Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಿಮಗೆ ಏನು ಅರ್ಹತೆಯಿದೆ ಎಂದು ನಾವು...

"ನಿಮಗೆ ಏನು ಅರ್ಹತೆಯಿದೆ ಎಂದು ನಾವು ನಿಮ್ಮ ಮಾತು ಕೇಳಬೇಕು?"

ಉಚಿತ ಕೊಡುಗೆಗಳ ಬಗ್ಗೆ ಪ್ರಧಾನಿ ಟೀಕೆಗೆ ತಮಿಳುನಾಡು ವಿತ್ತ ಸಚಿವ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ18 Aug 2022 7:21 PM IST
share
ನಿಮಗೆ ಏನು ಅರ್ಹತೆಯಿದೆ ಎಂದು ನಾವು ನಿಮ್ಮ ಮಾತು ಕೇಳಬೇಕು?

ಹೊಸದಿಲ್ಲಿ: ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗರಾಜನ್ (P. Thiagarajan) ಉಚಿತ ಕೊಡುಗೆಗಳ (Freebie)ಕುರಿತು ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರಗಳು ಏನು ಮಾಡಬೇಕು ಎಂಬುದನ್ನು ಕೇಂದ್ರ ಸರ್ಕಾರ ಏಕೆ ನಿರ್ಧರಿಸಬೇಕು ಎಂದು ಡಾ ಪಿ. ತ್ಯಾಗರಾಜನ್ ಪ್ರಶ್ನಿಸಿದ್ದಾರೆ. Indiatoday ಯೊಂದಿಗಿನ ಚರ್ಚೆಯಲ್ಲಿ ತ್ಯಾಗರಾಜನ್‌ ಮಾಡಿರುವ ಬಿರುಸಿನ ವಾಗ್ದಾಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗತೊಡಗಿವೆ. ಹಣಕಾಸು ಸಚಿವರ ದಿಟ್ಟತನ ಹಾಗೂ ಸ್ಪಷ್ಟತೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸುತ್ತಿದ್ದಾರೆ. 

ಉಚಿತ ಕೊಡುಗೆಗಳು ಮುಂದೆ ಫಲ ಕೊಡುವ ರೂಪದಲ್ಲಿರಬೇಕು ಎಂಬುದಾಗಿ ಪ್ರಧಾನಿ ಹೇಳಿದ್ದಾರೆ ಎಂದು ಹೇಳಿ ಪ್ರಧಾನಿ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಇಂಡಿಯಾ ಟುಡೇಯ ರಾಹುಲ್ ಕವಲ್ ಅವರು ತ್ಯಾಗರಾಜನ್ ಅವರನ್ನು ಪ್ರಶ್ನಿಸಿದರು. 

ಅದಕ್ಕೆ ತಿರುಗೇಟು ನೀಡಿದ ತ್ಯಾಗರಾಜನ್ “ಒಂದೋ ನೀವು ಹೇಳುತ್ತಿರುವುದಕ್ಕೆ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನಮಗಿಂತ ನಿಮಗೆ ಚೆನ್ನಾಗಿ ತಿಳಿದಿದೆ ಎನ್ನುವ ಕೆಲವು ಪರಿಣತಿಯನ್ನು ನೀವು ಹೊಂದಿರಬೇಕು. ಅಥವಾ ಆರ್ಥಿಕತೆಯಲ್ಲಿ ಎರಡು ಪಿಹೆಚ್‌ಡಿ ಮಾಡಿರಬೇಕು. ಅಥವಾ ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ , ಸಾಲವನ್ನು ಕಡಿಮೆ ಮಾಡಿದ್ದೀರಿ, ತಲಾ ಆದಾಯ ಹೆಚ್ಚಿಸಿರಬೇಕು. ನೀವು ಉದ್ಯೋಗಗಳನ್ನು ನಿರ್ಮಿಸಿದ್ದೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನೆಲೆಯನ್ನು ನೀವು ಹೊಂದಿರಬೇಕು. 

