Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಬಿಜೆಪಿಯವರು ನೀಡುವ ಉಚಿತ ವಸ್ತುಗಳು...

ʼಬಿಜೆಪಿಯವರು ನೀಡುವ ಉಚಿತ ವಸ್ತುಗಳು ದೇವರ ಕೈಯಿಂದ ಬರುತ್ತಿದೆಯೇ?ʼ: ತಮಿಳುನಾಡು ವಿತ್ತ ಸಚಿವ ತ್ಯಾಗರಾಜನ್

ವಾರ್ತಾಭಾರತಿವಾರ್ತಾಭಾರತಿ20 Aug 2022 6:29 PM IST
share
ʼಬಿಜೆಪಿಯವರು ನೀಡುವ ಉಚಿತ ವಸ್ತುಗಳು ದೇವರ ಕೈಯಿಂದ ಬರುತ್ತಿದೆಯೇ?ʼ: ತಮಿಳುನಾಡು ವಿತ್ತ ಸಚಿವ ತ್ಯಾಗರಾಜನ್

ಚೆನ್ನೈ: ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದ(Election) ವೇಳೆ ಭರವಸೆ ನೀಡುವ ಉಚಿತ ವಸ್ತುಗಳು(Freebies) (ಫ್ರೀಬೀಸ್) ಕುರಿತ ಪ್ರಕರಣ ಸುಪ್ರೀಂ ಕೋರ್ಟ್ ಮುಂದಿರುವ ನಡುವೆ ಈ ವಿಚಾರ ಸಾಕಷ್ಟು ಚರ್ಚೆಗೀಡಾಗುತ್ತಿದೆ. ಇದೀಗ ತಮಿಳುನಾಡು ವಿತ್ತ ಸಚಿವ ಡಾ ಪಿ ತ್ಯಾಗರಾಜನ್(P. Thiagarajan) ಈ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿರುವ ಉಚಿತ ಸವಲತ್ತುಗಳು "ದೇವರ ಕೈಯಿಂದ ಕೆಳಗಿಳಿದು ಬಂದಿವೆಯೇ" ಎಂದು ಪ್ರಶ್ನಿಸಿದ್ದಾರೆ.

"ಫ್ರೀಬೀ ಎಂಬುದರ ಬಗ್ಗೆ ಸರಿಯಾದ ವ್ಯಾಖ್ಯಾನವಿಲ್ಲ. ಒಬ್ಬ ವ್ಯಕ್ತಿಯ ಫ್ರೀಬೀ ಇನ್ನೊಬ್ಬ ವ್ಯಕ್ತಿಯ ಅಗತ್ಯ ಖರ್ಚು ಆಗಿದೆ" ಎಂದು ಹೇಳಿದರು.

ಬಡವರಿಗೆ ಉಚಿತ ರೇಷನ್(Free Ration) ನೀಡುವುದು ಹಾಗೂ ತಮಿಳುನಾಡಿನಲ್ಲಿ ಸಾಮಾನ್ಯ ಪದ್ಧತಿಯಾಗಿರುವ ಟಿವಿಯಂತಹ ಉಚಿತ ವಸ್ತುಗಳನ್ನು ನೀಡುವುದನ್ನು ಒಂದೇ ರೀತಿ ಪರಿಗಣಿಸಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು "ಇವುಗಳ ನಡುವಿನ ವ್ಯತ್ಯಾಸವನ್ನು ನಿರ್ಧರಿಸಲು ಸುಪ್ರೀಂ ಕೊರ್ಟ್, ಟಿವಿ ನಿರೂಪಕರು ಅಥವಾ ವಿತ್ತ ಆಯೋಗ ಸರಿಯಾದ ಪ್ರಾಧಿಕಾರವಲ್ಲ ಎಂಬುದು ನನ್ನ ಭಾವನೆ. ತಮಗೆ ಅದು ಇಷ್ಟವೇ ಅಥವಾ ಇಷ್ಟವಿಲ್ಲವೇ ಎಂಬುದನ್ನು ಮತದಾರರು ನಿರ್ಧರಿಸುತ್ತಾರೆ. ಇದರಲ್ಲಿ ನ್ಯಾಯಾಲಯದ ಪಾತ್ರವೇನೆಂದು ನನಗೆ ಅರ್ಥವಾಗುತ್ತಿಲ್ಲ" ಎಂದರು.

