Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೊಹಿಂಗ್ಯಾಗಳಿಗೆ ನಗರದಲ್ಲಿ ನೆಲೆಯೂರಲು...

ರೊಹಿಂಗ್ಯಾಗಳಿಗೆ ನಗರದಲ್ಲಿ ನೆಲೆಯೂರಲು ದಿಲ್ಲಿ ಸರಕಾರ ಅವಕಾಶ ನೀಡುವುದಿಲ್ಲ: ಮನೀಶ್‌ ಸಿಸೋಡಿಯ

ವಾರ್ತಾಭಾರತಿವಾರ್ತಾಭಾರತಿ18 Aug 2022 11:58 AM IST
share
ರೊಹಿಂಗ್ಯಾಗಳಿಗೆ ನಗರದಲ್ಲಿ ನೆಲೆಯೂರಲು ದಿಲ್ಲಿ ಸರಕಾರ ಅವಕಾಶ ನೀಡುವುದಿಲ್ಲ: ಮನೀಶ್‌ ಸಿಸೋಡಿಯ

ಹೊಸದಿಲ್ಲಿ: ದಿಲ್ಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, "ರೊಹಿಂಗ್ಯಾ ನಿರಾಶ್ರಿತರನ್ನು ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಲು ಆಮ್ ಆದ್ಮಿ ಪಕ್ಷದ (Aam Aadmi Party) ನೇತೃತ್ವದ ಸರ್ಕಾರ ಅವಕಾಶ ನೀಡುವುದಿಲ್ಲ" ಎಂದು ಬುಧವಾರ ಹೇಳಿದ್ದಾರೆ. ಗೃಹ ಸಚಿವಾಲಯವು(Home Ministry) ರೊಹಿಂಗ್ಯಾ ಮುಸ್ಲಿಮರಿಗೆ(Rohingya Muslims) ಫ್ಲಾಟ್‌ಗಳು ಮತ್ತು ಭದ್ರತೆಯ ಭರವಸೆ ನೀಡುವ ಕೇಂದ್ರ ಸಚಿವರ ಹೇಳಿಕೆಯನ್ನು ವಿರೋಧಿಸಿದ ಗಂಟೆಗಳ ನಂತರ ಸಿಸೋಡಿಯಾ ಈ ಹೇಳಿಕೆ ನೀಡಿದ್ದಾರೆ.

"ರೊಹಿಂಗ್ಯಾಗಳು ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಲು ಬಿಡುವುದಿಲ್ಲ ಎಂದು ದಿಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ ಮತ್ತು ಈ ಕ್ರಮವನ್ನು ತನ್ನ ತೀವ್ರವಾಗಿ ವಿರೋಧಿಸುತ್ತದೆ" ಎಂದು ಸಿಸೋಡಿಯಾ(Manish Sisodia) ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. "ಈ ರಾಷ್ಟ್ರ ಮತ್ತು ಅದರ ಜನರ ಭದ್ರತೆಯಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ" ಎಂದೂ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೊಹಿಂಗ್ಯಾ ನಿರಾಶ್ರಿತರನ್ನು ದಿಲ್ಲಿಯ ಬಕ್ಕರ್‌ವಾಲಾದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗಾಗಿ ಗೊತ್ತುಪಡಿಸಿದ ಫ್ಲ್ಯಾಟ್‌ಗಳಿಗೆ ಸ್ಥಳಾಂತರಿಸಲಾಗುವುದು ಮತ್ತು ರಾತ್ರಿಯಿಡೀ ಪೊಲೀಸ್ ರಕ್ಷಣೆಯೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ಪ್ರಕಟಿಸಿದ್ದರು.

ಆದರೆ, ಪುರಿ ಅವರ ಘೋಷಣೆಯ ಕೆಲವೇ ಗಂಟೆಗಳ ನಂತರ, ಗೃಹ ಸಚಿವ ಅಮಿತ್ ಶಾ(Amit sha) ಅವರ ಕಚೇರಿ ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ ಎಂದು ನಿರಾಕರಿಸಿದೆ.

ಗೃಹ ಸಚಿವಾಲಯದ ಹೇಳಿಕೆಯು "ಅಕ್ರಮ ವಿದೇಶಿಗರನ್ನು" ಕಾನೂನಿನ ಪ್ರಕಾರ ಬಂಧನ ಕೇಂದ್ರಗಳಲ್ಲಿ ಇರಿಸಬೇಕು ಎಂದು ಹೇಳಿದೆ. ನಿರಾಶ್ರಿತರು ತಂಗಿರುವ ಸ್ಥಳವನ್ನು ಬಂಧನ ಕೇಂದ್ರವೆಂದು ಘೋಷಿಸುವಂತೆ ದಿಲ್ಲಿ ಸರ್ಕಾರಕ್ಕೆ ಸಚಿವಾಲಯ ನಿರ್ದೇಶನ ನೀಡಿದೆ. ಬುಧವಾರ ಸಂಜೆ, ಗೃಹ ಸಚಿವಾಲಯದ ಹೇಳಿಕೆಯನ್ನು ಪುರಿ ಟ್ವೀಟ್ ಮಾಡಿ, ಈ ವಿಷಯದ ಬಗ್ಗೆ ಇದು ಸರಿಯಾದ ನಿಲುವು ಎಂದು ಹೇಳಿದರು.

ನಂತರ ಪತ್ರಿಕಾಗೋಷ್ಠಿಯಲ್ಲಿ, ನಿರಾಶ್ರಿತರನ್ನು ಅಕ್ರಮವಾಗಿ ನೆಲೆಸಲು ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರವು ಸಂಚು ನಡೆಸುತ್ತಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X