"ಹಾಗಿದ್ದರೆ ನೀವು ಹೇಳುವುದನ್ನು ನಾವು ಕೇಳುತ್ತೇವೆ. ಇದೇನೂ ಇಲ್ಲದಿರುವಾಗ, ನಾವು ಯಾರೊಬ್ಬರ ಅಭಿಪ್ರಾಯವನ್ನು ಏಕೆ ಕೇಳಬೇಕು? ಯಾರೊಬ್ಬರ ದೃಷ್ಟಿಕೋನವನ್ನು ನಾನೇಕೆ ಅಳವಡಿಸಬೇಕು? ಚುನಾವಣೆ ನನಗೆ ನಾನು ಏನು ಮಾಡಬೇಕು ಅಂತ ಹೇಳಿದೆ.  ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟರು, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಕೇಂದ್ರ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಕೇಂದ್ರಕ್ಕೆ ನಾವು ಉತ್ತಮ ನಿವ್ವಳ ಕೊಡುಗೆದಾರರಾಗಿದ್ದೇವೆ. ನಾವು ಒಂದು ರುಪಾಯಿ ಕೊಟ್ಟರೆ ನಮಗೆ 33 ಪೈಸೆ ಅಷ್ಟೇ ಮರಳಿ ಬರುತ್ತದೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?" ಎಂದು ತ್ಯಾಗರಾಜನ್‌ ಪ್ರಶ್ನಿಸಿದ್ದಾರೆ.
 
ತನ್ನ ವಿಷಯವನ್ನು ಪುನರುಚ್ಚರಿಸಿದ ತ್ಯಾಗರಾಜನ್, “ನಿಮಗೆ ಸಾಂವಿಧಾನಿಕ ಆಧಾರವಿದೆಯೇ? ಇಲ್ಲ. ನೀವು ಆರ್ಥಿಕ ತಜ್ಞರೇ? ಇಲ್ಲ. ನಿಮಗೆ ನೊಬೆಲ್ ಪ್ರಶಸ್ತಿ ಇದೆಯೇ? ಇಲ್ಲ ನೀವು ನಮಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದೀರಾ? ಇಲ್ಲ. ಯಾವ ಆಧಾರದ ಮೇಲೆ ನಾನು ನಿಮಗಾಗಿ ನನ್ನ ನೀತಿಯನ್ನು ಬದಲಾಯಿಸಬೇಕು, ಇದು ಸ್ವರ್ಗದಿಂದ ಬರುತ್ತಿರುವ ಸಂವಿಧಾನೇತರ ಆದೇಶವೇ?” ಎಂದು ಪ್ರಶ್ನಿಸಿದ್ದಾರೆ.
 
ಉಚಿತ ಕೊಡುಗೆಗಳ ವಿರೋಧಿ ಎಂದು ಪ್ರಧಾನಿ ಮೋದಿ ಹೇಳಿರುವುದನ್ನು ಉಲ್ಲೇಖಿಸಿದ ತ್ಯಾಗರಾಜನ್‌, “ಒಂದು ವೇಳೆ, ಪ್ರಧಾನಿ ಮೋದಿಯವರು ಉಚಿತ ಕೊಡುಗೆಗಳ ವಿರೋಧಿ ಎಂದಾದರೆ, ಪ್ರತಿ ಸ್ಕೂಟರ್ ಗೆ 25,000 ರುಪಾಯಿ ಸಬ್ಸಿಡಿ ನೀಡುವ ಯೋಜನೆ ಉದ್ಘಾಟಿಸಲು ಪ್ರಧಾನಿ ಮೋದಿ ಏಕೆ ಬಂದರು? ತಮಿಳುನಾಡಿನ ಉಚಿತ ಕೊಡುಗೆಗಳ ಇತಿಹಾಸದಲ್ಲಿ ಅದರಷ್ಟು ಕೆಟ್ಟದು ಇನ್ನೊಂದಿಲ್ಲ, ಅದರಿಂದ ಪರಿಸರ ಮಾಲಿನ್ಯ ಹೆಚ್ಚಿತು, ಸಾರ್ವಜನಿಕ ಸಾರಿಗೆ ವಿರೋಧಿಯಾಗಿತ್ತ, ಸಾಕಷ್ಟು ವಂಚನೆಗಳು ನಡೆದವು. ಅಂತಹ ಯೋಜನೆಯನ್ನು ಪ್ರಧಾನಿ ಮೋದಿ ಏಕೆ ಉದ್ಘಾಟಿಸಿದರು?” ಎಂದು ಪ್ರಶ್ನಿಸಿದ್ದಾರೆ.

