Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುಯುಸಿಎಂಎಸ್ ಜಾರಿಗೆ ಸಬೂಬು ಹೇಳುವ ವಿವಿ...

ಯುಯುಸಿಎಂಎಸ್ ಜಾರಿಗೆ ಸಬೂಬು ಹೇಳುವ ವಿವಿ ಕುಲಸಚಿವರ ವಿರುದ್ಧ ಕ್ರಮ: ಸಚಿವ ಡಾ. ಅಶ್ವತ್ಥ ನಾರಾಯಣ

ಅಸಡ್ಡೆ ತೋರುವ ಕುಲಸಚಿವರನ್ನು ತಕ್ಷಣ ವಿವಿ‌ಯಿಂದ ಬಿಡುಗಡೆಗೂ ಸಚಿವರ ಆದೇಶ

ವಾರ್ತಾಭಾರತಿವಾರ್ತಾಭಾರತಿ19 Aug 2022 10:11 AM IST
share
ಯುಯುಸಿಎಂಎಸ್ ಜಾರಿಗೆ ಸಬೂಬು ಹೇಳುವ ವಿವಿ ಕುಲಸಚಿವರ ವಿರುದ್ಧ ಕ್ರಮ: ಸಚಿವ ಡಾ. ಅಶ್ವತ್ಥ ನಾರಾಯಣ

ಬೆಂಗಳೂರು: ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆ Unified University and College Management System (UUCMS) ಜಾರಿಗೆ ಕ್ರಮ ತೆಗೆದುಕೊಂಡಿದ್ದು, ಸಬೂಬು ಹೇಳಿಕೊಂಡು ಅದರ ಜಾರಿಗೆ ಹಿಂದೇಟು ಹಾಕುವ ಕುಲಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ, ಅಂತಹವರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಎಚ್ಚರಿಸಿದ್ದಾರೆ.

ಗುರುವಾರ ಈ ಬಗ್ಗೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ವಿಕಾಸಸೌಧದಲ್ಲಿ ಸಭೆ ನಡೆಸಿದ ಅವರು ಕರ್ತವ್ಯದಲ್ಲಿ ವಿಫಲರಾಗಿರುವ ಕುಲ ಸಚಿವರ ಬಗ್ಗೆ ಕುಲಪತಿಗಳೇ ವರದಿ ನೀಡಬೇಕು‌ ಎನ್ನುವ ಸೂಚನೆಯನ್ನೂ ನೀಡಿದರು.

UUCMS ವ್ಯವಸ್ಥೆಯು ತಂತ್ರಜ್ಞಾನದ ವರದಾನವಾಗಿದೆ. ಕಡಿಮೆ ಸಿಬ್ಬಂದಿಯೊಂದಿಗೆ ಮತ್ತು ಖರ್ಚು ವೆಚ್ಚದಲ್ಲಿ ಹಿಡಿತ ಸಾಧಿಸಿ ವಿ.ವಿ.ಗಳನ್ನು ನಿರ್ವಹಿಸಲು ಇದು ಪರಿಣಾಮಕಾರಿ ವ್ಯವಸ್ಥೆಯಾಗಿದೆ. ಇವತ್ತಿನ‌ ಮಟ್ಟಿಗೆ ಇದು ಪರಿಹಾರ. ಆದ್ದರಿಂದ ಇದರ ಬಗ್ಗೆ ಯಾರೊಬ್ಬರೂ ಸಬೂಬಗಳನ್ನು ಹೇಳುವಂತಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಈ ವ್ಯವಸ್ಥೆಯ ಜಾರಿಯು ಕ್ರಾಂತಿಕಾರಕ ತೀರ್ಮಾನವಾಗಿದೆ. ಯಾವುದೇ ಒಂದು ವ್ಯವಸ್ಥೆ ಅಳವಡಿಸಿಕೊಳ್ಳಬೇಕೆಂದರೆ ಸ್ವಲ್ಪ ಸಮಯ ಬೇಕಾಗುತ್ತದೆ. ಆದ್ದರಿಂದ ಎಲ್ಲ ವಿ.ವಿ.ಗಳೂ UUCMS ಜಾರಿಗೆ ಬದ್ಧವಾಗಿ ಇರಬೇಕು ಎಂದು ಅವರು ಹೇಳಿದರು.

