Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಲ್ಲಿ ಅಲ್ಪಸಂಖ್ಯಾತರನ್ನು...

ಚೀನಾದಲ್ಲಿ ಅಲ್ಪಸಂಖ್ಯಾತರನ್ನು ಜೀತದಾಳುಗಳಂತೆ ದುಡಿಸುವುದು ಮಾನವೀಯತೆ ವಿರುದ್ಧದ ಅಪರಾಧ: ವಿಶ್ವಸಂಸ್ಥೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ17 Aug 2022 9:15 PM IST
share
ಚೀನಾದಲ್ಲಿ ಅಲ್ಪಸಂಖ್ಯಾತರನ್ನು ಜೀತದಾಳುಗಳಂತೆ ದುಡಿಸುವುದು ಮಾನವೀಯತೆ ವಿರುದ್ಧದ ಅಪರಾಧ: ವಿಶ್ವಸಂಸ್ಥೆ ಟೀಕೆ

ಜಿನೆವಾ, ಆ.17: ಚೀನಾದ ಕ್ಸಿನ್ಜಿಯಾಂಗ್ ಪ್ರಾಂತದಲ್ಲಿ ಅಲ್ಪಸಂಖ್ಯಾತರನ್ನು ಕೃಷಿ, ಕೈಗಾರಿಕೆ ಕ್ಷೇತ್ರಗಳಲ್ಲಿ ಜೀತದಾಳುಗಳಂತೆ ದುಡಿಸಿಕೊಳ್ಳುವ ಬಗ್ಗೆ ವಿಶ್ವಸಂಸ್ಥೆಯ ಸ್ವತಂತ್ರ ತಜ್ಞರ ವರದಿಯಲ್ಲಿ ಉಲ್ಲೇಖಿಸಿದ್ದು ಇದು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಎಂದು ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಟೀಕಿಸಿದ್ದಾರೆ.

ಕ್ಸಿನ್ಜಿಯಾಂಗ್ ಪ್ರಾಂತದಲ್ಲಿ ಚೀನಾದ ಅಧಿಕಾರಿಗಳು 1 ಮಿಲಿಯನ್ಗೂ ಅಧಿಕ ಉಯಿಗರ್ ಹಾಗೂ ಇತರ ಅಲ್ಪಸಂಖ್ಯಾತ ಮುಸ್ಲಿಮರನ್ನು ಬಂಧನಲ್ಲಿರಿಸಿದ ಹಾಗೂ ಮಹಿಳೆಯರ ಸಂತಾನಶಕ್ತಿ ಹರಣ ಮಾಡಿರುವ ಬಗ್ಗೆ ಆರೋಪವಿದೆ. ಚೀನಾವು ಅಲ್ಪಸಂಖ್ಯಾತರ ಜನಾಂಗೀಯ ಹತ್ಯೆ ನಡೆಸಿದೆ ಎಂದು ಅಮೆರಿಕ ಹಾಗೂ ಇತರ ಪಾಶ್ಚಿಮಾತ್ಯ ದೇಶಗಳು ಆರೋಪಿಸಿವೆ. ಆದರೆ ಚೀನಾ ಇದನ್ನು ನಿರಾಕರಿಸಿದೆ.

ಆಧುನಿಕ ಗುಲಾಮಗಿರಿ ಪ್ರಕರಣಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಟೊಮೊಯಾ ಒಬೊಕಟ ಮಂಗಳವಾರ ಬಿಡುಗಡೆಗೊಳಿಸಿರುವ ವರದಿಯಲ್ಲಿ ಚೀನಾದಲ್ಲಿ ಜೀತಕಾರ್ಮಿಕ ವ್ಯವಸ್ಥೆ ನಡೆದಿರುವ ಸರಕಾರ ನಿರ್ದೇಶಿತ 2 ವಿಭಿನ್ನ ವ್ಯವಸ್ಥೆಗಳನ್ನು ಬೆಟ್ಟು ಮಾಡಿದ್ದು ಇದಕ್ಕೆ ಪೂರಕವಾಗಿ ಚಿಂತಕರ, ಎನ್ಜಿಒ ಸಂಸ್ಥೆಗಳ ಹಾಗೂ ಸಂತ್ರಸ್ತರ ಹೇಳಿಕೆ ಮತ್ತು ವರದಿಯನ್ನೂ ಒದಗಿಸಿದೆ.

