Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪರಾಧಿಗಳು ಪೆರೋಲ್‍ನಲ್ಲಿ...

ಅಪರಾಧಿಗಳು ಪೆರೋಲ್‍ನಲ್ಲಿ ಬಿಡುಗಡೆಯಾಗಿದ್ದಾಗ ಸಾಕ್ಷಿಗಳಿಗೆ ಹಲವು ಬಾರಿ ಬೆದರಿಸಿದ್ದರೆಂಬ ಅಂಶ ಬಹಿರಂಗ

ಬಿಲ್ಕಿಸ್ ಬಾನು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ22 Aug 2022 2:40 PM IST
share
ಅಪರಾಧಿಗಳು ಪೆರೋಲ್‍ನಲ್ಲಿ ಬಿಡುಗಡೆಯಾಗಿದ್ದಾಗ ಸಾಕ್ಷಿಗಳಿಗೆ ಹಲವು ಬಾರಿ ಬೆದರಿಸಿದ್ದರೆಂಬ ಅಂಶ ಬಹಿರಂಗ

ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷದಲ್ಲಿ ಗುಜರಾತ್ ಸರಕಾರದ ಆದೇಶದಂತೆ ಬಿಡುಗಡೆಗೊಂಡಿರುವ ಬಿಲ್ಕಿಸ್ ಬಾನು(Bilkis Bano) ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳು ಈ ಹಿಂದೆ ಆಗಾಗ ಪೆರೋಲ್ ಮೇಲೆ ಬಿಡುಗಡೆಗೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ಅವರಲ್ಲಿ ಕನಿಷ್ಠ ನಾಲ್ಕು ಮಂದಿ ಈ ಪ್ರಕರಣದಲ್ಲಿ ದೂರು ದಾಖಲಿಸಿದ್ದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಅಪರಾಧಿಗಳು ಈ ಹಿಂದೆ ʼಗೃಹ ಪ್ರವೇಶ ಸಮಾರಂಭ,ʼ ʼಪುತ್ರನ ಮದುವೆʼ ಎಂದೆಲ್ಲಾ ಕಾರಣಗಳನ್ನು ನೀಡಿ ಪೆರೋಲ್‍ಗೆ(parole) ಮನವಿ ಸಲ್ಲಿಸುತ್ತಿದ್ದರು. ಇವರಿಗೆ ಒಂದು ತಿಂಗಳು ಅವಧಿ ತನಕ ಹಲವು ಬಾರಿ ಪೆರೋಲ್ ಅದಾಗಲೇ ಒದಗಿಸಲಾಗಿದ್ದ ಕಾರಣ ನೀಡಿ ನ್ಯಾಯಾಲಯಗಳು ಹಲವು ಬಾರಿ ಅವರ ಪೆರೋಲ್ ಮನವಿಯನ್ನು ತಿರಸ್ಕರಿಸಿದ್ದವು. ಆದರೆ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದ ಸಂದರ್ಭ ಅವರು ಕೆಲ ಸಾಕ್ಷ್ಯಗಳಿಗೆ ಬೆದರಿಕೆಯೊಡ್ಡಿದ್ದರು ಹಾಗೂ ಕೊಲೆ ಬೆದರಿಕೆಯನ್ನೂ ಹಾಕಿದ್ದರೆನ್ನಲಾಗಿದೆ.

ಗುಜರಾತ್‍ನಲ್ಲಿ 2002 ರಲ್ಲಿ ನಡೆದ ಗಲಭೆಗಳ ಸಂದರ್ಭ(Gujarat communal violence-2022) ನಡೆದ ಈ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಾಕ್ಷಿಗಳು ಸದಾ ಭಯದಿಂದಲೇ ಬದುಕುತ್ತಿದ್ದಾರೆ, ಎಂದು ಸಾಕ್ಷಿಗಳಲ್ಲೊಬ್ಬರಾಗಿರುವ ಅಬ್ದುಲ್ ರಝಾಖ್ ಮನ್ಸೂರಿ ಹೇಳುತ್ತಾರೆ. 2021 ರಲ್ಲಿ ಅವರು ಗುಜರಾತ್‍ನ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಅವರಿಗೆ ಪತ್ರ ಬರೆದು ಈ ಅಪರಾಧಿಗಳು ಪೆರೋಲ್ ಅವಧಿಯನ್ನು ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು, ತಮ್ಮ ಉದ್ಮಗಳನ್ನು ಮುಂದುವರಿಸಿಕೊಂಡು ಹೋಗಲು, ಬಂಗಲೆಗಳನ್ನು ನಿರ್ಮಿಸಲು ಮತ್ತು ಸಾಕ್ಷಿಗಳಿಗೆ ಬೆದರಿಸಲು ಬಳಸುತ್ತಿದ್ದರು ಎಂದು ಆರೋಪಿಸಿದ್ದರು.