ಪ್ರಧಾನಿ ಇತ್ತೀಚೆಗೆ ಈ ಉಚಿತ ವಸ್ತುಗಳ ನೀಡಿಕೆಯನ್ನು ರೇವ್ಡಿ ಸಂಸ್ಕೃತಿ(Rewdi Culture) ಎಂದು ಟೀಕಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು "ಉತ್ತರ ಪ್ರದೇಶದ ಬಿಜೆಪಿ ಸರಕಾರ ಇತ್ತೀಚೆಗೆ ಉಚಿತ ಬಸ್ ಸವಾರಿಗಳನ್ನು ಘೋಷಿಸಿದೆ. ಈ ಕುರಿತು ಪ್ರಧಾನಿಯ ಅಭಿಪ್ರಾಯ ಸಕಾರಾತ್ಮಕ ಅಥವಾ ನಕಾರಾತ್ಮಕವೇ? ತಮಿಳುನಾಡಿನಲ್ಲಿ ನಮ್ಮ ಹಿಂದಿನ ಸರಕಾರ ನಡೆಸಿದ್ದ ಎಐಎಡಿಎಂಕೆ( ಬಿಜೆಪಿ ಮಿತ್ರ ಪಕ್ಷ)  ಸ್ಕೂಟರ್‍ಗಳನ್ನು ಅರ್ಧ ಬೆಲೆಗೆ ಒಂದು ಲಕ್ಷ ಮಹಿಳೆಯರಿಗೆ ನೀಡಲು ನಿರ್ಧರಿಸಿತ್ತು ಹಾಗೂ ಆ ಯೋಜನೆಯನ್ನು ಉದ್ಘಾಟಿಸಲು ಪ್ರಧಾನಿ ಬಂದಿದ್ದರು.  ಆಗ ಅವರ ಅಭಿಪ್ರಾಯವೇನಾಗಿತ್ತು. ತನಗೊಂದು ಕಾನೂನು ಬೇರೆಯವರಿಗೊಂದು ಕಾನೂನು ಸರಿಯಲ್ಲ. ಅವರು ನೀಡುತ್ತಾರೆ ಹಾಗೂ ಯಾರೂ ಅದನ್ನು ಪ್ರಶ್ನಿಸುವಂತಿಲ್ಲ, ಏಕೆಂದರೆ ಅದು ನೇರವಾಗಿ ದೇವರ ಕೈಯ್ಯಿಂದ ಬರುತ್ತಿದೆ. ಆದರೆ ಬೇರೆಯವರು ಕೊಟ್ಟರೆ, ಸರಿಯಲ್ಲ ಅದು ಕೆಟ್ಟ ಫ್ರೀಬೀ ಅನ್ನುತ್ತಾರೆ,'' ಎಂದು ತ್ಯಾಗರಾಜನ್ ಹೇಳಿದರು.

ಮೊನ್ನೆಯಷ್ಟೇ ಚಾನೆಲ್‌ ಒಂದರಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿ ನಿರೂಪಕರೋರ್ವರನ್ನು ತರಾಟೆಗೆ ತೆಗೆದುಕೊಂಡಿದ್ದ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿತ್ತು.

The planned appearance at @ndtv an hour before the unplanned one @IndiaToday

The reason I ask about qualifications for giving TN advice is, @mkstalin already has 5 Economic Advisors w/ Ph.D's including former Union Fin Sec, 2 CEA's, & RBI Governor & 1 who received a Nobel prize pic.twitter.com/qDQh9j2ATj

— Dr P Thiaga Rajan (PTR) (@ptrmadurai) August 20, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X