ಇದನ್ನು ಓದಿ : ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸಮಾಜದ ಪ್ರಗತಿಯ ಮೂಲ: ಸಚಿವ ಡಾ. ಅಶ್ವತ್ಥ ನಾರಾಯಣ

ಕೆಲವು ವಿ.ವಿ.ಗಳಲ್ಲಿ ಮಾತ್ರ ಸೆಮಿಸ್ಟರ್ ಪರೀಕ್ಷೆಗಳು ಮುಗಿದು ಫಲಿತಾಂಶ ಬಂದಿವೆ.‌ ಬಹುತೇಕ ವಿವಿಗಳಲ್ಲಿ ಪರೀಕ್ಷೆ ನಡೆಸಿದರೂ ಮೌಲ್ಯಮಾಪನ ಮಾಡಿಲ್ಲ, ಫಲಿತಾಂಶ ಕೂಡ ಪ್ರಕಟವಾಗಿಲ್ಲ. ಈ ಎಲ್ಲ ಪ್ರಕಿಯೆಗಳನ್ನು ಈ ತಿಂಗಳ ಒಳಗೆ ಮಾಡಬೇಕು ಎಂದರು.

UUCMS ಜಾರಿಯಲ್ಲಿ ಇರುವ ತೊಡಕುಗಳನ್ನು ತಿಳಿದುಕೊಳ್ಳಲು ಈಗಾಗಲೇ ನಿತ್ಯ ವಿಡಿಯೋ ಕಾನ್ಫರೆನ್ಸಿಂಗ್ ಮಾಡಲಾಗುತ್ತಿದೆ. ಯಾವುದೇ ಸಮಸ್ಯೆ ಇದ್ದರೂ ಗಮನಕ್ಕೆ ತರಬಹುದು. ಆದರೆ ಇದರಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಅವರು ತಿಳಿಸಿದರು.

ಕೆಲವು ವಿವಿಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಈ ತಂತ್ರಾಂಶದಲ್ಲಿ ಇನ್ನೂ ನಮೂದಿಸಿಯೇ ಇಲ್ಲ. ಈ ಲೋಪವನ್ನು ಆಗಸ್ಟ್ ತಿಂಗಳ ಒಳಗೆ ಸಂಪೂರ್ಣವಾಗಿ ಸರಿಪಡಿಸಿಕೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.

ಸಾಫ್ಟ್ ವೇರ್ ಸೇರಿದಂತೆ ಉಳಿದ ಕ್ಷೇತ್ರಗಳು ಅಗಾಧ ಪರಿವರ್ತನೆ ಕಂಡಿವೆ. ಶಿಕ್ಷಣ ಕ್ಷೇತ್ರವು ಕೂಡ ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಇಲ್ಲದಿದ್ದರೆ ಸರಕಾರವು ನೀಡುವ ಸಾವಿರಾರು ಕೋಟಿ ರೂಪಾಯಿಗಳು ವ್ಯರ್ಥವಾಗಿ ಹೋಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕೆಲವು ವಿವಿಗಳಲ್ಲಿ UUCMS ವ್ಯವಸ್ಥೆಯನ್ನು ಯಾಕೆ ಜಾರಿಗೆ ತಂದಿಲ್ಲ ಎನ್ನುವ ಬಗ್ಗೆ ಸಮರ್ಪಕ ಕಾರಣ ನೀಡಬೇಕು. ಇಲ್ಲದಿದ್ದರೆ ತಾವು ತೀಕ್ಷ್ಣ ಕ್ರಮ ಜರುಗಿಸುವುದು ಖಂಡಿತ ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X