Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀಸ್ತಾ, ಶ್ರೀಕುಮಾರ್ ವಿರುದ್ಧದ ಪ್ರಕರಣ...

ತೀಸ್ತಾ, ಶ್ರೀಕುಮಾರ್ ವಿರುದ್ಧದ ಪ್ರಕರಣ ವಜಾಗೊಳಿಸುವಂತೆ ಸುಪ್ರೀಂಕೋರ್ಟಿಗೆ ಅಂತಾರಾಷ್ಟ್ರೀಯ ವಿದ್ವಾಂಸರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Aug 2022 3:57 PM IST
share
ತೀಸ್ತಾ, ಶ್ರೀಕುಮಾರ್ ವಿರುದ್ಧದ ಪ್ರಕರಣ ವಜಾಗೊಳಿಸುವಂತೆ ಸುಪ್ರೀಂಕೋರ್ಟಿಗೆ ಅಂತಾರಾಷ್ಟ್ರೀಯ ವಿದ್ವಾಂಸರ ಆಗ್ರಹ

 ಹೊಸದಿಲ್ಲಿ: ಝಾಕಿಯಾ ಜಾಫ್ರಿ(Zakia Zafri) ಪ್ರಕರಣದ ತೀರ್ಪು ಹೊರಬಿದ್ದ ಬೆನ್ನಲ್ಲೇ ಅಹ-ಅರ್ಜಿದಾರೆಯಾಗಿದ್ದ ಸಾಮಾಜಿಕ ಹೊರಾಟಗಾರ್ತಿ ತೀಸ್ತಾ ಸೇಟಲ್ವಾಡ್ (Teestha Setalvad) ಹಾಗೂ ಮಾಜಿ ಗುಜರಾತ್ ಐಪಿಎಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್(RB Srikumar) ಅವರನ್ನು ಬಂಧಿಸಿದ ಕ್ರಮವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಬೇಕೆಂದು ಹನ್ನೊಂದು ಮಂದಿ ಅಂತಾರಾಷ್ಟ್ರೀಯ ವಿದ್ವಾಂಸರು ಶುಕ್ರವಾರ  ಸುಪ್ರೀಂ ಕೋರ್ಟಿಗೆ ಆಗ್ರಹಿಸಿದ್ದಾರಲ್ಲದೆ ಇಬ್ಬರ ವಿರುದ್ಧದ ಪ್ರಕರಣವನ್ನೂ ವಜಾಗೊಳಿಸಬೇಕೆಂದು ಕೋರಿದ್ದಾರೆ.

ಗುಜರಾತ್ ಗಲಭೆಗಳ ಸಂದರ್ಭ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಪ್ರಶ್ನಿಸಿ ಗುಲ್ಬರ್ಗ್ ಹತ್ಯಾಕಾಂಡದಲ್ಲಿ ಮೃತರಾಗಿದ್ದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಹಾಗೂ ಸೇಟಲ್ವಾಡ್ ಅವರ ಎನ್‍ಜಿಒ ಸಿಟಿಜನ್ಸ್ ಫಾರ್ ಪೀಸ್ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಆದರೆ ಈ ಅರ್ಜಿಯನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ತೀಸ್ತಾ ಮತ್ತು ಶ್ರೀಕುಮಾರ್ ಬಂಧನವಾಗಿತ್ತು.

"ಜಾಫ್ರಿ ಮತ್ತು ಸೇಟಲ್ವಾಡ್ ಇಬ್ಬರೂ ಸಿಟ್ ವರದಿಯನ್ನು ಪ್ರಶ್ನಿಸಿ ಸ್ವತಂತ್ರ ತನಿಖೆಗೆ ಆಗ್ರಹಿಸಿದ್ದರಿಂದ ಅವರ ಅರ್ಜೀಯನ್ನು ವಜಾಗೊಳಿಸಿರುವುದು ಅನ್ಯಾಯದ ಕ್ರಮ,'' ಎಂದು ಈ ವಿದ್ವಾಂಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರಲ್ಲದೆ ಅರ್ಜಿದಾರರು ``ದುರುದ್ದೇಶ'' ಹೊಂದಿದ್ದಾರೆಂಬ ಅರ್ಥದ ಸುಪ್ರೀಂ ಕೋರ್ಟ್ ಹೇಳಿಕೆಯೂ ಅವರ ಬಂಧನಕ್ಕೆ ಕಾರಣವಾಗಿದೆ ಎಂದು ಹೇಳಿದೆ.

"ನ್ಯಾಯಕ್ಕಾಗಿ ಸೂಕ್ತ ಪ್ರಕ್ರಿಯೆಯ ಮೂಲಕ ನಡೆದ ದೀರ್ಘ ಹೋರಾಟವನ್ನು `ವಿಚಾರವನ್ನು ಜೀವಂತವಾಗಿಡಲು ಯತ್ನʼ ಎಂಬ ಹೇಳಿಕೆ ನಿಂದನಾತ್ಮಕವಾಗಿರುವ ಹೊರತಾಗಿ ಜನರಿಗೆ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಕದ ತಟ್ಟುವುದರಿಂದ ಹಿಂದೇಟು ಹಾಕುವಂತೆ ಮಾಡುತ್ತದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾನು ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಅಭಿಪ್ರಾಯವನ್ನೂ ಸುಪ್ರೀಂ ಕೋರ್ಟ್ ಪಡೆಯದೇ ಇರುವುದಕ್ಕೆ ವಿದ್ವಾಂಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಗೆ ಸಹಿ ಹಾಕಿದವರಲ್ಲಿ ಭಿಕು ಪಾರೇಖ್, ನೋಮ್ ಚೋಮಸ್ಕಿ, ಅರ್ಜುನ್ ಅಪ್ಪಾದುರೈ, ವೆಂಡಿ ಬ್ರೌನ್, ಶೆಲ್ಡನ್ ಪೊಲ್ಲೊಕ್, ಕ್ಯಾರೊಲ್ ರೊವಾನೆ, ಚಾಲ್ರ್ಸ್ ಟೇಲರ್, ಮಾರ್ಥ ನುಸ್ಸಬೌಮ್, ರಾಬರ್ಟ್ ಪೊಲ್ಲಿನ್, ಅಕೀಲ್ ಬಿಲ್ಗ್ರಾಮಿ ಮತ್ತು ಜೆರಾಲ್ಡ್ ಎಪ್‍ಸ್ಟೀನ್ ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X