ಇದರಲ್ಲಿ ಮೊದಲನೆಯದು ವೃತ್ತಿಪರ ಕೌಶಲ್ಯ ಶಿಕ್ಷಣ ಮತ್ತು ತರಬೇತಿ ಕೇಂದ್ರದ ವ್ಯವಸ್ಥೆಯಾಗಿದ್ದು ಇದರಲ್ಲಿ ಅಲ್ಪಸಂಖ್ಯಾತರನ್ನು ಕೆಲಸದ ನಿಯೋಜನೆಗೆ ಒಳಪಟ್ಟು ವಶಕ್ಕೆ ಪಡೆಯಲಾಗುತ್ತದೆ. ಮತ್ತೊಂದು ಕಾರ್ಮಿಕ ವರ್ಗಾವಣೆಯ ಮೂಲಕ ಬಡತನವನ್ನು ಕಡಿಮೆ ಮಾಡುವ ಪ್ರಯತ್ನ. ಇದರಲ್ಲಿ ಗ್ರಾಮೀಣ ಕಾರ್ಮಿಕರನ್ನು ದ್ವಿತೀಯ ಅಥವಾ ತೃತೀಯ ಕೆಲಸಕ್ಕೆ ವರ್ಗಾಯಿಸಲಾಗುತ್ತದೆ. ಈ ಕಾರ್ಯಕ್ರಮಗಳು ಅಲ್ಪಸಂಖ್ಯಾತರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸಿ ಅವರ ಆದಾಯವನ್ನು ಹೆಚ್ಚಿಸುವ ಸಾಧ್ಯತೆಯಿದ್ದರೂ, ಪೀಡಿತ ಸಮುದಾಯ ನಿರ್ವಹಿಸಿದ ಕೆಲಸದ ಅನೈಚ್ಛಿಕ ಸ್ವರೂಪವು ಬಲವಂತದ ದುಡಿಮೆಯ ಸೂಚಕಗಳಂತೆ ಹಲವು ಬಾರಿ ಕಂಡುಬಂದಿದೆ ಎಂದು ವಿಶೇಷ ಪ್ರತಿನಿಧಿ ಪರಿಗಣಿಸಿದ್ದಾರೆ’ ಎಂದು ವರದಿ ಹೇಳಿದೆ.

ಕಾರ್ಮಿಕರ ಮೇಲೆ ಪ್ರಯೋಗಿಸಿದ ಅಧಿಕಾರದ ಸ್ವರೂಪ ಮತ್ತು ಪ್ರಮಾಣವು(ಅವರ ಕೆಲಸದ ಮೇಲೆ ಮಿತಿಮೀರಿದ ನಿಗಾ ಇಡುವುದು, ನಿಂದನೆ ಮತ್ತು ಕೆಲಸದ ಪರಿಸ್ಥಿತಿ) ಮನುಷ್ಯತ್ವದ ವಿರುದ್ಧದ ಅಪರಾಧವಾಗಿ ಗುಲಾಮಗಿರಿಗೆ ಕಾರಣವಾಗಬಹುದು. ಈ ವಿಷಯದಲ್ಲಿ ಇನ್ನಷ್ಟು ಸ್ವತಂತ್ರ ವಿಶ್ಲೇಷಣೆಯ ಅಗತ್ಯವಿದೆ . ಇದೇ ರೀತಿಯ ಕಾರ್ಮಿಕ ವರ್ಗಾವಣೆ ಟಿಬೆಟ್ನಲ್ಲೂ ಇದೆ. ಇಲ್ಲಿ ರೈತರು, ಕುರಿಗಾಹಿಗಳು ಹಾಗೂ ಇತರ ಗ್ರಾಮೀಣ ಕಾರ್ಮಿಕರನ್ನು ಕಡಿಮೆ ಕೌಶಲ್ಯದ ಮತ್ತು ಕಡಿಮೆ ಸಂಬಳದ ಕೆಲಸಕ್ಕೆ ವರ್ಗಾಯಿಸಲಾಗಿದೆ ಎಂದು ವರದಿ ಹೇಳಿದೆ.

ಉಗ್ರವಾದವನ್ನು ಎದುರಿಸಲು ವಿನ್ಯಾಸಗೊಳಿಸಿರುವ ವೃತ್ತಿಪರ ತರಬೇತಿ ಕೇಂದ್ರಗಳನ್ನು ಕ್ಸಿಯಾನ್ಜಿಂಗ್ನಲ್ಲಿ ನಡೆಸಲಾಗುತ್ತಿದೆ ಎಂದು ಚೀನಾ ಪ್ರತಿಪಾದಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X