Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾವರ್ಕರ್ ಭಾವಚಿತ್ರ ಅಳವಡಿಕೆ ಇನ್ನಷ್ಟು...

ಸಾವರ್ಕರ್ ಭಾವಚಿತ್ರ ಅಳವಡಿಕೆ ಇನ್ನಷ್ಟು ಜಾಸ್ತಿಯಾಗಲಿದೆ: ಸಚಿವ ಸುನೀಲ್ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ19 Aug 2022 7:57 PM IST
share
ಸಾವರ್ಕರ್ ಭಾವಚಿತ್ರ ಅಳವಡಿಕೆ ಇನ್ನಷ್ಟು ಜಾಸ್ತಿಯಾಗಲಿದೆ: ಸಚಿವ ಸುನೀಲ್ ಕುಮಾರ್‌

ಉಡುಪಿ: ರಾಜ್ಯಾದ್ಯಂತ ಸಾವರ್ಕರ್ ಭಾವಚಿತ್ರ ಅಳವಡಿಸುವ ವಿದ್ಯ ಮಾನಗಳು ಇನ್ನಷ್ಟು ಜಾಸ್ತಿ ಆಗುತ್ತದೆ. ಸಾವರ್ಕರ್ ಈ ದೇಶದ ರಾಷ್ಟ್ರೀಯತೆಯ ಪ್ರತೀಕ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ, ಮೆರವಣಿಗೆಗಳು, ಕಾರ್ಯಕ್ರಮಗಳು, ಬ್ಯಾನರ್‌ಗಳು, ಪುತ್ಥಳಿಗಳು ಮುಂದಿನ ದಿನಗಳಲ್ಲಿ ವ್ಯಾಪಕವಾಗಲಿದೆ ಎಂದು ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮಣಿಪಾಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮೊಟ್ಟೆ ಎಸೆದು ಪ್ರತಿಭಟಿಸಲು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ. ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಈ ರೀತಿ ಪ್ರತಿಭಟನೆ ಆಗುತ್ತದೆ. ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಅವಹೇಳನ ಸಹಿಸಿಕೊಳ್ಳಲು ಯುವ ಸಮುದಾಯವೂ ಸಿದ್ಧವಿಲ್ಲ ಎಂದರು.

ಸಿದ್ದರಾಮಯ್ಯಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗುವುದಿಲ್ಲ. ಸಾವರ್ಕರ್ ಫೋಟೋ ಕಂಡರೆ ಆಗಲ್ಲ. ತನ್ನ ನಡವಳಿಕೆ, ಹೇಳಿಕೆ, ಆಡಳಿತದಲ್ಲಿ ಪ್ರತ್ಯೇಕತೆಯ ಭಾವನೆ ತೋರಿಸುತ್ತಾರೆ. ಇದನ್ನು ಕರ್ನಾಟಕದ ಜನ ಸಹಿಸುವು ದಿಲ್ಲ ಮತ್ತು ಪ್ರತಿಭಟಿಸುತ್ತಿದ್ದಾರೆ. ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಏನು ಬೇಕಾದರೂ ಹೇಳಿಕೆ ನೀಡಿದರೆ ಜೀರ್ಣ ಮಾಡಿಕೊಳ್ಳುತ್ತೇನೆ ಎಂಬ ಕಾಲ ಹೊರಟು ಹೋಗಿದೆಂದು ತಿಳಿಸಿದರು.

ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಅಂದರೆ ಇತಿಹಾಸದ ಬಗ್ಗೆ ಅರ್ಧಂಬದ ತಿಳಿದುಕೊಂಡಿದ್ದಾರೆ ಎಂದರ್ಥ. ಸಾವರ್ಕರ್ ಅಂತಸತ್ವ ತಿಳಿದ ವರು ಯಾರು ಅವರನ್ನು ಟೀಕಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು ಅಂಡಮಾನಿನ ಸೆಲ್ಯೂಲರ್ ಜೈಲಿಗೆ ಹೋಗಿ ನೋಡಿ ಬರಲಿ. ಸಮಾಜವಾದಿ ಎಂದು ಹೇಳಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟುಹಬ್ಬ ಆಚರಿಸುವ ಇವರು, ಸಾವರ್ಕರ್ ಇದ್ದ ಜೈಲನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ ಎಂದು ಅವರು ಸವಾಲು ಹಾಕಿದರು.

‘ನಾವು ಹಿಂಸೆಯನ್ನು ಯಾವತ್ತೂ ಒಪ್ಪಿಲ್ಲ’

ಆರ್‌ಎಸ್‌ಎಸ್‌ನಿಂದ ಸಿದ್ದರಾಮಯ್ಯಗೆ ಜೀವ ಬೆದರಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಸುನೀಲ್ ಕುಮಾರ್, ನಮಗೆ ಹಿಂಸೆಯ ಮೇಲೆ ಯಾವತ್ತು ನಂಬಿಕೆ ಇಲ್ಲ. ನಾವು ಹಿಂಸೆಯನ್ನು ಯಾವತ್ತೂ ಒಪ್ಪಿಲ್ಲ ಎಂದು ತಿಳಿಸಿದರು.

ಸರಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಸುನೀಲ್ ಕುಮಾರ್, ದೇಶದ ಸಂಪ್ರಾದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ. ಅನಗತ್ಯವಾಗಿ ವಿವಾದ ಮಾಡಬೇಡಿ. ಸರಕಾರಿ ಶಾಲೆಯ ಆಟದ ಮೈದಾನಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತವೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರೆ ನಮ್ಮ ಸರಕಾರ ಸಹಿಸಿಕೊಳ್ಳುವುದಿಲ್ಲ. ನಮಾಝ್‌ಗೆ ಶಾಲೆ ಆವರಣದಲ್ಲಿ ಅವಕಾಶ ಕೊಡುವುದಿಲ್ಲ ಎಂದು ಸರಕಾರ ಸ್ಪಷ್ಟವಾಗಿ ಹೇಳಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X