ಮನ್ಸೂರಿ ಅವರು ಅಪರಾಧಿಗಳಲ್ಲೊಬ್ಬನಾದ ಸೈಲೇಶ್ ಚಿಮ್ಮನ್‍ಲಾಲ್ ಭಟ್ಟ್ ಎಂಬಾತನ ವಿರುದ್ಧ ದಹೋಡ್ ಪೊಲೀಸರಿಗೆ ದೂರು ದಾಖಲಿಸಿ ಆತ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಿದ್ದರು. ಈತ ಬಿಜೆಪಿ ಕಾರ್ಯಕ್ರಮವೊಂದರಲ್ಲೂ ಭಾಗವಹಿಸಿದ್ದನೆನ್ನಲಾಗಿದೆ.

ತನಗೆ ಈ ಹಿಂದೆ ಒದಗಿಸಲಾಗಿದ್ದ ಮೀಸಲು ಪೊಲೀಸ್ ಪಡೆ  ಭದ್ರತೆಯನ್ನೂ ವಾಪಸ್ ಪಡೆದಿರುವುದರಿಂದ ಭಯದಿಂದಲೇ ಬದುಕುವಂತಾಗಿದೆ ಎಂದು ಆತ ಹೇಳಿದ್ದಾರೆ.

ಆದರೆ ತಮಗೆ ಪತ್ರದ ಬಗ್ಗೆ ತಿಳಿದಿಲ್ಲ ಹಾಗೂ ಆರೋಪಿಗಳು ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಗ್ಗೆ ತಿಳಿದಿಲ್ಲ ಎಂದು ಗೃಹ ಸಚಿವರು ಹೇಳಿದ್ದರು.

ಇನ್ನೊಬ್ಬ ಸಾಕ್ಷಿ ಫರೋಝ್ ಘಂಚಿ ಜೂನ್ 23, 2020 ರಂದು ಪಂಚಮಹಲ್ ವಲಯ ಐಜಿ ಅವರಿಗೆ ಪತ್ರ ಬರೆದು  ಅಪರಾಧಿಗಳು ಸುಳ್ಳು ಕಾರಣಗಳನ್ನು ನೀಡಿ ಜೈಲಿಗಿಂತ ಹೆಚ್ಚಾಗಿ ತಮ್ಮ ಊರುಗಳಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.

ಮನ್ಸೂರಿ ಮತ್ತು ಘಂಚಿ ಅವರಂತೆ ಇತರ ಸಾಕ್ಷಿಗಳೂ ದೂರು ದಾಖಲಿಸಿದ್ದರೂ ಒಂದು ಎಫ್‍ಐಆರ್ ಮಾತ್ರ ದಾಖಲಿಸಲಾಗಿತ್ತು.

ಜುಲೈ 6, 2020 ರಂದು ಅಪರಾಧಿಗಳ ಪೈಕಿ ಇಬ್ಬರ ವಿರುದ್ಧ  ಸಾಕ್ಷಿ ಸಬೇರಬೆನ್ ಪಟೇಲ್ ಎಂಬವರು ನೀದಿದ ದೂರಿನ ಆಧಾರದಲ್ಲಿ ಮಹಿಳೆಗೆ ಬೆದರಿಸಿದ ಪ್ರಕರಣ ದಾಖಲಿಸಲಾಗಿತ್ತು.

ಆದರೆ ಅಪರಾಧಿಗಳ ಪೈಕಿ ಒಬ್ಬಾತ ರಮೇಶ್ ಚಂದನ, ತಮ್ಮ ವಿರುದ್ಧದ ಆರೋಪ ನಿರಾಕರಿಸುತ್ತಾನೆ, ಸಾಕ್ಷಿಗಳು ನಮ್ಮನ್ನು ಒಂದು ಬೆದರಿಕೆ ಎಂದು ಪರಿಗಣಿಸಿದರೆ ನಾವೇನು ಮಾಡಲು ಸಾಧ್ಯ ಎಂದು ಆತ ಪ್ರಶ್ನಿಸುತ್ತಾನೆ.

ಘಟನೆ ನಡೆದ ಸಂದರ್ಭ ಬಿಲ್ಕಿಸ್ ಬಾನು ಮನೆಗೆ ಈತ ತೆರಳಿದ್ದ ಕಾರು ಆಗಿನ ಗ್ರಾಮ ಸರಪಂಚೆಯಾಗಿದ್ದ ಆತನ ಪತ್ನಿಯ ಹೆಸರಿನಲ್ಲಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X