Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾವು ತೈವಾನ್ ಮೇಲಿನ ಮಿಲಿಟರಿ, ಆರ್ಥಿಕ...

ಚೀನಾವು ತೈವಾನ್ ಮೇಲಿನ ಮಿಲಿಟರಿ, ಆರ್ಥಿಕ ‘ಬಲಾತ್ಕಾರ’ ಹೆಚ್ಚಿಸಲಿದೆ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ18 Aug 2022 9:23 PM IST
share
ಚೀನಾವು ತೈವಾನ್ ಮೇಲಿನ ಮಿಲಿಟರಿ, ಆರ್ಥಿಕ ‘ಬಲಾತ್ಕಾರ’ ಹೆಚ್ಚಿಸಲಿದೆ: ಅಮೆರಿಕ

ತೈಪೆ, ಆ.18: ತೈವಾನ್ ಮೇಲಿನ ಮಿಲಿಟರಿ, ರಾಜತಾಂತ್ರಿಕ ಮತ್ತು ಆರ್ಥಿಕ ಬಲಾತ್ಕಾರವನ್ನು ಚೀನಾ ಹೆಚ್ಚಿಸುವುದೆಂದು ನಿರೀಕ್ಷಿಸಲಾಗಿದೆ ಎಂದು ಅಮೆರಿಕದ ಪೂರ್ವ ಏಶ್ಯಾಕ್ಕೆ ಅಮೆರಿಕದ ಉನ್ನತ ರಾಯಭಾರಿ ಡೇನಿಯಲ್ ಕ್ರಿಟೆನ್ಬ್ರಿಂಕ್ ಹೇಳಿದ್ದಾರೆ. ಸ್ವಯಂ ಆಡಳಿತ ವ್ಯವಸ್ಥೆಯಿರುವ ತೈವಾನ್ಗೆ ಅಮೆರಿಕ ಸಂಸತ್ ನ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹಾಗೂ ಅಮೆರಿಕದ ಸಂಸತ್ ಸದಸ್ಯರ ನಿಯೋಗ ನೀಡಿದ್ದ ಎರಡು ಪ್ರತ್ಯೇಕ ಭೇಟಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ, ತೈವಾನ್ ಸುತ್ತಮುತ್ತ ಬೃಹತ್ ಸೇನಾ ಸಮರಾಭ್ಯಾಸ ನಡೆಸಿತ್ತು.

ತೈವಾನ್ ತನ್ನ ಭೂಪ್ರದೇಶದ ವ್ಯಾಪ್ತಿಯಲ್ಲಿದೆ ಎಂಬುದು ಚೀನಾದ ಪ್ರತಿಪಾದನೆಯಾಗಿದೆ. ಈ ಮಧ್ಯೆ, ಚೀನಾದ ಸಮರಾಭ್ಯಾಸಕ್ಕೆ ಪ್ರತಿಯಾಗಿ ತೈವಾನ್ಗೆ ಬೆಂಬಲ ಸೂಚಿಸುವ ದೃಷ್ಟಿಯಿಂದ ಆ ದೇಶದೊಂದಿಗೆ ಶರತ್ಕಾಲದ ಅಂತ್ಯದೊಳಗೆ ಅಧಿಕೃತ ವ್ಯಾಪಾರ ಮಾತುಕತೆ ನಡೆಸುವ ಯೋಜನೆಯಿದೆ ಎಂದು ಅಮೆರಿಕ ಗುರುವಾರ ಘೋಷಿಸಿದೆ. ‘ಚೀನಾ ಮತ್ತು ತೈವಾನ್ ಕುರಿತ ನಮ್ಮ ಕಾರ್ಯನೀತಿ ಬದಲಾಗಿಲ್ಲ. 

ಬದಲಾಗಿರುವುದೆಂದರೆ ಚೀನಾದ ಹೆಚ್ಚುತ್ತಿರುವ ಬಲಾತ್ಕಾರದ ವರ್ತನೆ. ಈ ಕ್ರಮಗಳು ತೈವಾನ್ ಅನ್ನು ಬೆದರಿಸಲು, ಬಲವಂತ ಪಡಿಸಲು ಮತ್ತು ಅದರ ಚೇತರಿಸಿಕೊಳ್ಳುವ ಸಾಮರ್ಥ್ಯವನ್ನು ದುರ್ಬಲಗೊಳಿಸಲು ನಡೆಸುವ ತೀವ್ರ ಒತ್ತಡದ ಅಭಿಯಾನದ ಭಾಗವಾಗಿದೆ. ಈ ಒತ್ತಡದ ಅಭಿಯಾನ ಮುಂದಿನ ದಿನಗಳಲ್ಲೂ ಮುಂದುವರಿಯುವ ನಿರೀಕ್ಷೆಯಿದೆ ’ ಎಂದು ಟೆಲಿಕಾನ್ಫರೆನ್ಸ್ ಮೂಲಕ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಕ್ರಿಟೆನ್ಬ್ರಿಂಕ್ ಹೇಳಿದ್ದಾರೆ.

ತೈವಾನ್ ಅನ್ನು ಸಾರ್ವಭೌಮ ದೇಶ ಎಂದು ಮಾನ್ಯ ಮಾಡುವ ಯಾವುದೇ ರಾಜತಾಂತ್ರಿಕ ಕ್ರಮವನ್ನು ಚೀನಾ ವಿರೋಧಿಸುತ್ತದೆ ಮತ್ತು ತೈವಾನ್ನ ಅರ್ಥವ್ಯವಸ್ಥೆಯ ಮೇಲೆ ಸಾಂಕೇತಿಕ ನಿರ್ಬಂಧ ವಿಧಿಸಿದೆ. ಚೀನಾದ ಮಾತು ಹಾಗೂ ವರ್ತನೆ ಅಸ್ಥಿರಗೊಳಿಸುವ ಉಪಕ್ರಮವಾಗಿದೆ ಮತ್ತು ಅವರ ತಪ್ಪು ಲೆಕ್ಕಾಚಾರವು ತೈವಾನ್ ಜಲಸಂಧಿಯ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಕ್ರಿಟೆನ್ಬ್ರಿಂಕ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X