Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನನ್ನಷ್ಟೇ ಹಕ್ಕುಗಳು ನಿಮಗೂ ಇವೆ:...

ನನ್ನಷ್ಟೇ ಹಕ್ಕುಗಳು ನಿಮಗೂ ಇವೆ: ಕೃಷ್ಣಜನ್ಮಾಷ್ಟಮಿ ಸಂದರ್ಭದಲ್ಲಿ ಹಿಂದೂಗಳೊಂದಿಗೆ ಬಾಂಗ್ಲಾ ಪ್ರಧಾನಿ ಹಸೀನಾ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ19 Aug 2022 10:10 PM IST
share
ನನ್ನಷ್ಟೇ ಹಕ್ಕುಗಳು ನಿಮಗೂ ಇವೆ: ಕೃಷ್ಣಜನ್ಮಾಷ್ಟಮಿ ಸಂದರ್ಭದಲ್ಲಿ ಹಿಂದೂಗಳೊಂದಿಗೆ ಬಾಂಗ್ಲಾ ಪ್ರಧಾನಿ ಹಸೀನಾ ಮಾತುಕತೆ

ಢಾಕಾ (ಬಾಂಗ್ಲಾದೇಶ), ಆ. 19: ಬಾಂಗ್ಲಾದೇಶದಲ್ಲಿರುವ ಹಿಂದೂ ಸಮುದಾಯಕ್ಕೆ ನಾನು ಹೊಂದಿರುವಷ್ಟೇ ಹಕ್ಕುಗಳಿವೆ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ದುರ್ಗಾ ಪೂಜೆ ಹಬ್ಬದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿರುವ ಮಂಟಪಗಳಿಗಿಂತಲೂ ಹೆಚ್ಚಿನ ಸಂಖ್ಯೆಯ ಮಂಟಪಗಳು ಢಾಕಾದಲ್ಲಿರುತ್ತವೆ ಎಂದು ಅವರು ಬಣ್ಣಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಗುರುವಾರ ಶೇಖ್ ಹಸೀನಾ ಹಿಂದೂ ಸಮುದಾಯದ ನಾಯಕರೊಂದಿಗೆ ಸಂವಹನ ನಡೆಸಿದರು. ನೀವು ಅಲ್ಪಸಂಖ್ಯಾತರು ಎಂಬುದಾಗಿ ಭಾವಿಸುವ ಅಗತ್ಯವಿಲ್ಲ ಎಂಬುದಾಗಿ ಅವರು ಇತರ ಧರ್ಮಿಯರಿಗೆ ಹೇಳಿದರು. ಧರ್ಮ ಯಾವುದೇ ಇದ್ದರೂ ಬಾಂಗ್ಲಾದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ ಎಂದರು.

‘‘ಎಲ್ಲ ಧರ್ಮಗಳ ಜನರು ಸಮಾನ ಹಕ್ಕುಗಳೊಂದಿಗೆ ಬದುಕಬೇಕು ಎಂದು ನಾವು ಬಯಸುತ್ತೇವೆ. ನೀವು ಈ ದೇಶದ ಜನರು, ನಿಮಗೆ ಇಲ್ಲಿ ಸಮಾನ ಹಕ್ಕುಗಳಿವೆ. ನನಗೆ ಯಾವ ಹಕ್ಕುಗಳಿವೆಯೋ ಆ ಎಲ್ಲಾ ಹಕ್ಕುಗಳು ನಿಮಗೂ ಇವೆ’’ ಎಂದು ಶೇಖ್ ಹಸೀನಾ ಹೇಳಿರುವುದಾಗಿ ‘ಢಾಕಾ ಟ್ರಿಬ್ಯೂನ್’ ಪತ್ರಿಕೆ ವರದಿ ಮಾಡಿದೆ.

‘‘ನಾವು ಈ ದೇಶದ ನಾಗರಿಕರು ಎಂಬುದಾಗಿ ನೀವು ಯಾವತ್ತೂ ತಿಳಿಯಬೇಕು. ನಿಮಗೆ ಸಮಾನ ಹಕ್ಕುಗಳಿವೆ’’ ಎಂದು ಬಾಂಗ್ಲಾದೇಶದ ಪ್ರಧಾನಿ ಹೇಳಿದರು. ಢಾಕಾದಲ್ಲಿರುವ ಢಾಕೇಶ್ವರಿ ಮಂದಿರ ಮತ್ತು ಛಟ್ಟೋಗ್ರಾಮ್ನಲ್ಲಿರುವ ಜೆ.ಎಮ್. ಸೇನ್ ಹಾಲ್ನಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಶೇಖ್ ಹಸೀನಾ ಗೊನೊ ಭವನ್ನಲ್ಲಿರುವ ತನ್ನ ಅಧಿಕೃತ ನಿವಾಸದಿಂದ ಆನ್ಲೈನ್ ಮೂಲಕ ಭಾಗವಹಿಸಿದರು.

‘‘ನಿಮ್ಮನ್ನು ನೀವು ಕೀಳಾಗಿ ಪರಿಗಣಿಸಬೇಡಿ. ನೀವು ಈ ದೇಶದಲ್ಲಿ ಹುಟ್ಟಿದ್ದೀರಿ. ನೀವು ಈ ದೇಶದ ನಾಗರಿಕರು’’ ಎಂದರು.

‘‘ಯಾವಾಗಲಾದರೂ ಅಹಿತಕರ ಘಟನೆಗಳು ನಡೆದರೆ, ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯಕ್ಕೆ ಯಾವುದೇ ಹಕ್ಕುಗಳಿಲ್ಲ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಅದು ದುರದೃಷ್ಟಕರ. ಅಂಥ ಘಟನೆಗಳಿಗೆ ಬೇರೆಯದೇ ಬಣ್ಣಗಳನ್ನು ನೀಡಲಾಗುತ್ತಿದೆ. ಅಂಥ ಘಟನೆಗಳ ಬಳಿಕ ಸರಕಾರ ತೆಗೆದುಕೊಳ್ಳುವ ಕ್ರಮಗಳು ಸುದ್ದಿಯಾಗುವುದಿಲ್ಲ’’ ಎಂದು ಶೇಖ್ ಹಸೀನಾ ಹೇಳಿರುವುದಾಗಿ ‘ಪ್ರೊಥಮ್ ಆಲೊ’ ಪತ್ರಿಕೆ ವರದಿ ಮಾಡಿದೆ.

ಹಿಂದೂ ಸಮುದಾಯವು ಬಾಂಗ್ಲಾದೇಶದ ಎರಡನೇ ಅತಿ ದೊಡ್ಡ ಧಾರ್ಮಿಕ ಸಮುದಾಯವಾಗಿದೆ. 2022ರ ಜನಗಣತಿಯ ಪ್ರಕಾರ, ದೇಶದ 16.15 ಕೋಟಿ ಜನಸಂಖ್ಯೆಯ ಸುಮಾರು 7.95% ಹಿಂದೂಗಳಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X