ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ : ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.
ಸಾರ್ವಜನಿಕರಿಗೆ ಅನುಕೂಲ ವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಆ.೨೨ರಂದು ಬೈಂದೂರು ಪ್ರವಾಸಿ ಮಂದಿರ, ಆ.೨೩ರಂದು ಕುಂದಾಪುರ ಪ್ರವಾಸಿ ಮಂದಿರ, ೨೪ರಂದು ಹೆಬ್ರಿ ಪ್ರವಾಸಿ ಮಂದಿರ, ೨೫ರಂದು ಕಾರ್ಕಳ ಪ್ರವಾಸಿ ಮಂದಿರ, ಆ.೨೬ರಂದು ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಕಚೇರಿ ಆವರಣ ಹಾಗೂ ಆ.೨೯ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ ೧೧ರಿಂದ ಅಪರಾಹ್ನ ೧:೦೦ ರವರೆಗೆ ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: ೦೮೨೦-೨೯೫೮೮೮೧ ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ:೦೮೨೦-೨೫೩೬೬೬೧ನ್ನು ಸಂಪರ್ಕಿಸ ಬಹುದು ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.