ಭಾರತದ ಉಳಿದೆಲ್ಲಾ ರಾಜ್ಯಗಳಿಗೆ ಹೋಲಿಸಿದರೆ, ತಮಿಳುನಾಡಿನಲ್ಲಿ ತಲಾ ಆದಾಯ ಹೆಚ್ಚಿದೆ, ಸಾಮಾಜಿಕ ಅಭಿವೃಧ್ದಿ ಹೆಚ್ಚಿದೆ. ಹಣದುಬ್ಬರ ಕಡಿಮೆ ಇದೆ. ಹೀಗಿರುವಾಗ ನಾವು ನಿಮ್ಮಿಂದ ಸಲಹೆಯನ್ನು ಯಾಕೆ ಕೇಳಬೇಕು? ಎಂದು ಅವರು ಪ್ರಶ್ನಿಸಿದ್ದಾರೆ. 

ಉಚಿತ ಕೊಡುಗೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. “ಮತ ಗಳಿಸಲು ಉಚಿತ ಕೊಡುಗೆ ಭರವಸೆಗಳ ಸಂಸ್ಕೃತಿ ಈ ದಿನಗಳಲ್ಲಿ ಸಾಮಾನ್ಯ. ನಾಗರಿಕರು, ಅದರಲ್ಲೂ ಯುವಜನರು ಇದಕ್ಕೆ ಬಲಿಯಾಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ. ಇಂತಹ ರೇವಡಿಗಳಿಗೆ ಬಲಿಯಾಗಬಾರದು. (ಹಬ್ಬಗಳಲ್ಲಿ ಕೊಡುವ ಸಿಹಿ ತಿಂಡಿಗೆ ರೇವಡಿ ಅನ್ನುವ ಹೆಸರಿದೆ). ಉಚಿತ ಕೊಡುಗೆಗಳು ಎಂದಿಗೂ ತಡೆರಹಿತ ಹೆದ್ದಾರಿಗಳು, ರಕ್ಷಣಾ ಕಾರಿಡಾರ್‌ಗಳು ಅಥವಾ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾರವು. ಉಚಿತ ಕೊಡುಗೆಗಳು ತೆರಿಗೆದಾರರಿಗೆ ಹೊರೆಯಾಗಲಿದೆ’  ಎಂದು ಇತ್ತೀಚೆಗೆ ಪ್ರಧಾನಿ ಹೇಳಿದ್ದರು. 

ಉಚಿತ ಶಿಕ್ಷಣ, ಉಚಿತ ಆರೋಗ್ಯ, ವಿದ್ಯಾರ್ಥಿಗಳಿಗೆ ಬೇಕಾದ ಕಲಿಕಾ ಸಾಮಾಗ್ರಿಗಳು ಉಚಿತವಾಗಿ ನೀಡುವುದು ಕಲ್ಯಾಣ ಕಾರ್ಯಕ್ರಮ ಅವನ್ನು ರೇವಡಿ ಎಂದು ಲೇವಡಿ ಮಾಡಬಾರದು ಎಂದು ಪ್ರತಿಪಕ್ಷಗಳು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದವು. ಕೆ. ಚಂದ್ರಶೇಖರ್‌ ರಾವ್, ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

So..I went on a show @IndiaToday unexpectedly yesterday, and answered 3 questions in a row...of which one seems to be a bit popular today. Here are all 3 questions and answers, for full context

ஒட்டுமொத்த சூழலுக்கான 3 கேள்விகள் மற்றும் விடைகள் இங்கே உள்ளது

English w/ Tamil CC pic.twitter.com/FdaLRmCO1U

— Dr P Thiaga Rajan (PTR) (@ptrmadurai) August 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X