Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಚಿವ ಮಾಧುಸ್ವಾಮಿ ಆಪ್ತ ಸಹಾಯಕರಿಂದ...

ಸಚಿವ ಮಾಧುಸ್ವಾಮಿ ಆಪ್ತ ಸಹಾಯಕರಿಂದ ಲಂಚಕ್ಕೆ ಬೇಡಿಕೆ?

ಅಂಗವಿಕಲರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ಮಂಜೂರು

ಜಿ.ಮಹಾಂತೇಶ್ಜಿ.ಮಹಾಂತೇಶ್19 Aug 2022 8:37 AM IST
share
ಸಚಿವ ಮಾಧುಸ್ವಾಮಿ ಆಪ್ತ ಸಹಾಯಕರಿಂದ ಲಂಚಕ್ಕೆ ಬೇಡಿಕೆ?

ಬೆಂಗಳೂರು, ಆ.19: ಅಂಗವಿಕಲರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನವನ್ನು ಮಂಜೂರು ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ  ಬೇಡಿಕೆ ಇಡುತ್ತಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಂಗವಿಕಲರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ನೀಡಲು ತಯಾರಿಸುವ  ಆಯ್ಕೆಪಟ್ಟಿಯಲ್ಲಿ  ಸೇರಿಸಲು ಸಹ  ಜೆ.ಸಿ.ಮಾಧುಸ್ವಾಮಿ ಅವರ ಆಪ್ತ ಕಾರ್ಯದರ್ಶಿ, ಆಪ್ತ ಸಹಾಯಕರಿಗೆ ಫಲಾನುಭವಿಗಳು ಲಂಚ ನೀಡಬೇಕು ಮತ್ತು ಅವರನ್ನು  ಗೋಗರೆಯಬೇಕಾದ ಸ್ಥಿತಿ ಇದೆ ಎಂಬುದನ್ನು ನಿರೂಪಿಸುವ  ಎರಡು ಆಡಿಯೋ ಬಹಿರಂಗವಾಗಿದೆ.

‘ಸರಕಾರ ನಡೆಯುತ್ತಿಲ್ಲ, ಮ್ಯಾನೇಜ್ ಮಾಡಲಾಗುತ್ತಿದೆ, ತಳ್ಳಿದರೆ ಸಾಕಷ್ಟೆ’ ಎಂದು ಜೆ.ಸಿ.ಮಾಧುಸ್ವಾಮಿ ಅವರು ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿದ್ದ ಸಂಭಾಷಣೆಯು ಬಹಿರಂಗಗೊಂಡ ಬೆನ್ನಲ್ಲೇ ಅಂಗವಿಕಲರಿಗೆ ನೀಡುವ ಯಂತ್ರಚಾಲಿತ ವಾಹನಗಳನ್ನು ಮಂಜೂರು ಮಾಡಿಸಿಕೊಳ್ಳಲು ಜೆ.ಸಿ.ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಕುರಿತು ಬಹಿರಂಗವಾಗಿರುವ ಎರಡು  ಆಡಿಯೋ ಮಹತ್ವ ಪಡೆದುಕೊಂಡಿದೆ.

ಇಲಾಖೆಯ ತುಮಕೂರು ಜಿಲ್ಲಾ ಮುಖ್ಯಾಧಿಕಾರಿ ಮತ್ತು ಚಿಕ್ಕನಾಯಕನಹಳ್ಳಿಯ ಫಲಾನುಭವಿಯೊಬ್ಬರ ಮಧ್ಯೆ ನಡೆದಿದೆ ಎನ್ನಲಾದ ಮಾತುಕತೆಯು   ತ್ರಿಚಕ್ರ ವಾಹನ ವಿತರಣೆ ಪ್ರಕ್ರಿಯೆಯ ಮತ್ತೊಂದು ಮುಖವನ್ನೂ  ಅನಾವರಣಗೊಳಿಸಿದೆ.  ಈ ಆಡಿಯೋ  ''the-file.in'' ಗೆ ಲಭ್ಯವಾಗಿದೆ.

