Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ...

ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಪಿಎಂ

ವಾರ್ತಾಭಾರತಿವಾರ್ತಾಭಾರತಿ18 Aug 2022 10:19 PM IST
share
ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಪಿಎಂ

ಗಂಗಾವತಿ, ಆ.18: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಂಭೀರವಾದ ಘರ್ಷಣೆ ನಡೆದು ಸಾವುಗಳು ಸಂಭವಿಸಿವೆ. ಘಟನೆ ಸಂಬಂಧಿಸಿದ ಸುಳ್ಳು ಕೊಲೆ ಪ್ರಕರಣ ದಾಖಲಿಸಲಾಗಿದೆ. ಹಿಂಸಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಸಿಪಿಎಂ ಗಂಗಾವತಿ ತಾಲ್ಲೂಕು ಸಮಿತಿ ಆಗ್ರಹಿಸಿದೆ.

ಈ ಪ್ರಕರಣದಲ್ಲಿ ಅಮಾಯಕರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಕೈಬಿಡಬೇಕು. ಅಮಾಯಕರಾದ ಬಾಳಪ್ಪ, ಸಣ್ಣ ಹನುಮಂತ ಇತರರ ಮೇಲೆ ಹಾಕಿರುವ ಸುಳ್ಳು ಪ್ರಕರಣವನ್ನು ಕೈಬಿಡಬೇಕೆಂದು ಸಿಪಿಎಂ ಪಕ್ಷವು ಆಗ್ರಹಿಸಿದೆ. 

ಘಟನೆಯ ನಂತರ ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾಗಿದೆ. ಬಂಧಿಸುವ ಭೀತಿಯಿಂದಾಗಿ ಜನತೆ ಗ್ರಾಮ ತೊರೆದಿದ್ದಾರೆ. ವಯೊವೃದ್ದರಿಗೆ, ದನ-ಕರುಗಳ ನಿರ್ವಹಣೆ ಮತ್ತು ಜೀವನ ನಿರ್ವಹಣೆಗೆ ಭಾರಿ ತೊಂದರೆಯಾಗಿದೆ. ಆದುದರಿಂದ, ಈ ಪ್ರಕರಣವನ್ನು ಸಮಗ್ರವಾಗಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನ್ಯಾಯಾಂಗ ತನಿಖೆ ಹಾಗೂ ಸುಳ್ಳು ಪ್ರಕರಣ ಕೈಬಿಡಬೇಕೆಂದು ಆಗ್ರಹಿಸಿದ್ದು, ಅಲ್ಲದೆ, ಪ್ರಕರಣದಲ್ಲಿ ಸಾವನ್ನಪ್ಪಿದ ಎರಡು ಕುಟುಂಬಕ್ಕೂ ತಲಾ 50 ಲಕ್ಷ ರೂಪಾಯಿ ಪರಿಹಾರ ವಿತರಿಸಬೇಕು ಮತ್ತು ಗಾಯಾಳುಗಳಿಗೆ ಜಿಲ್ಲಾಡಳಿತ ಚಿಕಿತ್ಸೆಯನ್ನು ಕೊಡಿಸಬೇಕು. ಗ್ರಾಮದಲ್ಲಿ ಶಾಂತಿ ಸಭೆಯನ್ನು ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಹಕ್ಕೊತ್ತಾಯಗಳನ್ನು ಇತ್ಯರ್ಥಪಡಿಸಬೇಕೆಂದು ಸಿಪಿಎಂ ಪಕ್ಷವು ಗಂಗಾವತಿಯ ಉಪ ತಹಶೀಲ್ದಾರ್ ಹೊರಪೇಟೆ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಚಂದ್ರಪ್ಪ ಹೋಸ್ಕರ, ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಜಿಲ್ಲಾ ಮುಂಖಡರಾದ ಬಸವರಾಜ ಮರಕುಂಬಿ, ಹುಸೇನಪ್ಪ, ಅಮರೇಶ ಕಡಗದ, ಮರಿನಾಗಪ್ಪ, ಶಿವಕುಮಾರ ಈಚನಾಳ, ಸೋಮನಾಥ, ಮುಕೇಶ, ಹನುಮಂತ ಹೋಸ್ಕರಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X