ಚಿಕ್ಕಮಗಳೂರು: ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.
ವಾರ್ತಾಭಾರತಿಯ ನ್ಯೂಸ್ ಅಪ್ಡೇಟ್ಸ್ ನಿಮ್ಮ ವಾಟ್ಸ್ ಆಪ್ ಗೆ ತಲುಪಬೇಕೇ ? ಈ ಲಿಂಕ್ https://bit.ly/3Cd3adz ಕ್ಲಿಕ್ ಮಾಡಿ ನಮ್ಮ ಗ್ರೂಪ್ Join ಆಗಿ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶೃಂಗೇರಿ ರಸ್ತೆಯಲ್ಲಿ ಸಾವರ್ಕರ್ ಬಾವಚಿತ್ರ ಹಾಗು ಕಪ್ಪು ಬಾವುಟ ಹಿಡಿದು ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕುವ ಯತ್ನ ನಡೆದಿದ್ದು, ಈ ಸಂದರ್ಭ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದರು.
ಬಿಜೆಪಿ ಕಾರ್ಯಕರ್ತರು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೊ ಹಿಡಿದು ಘೊಷಣೆ ಕೂಗಿ ಪ್ರತಿಭಟನೆ ನಡೆಸಿದರು.
Next Story





