಬ್ಬಾಸ್ ಜರ್ಮನ್ ನೆಲದಲ್ಲಿ ನಿಂತು ಇಸ್ರೇಲ್ 50 ಹತ್ಯಾಕಾಂಡ ನಡೆಸಿದೆ ಎಂದು ಆರೋಪಿಸಿರುವುದು ನೈತಿಕ ಅವಮಾನ ಮಾತ್ರವಲ್ಲ, ದೈತ್ಯ ಸುಳ್ಳು ಕೂಡಾ ಆಗಿದೆ .

ಒಂದೂವರೆ ಮಿಲಿಯನ್ ಮಕ್ಕಳ ಸಹಿತ 6 ಮಿಲಿಯನ್ ಯೆಹೂದಿಗಳು ಹತ್ಯಾಕಾಂಡದಲ್ಲಿ ಹತರಾಗಿದ್ದಾರೆ. ಇತಿಹಾಸವು ಅವರನ್ನೆಂದೂ ಕ್ಷಮಿಸದು ಎಂದವರು ಟ್ವೀಟ್ ಮಾಡಿದ್ದಾರೆ. ಅಬ್ಬಾಸ್ ಮಾತುಗಳು ಭಯಾನಕವಾಗಿದೆ ಎಂದು ಯಾದ್ ವಷೆಮ್(ಹತ್ಯಾಕಾಂಡದ ಸಂತ್ರಸ್ತರಿಗೆ ಇಸ್ರೇಲ್ನ ಅಧಿಕೃತ ಸ್ಮಾರಕ)ನ ಅಧ್ಯಕ್ಷ ಡ್ಯಾನಿ ಡಯಾನ್ ಹೇಳಿದ್ದಾರೆ. ತನ್ನ ನೆಲದಲ್ಲಿ ನಡೆಸಿದ ಈ ಅಕ್ಷಮ್ಯ ವರ್ತನೆಗೆ ಜರ್ಮನ್ ಸರಕಾರ ಸೂಕ್ತವಾಗಿ ಪ್ರತಿಕ್ರಿಯಿಸಬೇಕು ಎಂದವರು ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X