ಅಲ್ಲದೆ ಜಿಲ್ಲಾ ಮುಖ್ಯಾಧಿಕಾರಿಯೊಬ್ಬರೊಂದಿಗಿನ ಸಂಭಾಷಣೆಯಲ್ಲಿರುವ ಪ್ರಕಾರ ಫಲಾನುಭವಿಗಳಿಗೆ ವಿತರಿಸಲೆಂದು ನೀಡಿರುವ ತ್ರಿಚಕ್ರ ವಾಹನಗಳ ಪೈಕಿ ಐದು ವಾಹನಗಳು ಸಚಿವ ಮಾಧುಸ್ವಾಮಿ ಅವರ ಕೋಟಾದಲ್ಲಿವೆ.  ಅವರು ಯಾರಿಗೆ ಹೇಳುತ್ತಾರೋ ಅವರಿಗೆ ತ್ರಿಚಕ್ರ ವಾಹನಗಳು ವಿತರಣೆಯಾಗಲಿವೆ ಎಂದೂ ಜಿಲ್ಲಾ ಮುಖ್ಯಾಧಿಕಾರಿ ಹೇಳಿದ್ದಾರೆ.

ಸಂಭಾಷಣೆಯಲ್ಲೇನಿದೆ?: ‘ವೆರಿಫಿಕೇಷನ್ ಆದೋರಿಗೆಲ್ಲಾ ಆಗಿಲ್ಲ ಅಣ್ಣಾ. ವೆರಿಫಿಕೇಷನ್ ಆಗಿ ಕಮಿಟಿಯಲ್ಲಿ  ಸೆಲೆಕ್ಟ್ ಆಗಿರೋರಿಗೆ ಆಗಿದೆ. 6 ಗಾಡಿ ಕೊಟ್ಟಿದಾರೆ. ನೀವ್ ಒಂದ್ ಕೆಲ್ಸ ಮಾಡಿ, ಮಾಧುಸ್ವಾಮಿ ಹತ್ರ 5 ಗಾಡಿ ಇದೆ. ಅವರು ಯಾರಿಗೆ ಹೇಳ್ತಾರೋ ಅವ್ರ ತಗೋಬೋದು. ಅವರತ್ರ 5 ಗಾಡಿ ಇದೆ. ದುಡ್ಡು ಕಾಸು ಕೇಳ್ತಾರೋ ಏನೋ, ಅವರ ಪಿ.ಎ.ವಿಶ್ವನಾಥ್  ಹತ್ರ ಕೊಟ್ಟು ಮಾಡಿಸ್ಕೋಳ್ರಿ ಅಣ್ಣ. ಅವರು ಯಾರಿಗೆ ಲೆಟ್ರು ಕೊಡ್ತಾರೋ ಅವರಿಗೆ ಕೊಡ್ತೀವಿ.  ಮಾಧುಸ್ವಾಮಿ ಹತ್ರ ಇಸ್ಕೋಳ್ರಿ, ಅಲ್ಲಿ 5 ಗಾಡಿ ಐತಲ್ರಿ, ನಿಮ್ದು ವೆರಿಫಿಕೇಷನ್ ಆಗೈತಿ ಅಂತ ಹೇಳಿ. ಮಾಧುಸ್ವಾಮಿ ಅವರ ಪಿಎ ಒಪ್ಕೊಂಡ್ರೇ ಯಾರಿಗ್ ಬೇಕಾದ್ರೆ ಕೊಡ್ತಾರೆ. ಇಲ್ಲಿರೋ ಪಟ್ಟಿ ಪ್ರಕಾರ ಅವ್ರ ಕೊಡೋಲ್ಲ. ನೀವ್ ಸುಮ್ನೆ ಹೋಗಿ ವಿಚಾರಿಸ್ರಿ....ಅಲ್ಲೇ ವಿಚಾರ್ಸಿ ಅಣ್ಣಾ...’ಎಂದು ಫಲಾನುಭವಿಯೊಬ್ಬರಿಗೆ ಜಿಲ್ಲಾ ಮುಖ್ಯಾಧಿಕಾರಿ ಸಲಹೆ ನೀಡಿದ್ದಾರೆ.

ಅಂಗವಿಕಲರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ನೀಡಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಕರೆಯಲಾಗಿತ್ತು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನಾಂಕವಾಗಿದೆ. ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದರೂ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡುತ್ತಿಲ್ಲ. ಹೀಗಾಗಿ ವಾಹನಗಳು ಇಲಾಖೆಯ ಆವರಣದಲ್ಲಿಯೇ ತುಕ್ಕು ಹಿಡಿಯುತ್ತಿವೆ ಎಂದು ತಿಳಿದು ಬಂದಿದೆ.

