Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರವರ ರಾವ್‌ಗೆ ಜಾಮೀನು ಬಿಡುಗಡೆಗೆ 14...

ವರವರ ರಾವ್‌ಗೆ ಜಾಮೀನು ಬಿಡುಗಡೆಗೆ 14 ಶರತ್ತುಗಳನ್ನು ವಿಧಿಸಿದ ಮುಂಬೈ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Aug 2022 11:42 PM IST
share
ವರವರ ರಾವ್‌ಗೆ ಜಾಮೀನು ಬಿಡುಗಡೆಗೆ 14 ಶರತ್ತುಗಳನ್ನು ವಿಧಿಸಿದ ಮುಂಬೈ ಕೋರ್ಟ್

ಹೊಸದಿಲ್ಲಿ,ಆ.26: ತನ್ನ ಅನುಮತಿಯಿಲ್ಲದೆ ನಗರದಿಂದ ಹೊರಹೋಗದಿರುವುದು ಸೇರಿದಂತೆ  14 ಶರತ್ತುಗಳನ್ನು  ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ, ಮಾನವಹಕ್ಕು ಹೋರಾಟಗಾರ ವರವರ ರಾವ್ ಅವರ ಜಾಮೀನು ಬಿಡುಗಡೆಗೆ ಮುಂಬೈನ ವಿಶೇಷ ನ್ಯಾಯಾಲಯವು ನಿಗದಿಪಡಿಸಿರುವುದಾಗಿ ಎಂದು ಲೈವ್ ಲಾ ವರದಿ ಮಾಡಿದೆ.

ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಜಾತಿ ಹಿಂಸಾಚಾರವನ್ನು ಭುಗಿಲೆಬ್ಬಿಸಲು ಸಂಚು ಹೂಡಿದ ಆರೋಪದಲ್ಲಿ ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ದೋಷಾರೋಪ ದಾಖಲಿಸಲ್ಪಟ್ಟ 16 ಮಂದಿ ಕಾರ್ಯಕರ್ತರಲ್ಲಿ ರಾವ್ ಕೂಡಾ ಒಬ್ಬರು.
ಶನಿವಾರ ವಿಶೇಷ ನ್ಯಾಯಾಧೀಶ ರಾಜೇಶ್ ಕ್ಷತ್ರಿಯ ಅವರು ರಾವ್‌ಗೆ ಜಾಮೀನು ಶರತ್ತುಗಳನು ಪ್ರಕಟಿಸಿದ್ದಾರೆ. ಮುಂಬೈ ನಗರದಿಂದ ಹೊರಹೋಗುವಾಗ ಅನುಮತಿಯನ್ನು ಪಡೆಯುವಂತೆ ಹಾಗೂ ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡಬಾರದೆಂಬ ಶರತ್ತುಗಳನ್ನು ಒಡ್ಡಲಾಗಿದೆ.
‌
ಅಲ್ಲದೆ ಪ್ರತಿ ಹದಿನೈದು ದಿನಕ್ಕೊಮ್ಮೆ  ವಾಟ್ಸ್‌ಅಪ್ ವಿಡಿಯೋ ಕರೆ ಮೂಲಕ ತನ್ನ ಹಾಜರಾತಿಯನ್ನು ನಮೂದಿಸುವಂತೆ ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ  ಪೊಲೀಸ್ ಠಾಣೆಯೆದುರು ಹಾಜರಾಗಬೇಕೆಂಬ ಶರತ್ತನ್ನು ಒಡ್ಡಲಾಗಿದೆಯೆಂದು ರಾವ್ ತಿಳಿಸಿದ್ದಾರೆ.

ಅಲ್ಲದೆ ಮನೆಯ ವಿಳಾಸ ಹಾಗೂ ತನ್ನ ಜೊತೆ ವಾಸವಾಗಿರುವ ವ್ಯಕ್ತಿಯ ಹಾಗೂ ಮೂವರು ಬಂಧುಗಳ ದೂರವಾಣಿ ಸಂಪರ್ಕ ಸಂಖ್ಯೆಗಳನ್ನು ಕೂಡಾ ಒದಗಿಸುವಂತೆ ಕೇಳಲಾಗಿದೆ.  ಹಾಜರಾತಿಯಿಂದ ವಿನಾಯಿತಿ  ದೊರೆಯದೆ ಇದ್ದಲ್ಲಿ ಅವರು ವಿಚಾರಣಾ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗುತ್ತಿರಬೇಕು ಮತ್ತು ಪ್ರಕರಣದ ಇತರ ಆರೋಪಿಗಳ ಜೊತೆ ಸಂವಹನವನ್ನು ಹೊಂದಿರಕೂಡದು ಎಂದು ಕೂಡಾ ಶರತ್ತಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ  ಇಂತಹದೇ ಚಟುವಟಿಕೆಗಳಲ್ಲಿ ತೊಡಗಿರುವ  ವ್ಯಕ್ತಿಯ ಜೊತೆ ಯಾವುದೇ ಸಂವಹನ ವಿಧಾನದ ಮೂಲಕ  ದೇಶೀಯ ಅಥವಾಅಂತಾರಾಷ್ಟ್ರೀಯ ಕರೆ ಮಾಡಬಾರದು. ವೈಯಕ್ತಿಕವಾಗಿ ಅಥವಾ ಇತರ ಯಾವುದೇ ವ್ಯಕ್ತಿಯ ಮೂಲಕ ಪ್ರಾಸಿಕ್ಯೂಶನ್ ಸಾಕ್ಷ್ಯಗಳನ್ನು ತಿರುಚಲು ಯತ್ನಿಸಬಾರದೆಂದು ಶರತ್ತಿನಲ್ಲಿ ತಿಳಿಸಲಾಗಿದೆ.

83 ವರ್ಷ ವಯಸ್ಸಿನ ವರವರ ರಾವ್ ಅವರನ್ನು 2018ರ ಆಗಸ್ಟ್ 28ರಂದು  ಹೈದರಾಬಾದ್‌ನಲ್ಲಿರುವ ಅವರ ನಿವಾಸದ ಬಳಿ ಬಂಧಿಸಲಾಯಿತು. ಆಗಸ್ಟ್ 10ರಂದು ಸುಪ್ರೀಂಕೋರ್ಟ್ ವೈದ್ಯಕೀಯ ಕಾರಣಗಳಿಗಾಗಿ ಅವರಿಗ ಜಾಮೀನು ಬಿಡುಗಡೆಗೊಳಿಸಿತ್ತು. ‘‘  ವೃದ್ದಾಪ್ಯ ಹಾಗೂ ಆರೋಗ್ಯ ಕ್ಷೀಣಿಸುತ್ತಿಉರವ’ ಹಿನ್ನೆಲೆಯಲ್ಲಿ ತನಗೆ ಜಾಮೀನು ಬಿಡುಗಡೆಯನ್ನು ಖಾಯಂಗೊಳಿಸುವಂತೆ ರಾವ್ ಅವರು ಮನವಿ  ಸಲ್ಲಿಸಿದ್ದರು.
ತಾನು ನರರೋಗ, ಸಂಭಾವ್ಯ ಹರ್ನಿಯಾದಿಂದಾಗಿ ಉದರಬೇನೆ ಹಾಗೂ ರೋಗಲಕ್ಷಣ ರಹಿತ ಪಾರ್ಕಿನ್‌ಸನ್ ಕಾಯಿಲೆಯಿಂದ ಬಳಲುತ್ತಿರುವುದಾಗಿ ರಾವ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X