‘ಸರಕಾರ ನಡೀತಾ ಇಲ್ಲ. ಇಲ್ಲಿ, ಮ್ಯಾನೇಜ್ ಮಾಡ್ತಾ ಇದ್ದೀವಿ ಅಷ್ಟೇ. ತಳ್ಳಿದರೆ ಸಾಕಷ್ಟೆ. ಎಂಟು ತಿಂಗಳಷ್ಟೆ ಅಂತ ತಳ್ತಾ ಇದೀವಿ ಕಣಪ್ಪಾ’ ಎಂದು ಚನ್ನಪಟ್ಟಣದ ವ್ಯಕ್ತಿಯೊಬ್ಬರ ಜತೆ ಮಾತನಾಡುವ ಸಮಯದಲ್ಲಿ ಹೇಳಿರುವ ಆಡಿಯೊ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು. ಈ ಮಾತುಕತೆಯನ್ನು ಸಚಿವ ಮಾಧುಸ್ವಾಮಿ ಅವರು ಒಪ್ಪಿಕೊಂಡಿದ್ದರು.

‘ಎಲ್ಲ ಅಶಕ್ತರು, ಯಾರೂ ಕೆಲಸ ಮಾಡುತ್ತಿಲ್ಲ ಅಂತ ಹೇಳಿಲ್ಲ. ಡಿಸಿಸಿ ಬ್ಯಾಂಕ್‌ನಲ್ಲಿ ಹೆಚ್ಚುವರಿಯಾಗಿ ಬಡ್ಡಿ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದು ನಿಜ. ಕರೆ ಮಾಡಿದ ವ್ಯಕ್ತಿ ಜತೆ ಮುಂದಕ್ಕೆ ಮಾತನಾಡುವ ಸಮಯದಲ್ಲಿ ಏನೋ ಹೇಳಿರಬಹುದು. ನೀವು ಸರಕಾರ ನಡೆಸುತ್ತಿಲ್ಲ ಅಂಥ ಅವನು ಕೇಳಿರಬಹುದು. ಆಗ ನಾನು ಆ ರೀತಿ ಹೇಳಿರಬಹುದು’ ಎಂದು ಸಮಜಾಯಿಷಿ ನೀಡಿದ್ದನ್ನು ಸ್ಮರಿಸಬಹುದು.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪ್ರಸ್ತಾಪಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್‌ಗಳ ಕುರಿತು ತನಿಖೆ ನಡೆಸಲು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು  ಈಗಾಗಲೇ  ಸಹಾಯಕ ರಿಜಿಸ್ಟ್ರಾರ್‌ಗೆ ಸೂಚಿಸಿದ್ದಾರೆ.

ಇದು ಸರಕಾರ ಅನುಷ್ಠಾನಗೊಳಿಸಿರುವ ಯೋಜನೆ. ಇದೇನು ಮಾಧುಸ್ವಾಮಿ ಅವರ ಸ್ವಂತ ಯೋಜನೆಯಲ್ಲ. ಇಲ್ಲಿ ಯಾರ ಕೋಟಾವೂ ಇರುವುದಿಲ್ಲ. ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿಲ್ಲ. ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಕ್ಷೇತ್ರದಲ್ಲಿಯೇ ಅಶಕ್ತರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಈ ಆಡಿಯೊ ಸಾಕ್ಷಿ. ಸದನದಲ್ಲಿ ತೋಳೇರಿಸಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕುರಿತು ಮಾತನಾಡುವ ಜೆ.ಸಿ. ಮಾಧುಸ್ವಾಮಿ ಅವರ ಕ್ಷೇತ್ರದಲ್ಲಿ ಅಶಕ್ತರನ್ನೂ ಬಿಡದೇ ಸುಲಿಗೆ ಮಾಡುತ್ತಿದ್ದಾರೆ. ಇದು ತಪ್ಪಬೇಕು ಮತ್ತು ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಬೇಕು. ಇಲ್ಲವಾದಲ್ಲಿ ಈ ಬಗ್ಗೆ ಸಚಿವರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕಾದೀತು.

-ಮಲ್ಲಿಕಾರ್ಜುನ ಭಟ್ಟರಹಳ್ಳಿ, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X